Homeಕರ್ನಾಟಕಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ನಾಯಕರು, ಈಗಾಗಲೇ ಆತಂಕದಲ್ಲಿರುವ ವಿದ್ಯಾರ್ಥಿನಿಯರನ್ನು ಮತ್ತಷ್ಟು ಭಯ ಬೀಳಿಸಿ ವಿಕೃತಿ ಮೆರೆದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಿ ವಿಕೃತಿ ಮೆರೆಯಲಾಗಿದೆ.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದಾರೆ.

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೀಗ ಬಿಜೆಪಿ ನಾಯಕರು, ಬಿಜೆಪಿಯ ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಹಂಚಿಕೊಳ್ಳಲಾಗಿದೆ.

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

“ನಾನು ಇನ್ನು ಮುಂದೆ ನನ್ನ ಮುಖವನ್ನು ತೋರಿಸಲು ಸೂಕ್ತವೆನಿಸುವುದಿಲ್ಲ. ನಾನು ಹೇಗೆ ಕಾಣುತ್ತೇನೆ ಮತ್ತು ನನ್ನ ಮನೆ ಎಲ್ಲಿದೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಯಾರಾದರೂ ನನ್ನನ್ನು ಗುರಿಯಾಗಿಸಿಕೊಂಡರೆ ಏನು ಮಾಡುವುದು?” ಎಂದು ಆ ಹೆಣ್ಣುಮಗಳೊಬ್ಬಳು ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದಳು.

ಮತ್ತೊಬ್ಬ ವಿದ್ಯಾರ್ಥಿನಿ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದರು.

ವಿದ್ಯಾರ್ಥಿನಿ ಆಲಿಯಾ ಮಾತನಾಡಿ, “ಅವರು ಕೇಸರಿ ಶಾಲು ಧರಿಸುವುದನ್ನು ಬೆಂಬಲಿಸುವ ಮೂಲಕ ಹಿಜಾಬ್‌ಗಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಕೋಮುವಾದಿಕರಿಸಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವಂತೆ ಅವರು ಪ್ರೇರೇಪಿಸಿದರು. ಈಗ ಅವರು ಕಾಲೇಜು ಮಾತ್ರವಲ್ಲದೆ ನಮ್ಮ ಮನೆಗಳನ್ನೂ ಆತಂಕಕ್ಕೆ ತಳ್ಳಿದ್ದಾರೆ” ಎಂದು ಆರೋಪಿಸಿದ್ದರು.

“ನಾವು ಹತ್ತನೇ ತರಗತಿಯಲ್ಲಿ ಕಳಪೆ ಸಾಧನೆ ಮಾಡಿದ್ದೇವೆ ಎಂಬ ನಕಲಿ ಮೌಲ್ಯಮಾಪನವನ್ನು ಅವರು ಪ್ರಸಾರ ಮಾಡುತ್ತಿದ್ದಾರೆ. ನಾವು ಈಗ ತರಗತಿಯ ಕಲಿಕೆಯನ್ನು ಕಳೆದುಕೊಳ್ಳುವ ಬಗ್ಗೆ ಅವರು ಏಕೆ ಚಿಂತಿಸುತ್ತಿಲ್ಲ?” ಎಂದು ಬಹಳ ನೊಂದು ಕೇಳಿದ್ದರು ಆಲಿಯಾ.

“ನನ್ನ ತಂದೆ ಆಟೋ ಚಾಲಕ. ಮೊದಲು ಅವರು ನನ್ನನ್ನು ಶ್ರೀಮಂತರು ಎಂದು ದೂಷಿಸಿದರು. ನಾವು ಬಡವರಾಗಿದ್ದೇವೆ. ಇವರು ತೊಂದರೆ ಕೊಡುವವರು ಎಂದು ಹೇಳುತ್ತಿದ್ದಾರೆ” ಎಂದು ಆಲಿಯಾ ನೋವು ತೋಡಿಕೊಂಡಿದ್ದರು.

“ದುಡ್ಡು ತೆಗೆದುಕೊಂಡು ಹಿಜಾಬ್ ಧರಿಸಿ ಬರುವ ಹುಡುಗಿಯರೆಂದು ನಮ್ಮನ್ನು ಅವರು ದೂಷಿಸಿದ್ದಾರೆ. ನಾವು ನಮ್ಮ ಧಾರ್ಮಿಕ ನಂಬಿಕೆಗಾಗಿ ಹಿಜಾಬ್‌ ಧರಿಸುತ್ತೇವೆ ಹೊರತು, ಹಣಕ್ಕಾಗಿ ಅಲ್ಲ” ಎಂದಿದ್ದರು ಶಿಫಾ.

“ಈ ದ್ವೇಷ ಅಭಿಯಾನದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದರು. ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವಾಗ ಈ ವಿದ್ಯಾರ್ಥಿಗಳು ಕೆಲವು ದಿನಗಳಿಂದ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ.

“ನಾನು ಕಳೆದುಕೊಂಡ ಮೊದಲ ಸಂಗತಿಯೆಂದರೆ ನನ್ನ ಮಾನಸಿಕ ಶಾಂತಿ. ನಾವು ಮಾನಸಿಕವಾಗಿ ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದೇವೆ. ನಾನು ಸಮಯವನ್ನು ಕಳೆದುಕೊಂಡೆ, ಬಹಳಷ್ಟು ಮಾಧ್ಯಮಗಳಿಗೆ ಬೈಟ್‌ಗಳನ್ನು ನೀಡಿದೆ. ನನಗೂ ನರ್ವಸ್ ಆಗಿದೆ. ಇದು ನಿಜವಾಗಿಯೂ ಕಷ್ಟಕರವಾಗಿದೆ” ಎನ್ನುತ್ತಾರೆ ಆಲಿಯಾ. ಪ್ರತಿ ಬಾರಿ ಸಾರ್ವಜನಿಕವಾಗಿ ಮಾತನಾಡುವಾಗ, “ಹೆಚ್ಚಿನ ವಿವಾದವನ್ನು ತಪ್ಪಿಸಲು ತನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತಿದ್ದಾರೆ” ಎನ್ನುತ್ತಾರೆ ವಿದ್ಯಾರ್ಥಿನಿ. ಆದರೆ ಕಾಲೇಜಿನ ಡೇಟಾ ಸೋರಿಕೆಯಿಂದ ಈ ವಿದ್ಯಾರ್ಥಿನಿಯರ ಜೀವನ ಇನ್ನಷ್ಟು ಕಠಿಣವಾಗಿದೆ.

“ನನ್ನ ಮುಸ್ಲಿಮೇತರ ಸ್ನೇಹಿತರು ನಮ್ಮನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ” ಎಂದು ಶಿಫಾ ಹೇಳಿದ್ದರು. ಓದಲು ಕುಳಿತಾಗಲೆಲ್ಲ ಏಕಾಗ್ರತೆ ಸಾಧ್ಯವಾಗುತ್ತಿಲ್ಲ ಎಂದಿದ್ದರು ಶಿಫಾ. ಈಗ ಬಿಜೆಪಿ ನಾಯಕರ ವಿಕೃತಿಯಿಂದ ವಿದ್ಯಾರ್ಥಿನಿಯರು ಮತ್ತಷ್ಟು ಆತಂಕಪಡುವಂತಾಗಿದೆ.


ಇದನ್ನೂ ಓದಿರಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...