Homeಕರ್ನಾಟಕಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ನಾಯಕರು, ಈಗಾಗಲೇ ಆತಂಕದಲ್ಲಿರುವ ವಿದ್ಯಾರ್ಥಿನಿಯರನ್ನು ಮತ್ತಷ್ಟು ಭಯ ಬೀಳಿಸಿ ವಿಕೃತಿ ಮೆರೆದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಿ ವಿಕೃತಿ ಮೆರೆಯಲಾಗಿದೆ.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದಾರೆ.

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೀಗ ಬಿಜೆಪಿ ನಾಯಕರು, ಬಿಜೆಪಿಯ ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಹಂಚಿಕೊಳ್ಳಲಾಗಿದೆ.

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

“ನಾನು ಇನ್ನು ಮುಂದೆ ನನ್ನ ಮುಖವನ್ನು ತೋರಿಸಲು ಸೂಕ್ತವೆನಿಸುವುದಿಲ್ಲ. ನಾನು ಹೇಗೆ ಕಾಣುತ್ತೇನೆ ಮತ್ತು ನನ್ನ ಮನೆ ಎಲ್ಲಿದೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಯಾರಾದರೂ ನನ್ನನ್ನು ಗುರಿಯಾಗಿಸಿಕೊಂಡರೆ ಏನು ಮಾಡುವುದು?” ಎಂದು ಆ ಹೆಣ್ಣುಮಗಳೊಬ್ಬಳು ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದಳು.

ಮತ್ತೊಬ್ಬ ವಿದ್ಯಾರ್ಥಿನಿ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದರು.

ವಿದ್ಯಾರ್ಥಿನಿ ಆಲಿಯಾ ಮಾತನಾಡಿ, “ಅವರು ಕೇಸರಿ ಶಾಲು ಧರಿಸುವುದನ್ನು ಬೆಂಬಲಿಸುವ ಮೂಲಕ ಹಿಜಾಬ್‌ಗಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಕೋಮುವಾದಿಕರಿಸಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವಂತೆ ಅವರು ಪ್ರೇರೇಪಿಸಿದರು. ಈಗ ಅವರು ಕಾಲೇಜು ಮಾತ್ರವಲ್ಲದೆ ನಮ್ಮ ಮನೆಗಳನ್ನೂ ಆತಂಕಕ್ಕೆ ತಳ್ಳಿದ್ದಾರೆ” ಎಂದು ಆರೋಪಿಸಿದ್ದರು.

“ನಾವು ಹತ್ತನೇ ತರಗತಿಯಲ್ಲಿ ಕಳಪೆ ಸಾಧನೆ ಮಾಡಿದ್ದೇವೆ ಎಂಬ ನಕಲಿ ಮೌಲ್ಯಮಾಪನವನ್ನು ಅವರು ಪ್ರಸಾರ ಮಾಡುತ್ತಿದ್ದಾರೆ. ನಾವು ಈಗ ತರಗತಿಯ ಕಲಿಕೆಯನ್ನು ಕಳೆದುಕೊಳ್ಳುವ ಬಗ್ಗೆ ಅವರು ಏಕೆ ಚಿಂತಿಸುತ್ತಿಲ್ಲ?” ಎಂದು ಬಹಳ ನೊಂದು ಕೇಳಿದ್ದರು ಆಲಿಯಾ.

“ನನ್ನ ತಂದೆ ಆಟೋ ಚಾಲಕ. ಮೊದಲು ಅವರು ನನ್ನನ್ನು ಶ್ರೀಮಂತರು ಎಂದು ದೂಷಿಸಿದರು. ನಾವು ಬಡವರಾಗಿದ್ದೇವೆ. ಇವರು ತೊಂದರೆ ಕೊಡುವವರು ಎಂದು ಹೇಳುತ್ತಿದ್ದಾರೆ” ಎಂದು ಆಲಿಯಾ ನೋವು ತೋಡಿಕೊಂಡಿದ್ದರು.

“ದುಡ್ಡು ತೆಗೆದುಕೊಂಡು ಹಿಜಾಬ್ ಧರಿಸಿ ಬರುವ ಹುಡುಗಿಯರೆಂದು ನಮ್ಮನ್ನು ಅವರು ದೂಷಿಸಿದ್ದಾರೆ. ನಾವು ನಮ್ಮ ಧಾರ್ಮಿಕ ನಂಬಿಕೆಗಾಗಿ ಹಿಜಾಬ್‌ ಧರಿಸುತ್ತೇವೆ ಹೊರತು, ಹಣಕ್ಕಾಗಿ ಅಲ್ಲ” ಎಂದಿದ್ದರು ಶಿಫಾ.

“ಈ ದ್ವೇಷ ಅಭಿಯಾನದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದರು. ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವಾಗ ಈ ವಿದ್ಯಾರ್ಥಿಗಳು ಕೆಲವು ದಿನಗಳಿಂದ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ.

“ನಾನು ಕಳೆದುಕೊಂಡ ಮೊದಲ ಸಂಗತಿಯೆಂದರೆ ನನ್ನ ಮಾನಸಿಕ ಶಾಂತಿ. ನಾವು ಮಾನಸಿಕವಾಗಿ ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದೇವೆ. ನಾನು ಸಮಯವನ್ನು ಕಳೆದುಕೊಂಡೆ, ಬಹಳಷ್ಟು ಮಾಧ್ಯಮಗಳಿಗೆ ಬೈಟ್‌ಗಳನ್ನು ನೀಡಿದೆ. ನನಗೂ ನರ್ವಸ್ ಆಗಿದೆ. ಇದು ನಿಜವಾಗಿಯೂ ಕಷ್ಟಕರವಾಗಿದೆ” ಎನ್ನುತ್ತಾರೆ ಆಲಿಯಾ. ಪ್ರತಿ ಬಾರಿ ಸಾರ್ವಜನಿಕವಾಗಿ ಮಾತನಾಡುವಾಗ, “ಹೆಚ್ಚಿನ ವಿವಾದವನ್ನು ತಪ್ಪಿಸಲು ತನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತಿದ್ದಾರೆ” ಎನ್ನುತ್ತಾರೆ ವಿದ್ಯಾರ್ಥಿನಿ. ಆದರೆ ಕಾಲೇಜಿನ ಡೇಟಾ ಸೋರಿಕೆಯಿಂದ ಈ ವಿದ್ಯಾರ್ಥಿನಿಯರ ಜೀವನ ಇನ್ನಷ್ಟು ಕಠಿಣವಾಗಿದೆ.

“ನನ್ನ ಮುಸ್ಲಿಮೇತರ ಸ್ನೇಹಿತರು ನಮ್ಮನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ” ಎಂದು ಶಿಫಾ ಹೇಳಿದ್ದರು. ಓದಲು ಕುಳಿತಾಗಲೆಲ್ಲ ಏಕಾಗ್ರತೆ ಸಾಧ್ಯವಾಗುತ್ತಿಲ್ಲ ಎಂದಿದ್ದರು ಶಿಫಾ. ಈಗ ಬಿಜೆಪಿ ನಾಯಕರ ವಿಕೃತಿಯಿಂದ ವಿದ್ಯಾರ್ಥಿನಿಯರು ಮತ್ತಷ್ಟು ಆತಂಕಪಡುವಂತಾಗಿದೆ.


ಇದನ್ನೂ ಓದಿರಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...