Homeಕರ್ನಾಟಕಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ನಾಯಕರು, ಈಗಾಗಲೇ ಆತಂಕದಲ್ಲಿರುವ ವಿದ್ಯಾರ್ಥಿನಿಯರನ್ನು ಮತ್ತಷ್ಟು ಭಯ ಬೀಳಿಸಿ ವಿಕೃತಿ ಮೆರೆದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಿ ವಿಕೃತಿ ಮೆರೆಯಲಾಗಿದೆ.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದಾರೆ.

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೀಗ ಬಿಜೆಪಿ ನಾಯಕರು, ಬಿಜೆಪಿಯ ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಹಂಚಿಕೊಳ್ಳಲಾಗಿದೆ.

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

“ನಾನು ಇನ್ನು ಮುಂದೆ ನನ್ನ ಮುಖವನ್ನು ತೋರಿಸಲು ಸೂಕ್ತವೆನಿಸುವುದಿಲ್ಲ. ನಾನು ಹೇಗೆ ಕಾಣುತ್ತೇನೆ ಮತ್ತು ನನ್ನ ಮನೆ ಎಲ್ಲಿದೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಯಾರಾದರೂ ನನ್ನನ್ನು ಗುರಿಯಾಗಿಸಿಕೊಂಡರೆ ಏನು ಮಾಡುವುದು?” ಎಂದು ಆ ಹೆಣ್ಣುಮಗಳೊಬ್ಬಳು ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದಳು.

ಮತ್ತೊಬ್ಬ ವಿದ್ಯಾರ್ಥಿನಿ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದರು.

ವಿದ್ಯಾರ್ಥಿನಿ ಆಲಿಯಾ ಮಾತನಾಡಿ, “ಅವರು ಕೇಸರಿ ಶಾಲು ಧರಿಸುವುದನ್ನು ಬೆಂಬಲಿಸುವ ಮೂಲಕ ಹಿಜಾಬ್‌ಗಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಕೋಮುವಾದಿಕರಿಸಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವಂತೆ ಅವರು ಪ್ರೇರೇಪಿಸಿದರು. ಈಗ ಅವರು ಕಾಲೇಜು ಮಾತ್ರವಲ್ಲದೆ ನಮ್ಮ ಮನೆಗಳನ್ನೂ ಆತಂಕಕ್ಕೆ ತಳ್ಳಿದ್ದಾರೆ” ಎಂದು ಆರೋಪಿಸಿದ್ದರು.

“ನಾವು ಹತ್ತನೇ ತರಗತಿಯಲ್ಲಿ ಕಳಪೆ ಸಾಧನೆ ಮಾಡಿದ್ದೇವೆ ಎಂಬ ನಕಲಿ ಮೌಲ್ಯಮಾಪನವನ್ನು ಅವರು ಪ್ರಸಾರ ಮಾಡುತ್ತಿದ್ದಾರೆ. ನಾವು ಈಗ ತರಗತಿಯ ಕಲಿಕೆಯನ್ನು ಕಳೆದುಕೊಳ್ಳುವ ಬಗ್ಗೆ ಅವರು ಏಕೆ ಚಿಂತಿಸುತ್ತಿಲ್ಲ?” ಎಂದು ಬಹಳ ನೊಂದು ಕೇಳಿದ್ದರು ಆಲಿಯಾ.

“ನನ್ನ ತಂದೆ ಆಟೋ ಚಾಲಕ. ಮೊದಲು ಅವರು ನನ್ನನ್ನು ಶ್ರೀಮಂತರು ಎಂದು ದೂಷಿಸಿದರು. ನಾವು ಬಡವರಾಗಿದ್ದೇವೆ. ಇವರು ತೊಂದರೆ ಕೊಡುವವರು ಎಂದು ಹೇಳುತ್ತಿದ್ದಾರೆ” ಎಂದು ಆಲಿಯಾ ನೋವು ತೋಡಿಕೊಂಡಿದ್ದರು.

“ದುಡ್ಡು ತೆಗೆದುಕೊಂಡು ಹಿಜಾಬ್ ಧರಿಸಿ ಬರುವ ಹುಡುಗಿಯರೆಂದು ನಮ್ಮನ್ನು ಅವರು ದೂಷಿಸಿದ್ದಾರೆ. ನಾವು ನಮ್ಮ ಧಾರ್ಮಿಕ ನಂಬಿಕೆಗಾಗಿ ಹಿಜಾಬ್‌ ಧರಿಸುತ್ತೇವೆ ಹೊರತು, ಹಣಕ್ಕಾಗಿ ಅಲ್ಲ” ಎಂದಿದ್ದರು ಶಿಫಾ.

“ಈ ದ್ವೇಷ ಅಭಿಯಾನದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದರು. ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವಾಗ ಈ ವಿದ್ಯಾರ್ಥಿಗಳು ಕೆಲವು ದಿನಗಳಿಂದ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ.

“ನಾನು ಕಳೆದುಕೊಂಡ ಮೊದಲ ಸಂಗತಿಯೆಂದರೆ ನನ್ನ ಮಾನಸಿಕ ಶಾಂತಿ. ನಾವು ಮಾನಸಿಕವಾಗಿ ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದೇವೆ. ನಾನು ಸಮಯವನ್ನು ಕಳೆದುಕೊಂಡೆ, ಬಹಳಷ್ಟು ಮಾಧ್ಯಮಗಳಿಗೆ ಬೈಟ್‌ಗಳನ್ನು ನೀಡಿದೆ. ನನಗೂ ನರ್ವಸ್ ಆಗಿದೆ. ಇದು ನಿಜವಾಗಿಯೂ ಕಷ್ಟಕರವಾಗಿದೆ” ಎನ್ನುತ್ತಾರೆ ಆಲಿಯಾ. ಪ್ರತಿ ಬಾರಿ ಸಾರ್ವಜನಿಕವಾಗಿ ಮಾತನಾಡುವಾಗ, “ಹೆಚ್ಚಿನ ವಿವಾದವನ್ನು ತಪ್ಪಿಸಲು ತನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತಿದ್ದಾರೆ” ಎನ್ನುತ್ತಾರೆ ವಿದ್ಯಾರ್ಥಿನಿ. ಆದರೆ ಕಾಲೇಜಿನ ಡೇಟಾ ಸೋರಿಕೆಯಿಂದ ಈ ವಿದ್ಯಾರ್ಥಿನಿಯರ ಜೀವನ ಇನ್ನಷ್ಟು ಕಠಿಣವಾಗಿದೆ.

“ನನ್ನ ಮುಸ್ಲಿಮೇತರ ಸ್ನೇಹಿತರು ನಮ್ಮನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ” ಎಂದು ಶಿಫಾ ಹೇಳಿದ್ದರು. ಓದಲು ಕುಳಿತಾಗಲೆಲ್ಲ ಏಕಾಗ್ರತೆ ಸಾಧ್ಯವಾಗುತ್ತಿಲ್ಲ ಎಂದಿದ್ದರು ಶಿಫಾ. ಈಗ ಬಿಜೆಪಿ ನಾಯಕರ ವಿಕೃತಿಯಿಂದ ವಿದ್ಯಾರ್ಥಿನಿಯರು ಮತ್ತಷ್ಟು ಆತಂಕಪಡುವಂತಾಗಿದೆ.


ಇದನ್ನೂ ಓದಿರಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...