Homeಮುಖಪುಟಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

- Advertisement -
- Advertisement -

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಕನಿಷ್ಟ 8 ಕ್ಷೇತ್ರಗಳಲ್ಲಿ ಬಂಡಾಯ ಸಾರಿದ್ದಾರೆ. ಹಲವರು ಪಕ್ಷೇತರರಾಗಿ ಇನ್ನು ಕೆಲವರು ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಮನಸ್ಸು ಮಾಡಿದ್ದಾರೆ.

ಬೆಳಗಾವಿ ಉತ್ತರ – ಅನಿಲ್ ಬೆನಕೆ

ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಅನಿಲ್ ಬೆನಕೆ ಬೆಂಬಲಿಗರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2018 ರಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅನಿಲ್ ಎಸ್ ಬೆನಕೆ ಕಾಂಗ್ರೆಸ್‌ನ ಫೈರೋಜ್ ನೂರುದ್ದೀನ್ ಸೇಠ್‌ರವರನ್ನು 17,267 ಮತಗಳ ಅಂತರದಲ್ಲಿ ಸೋಲಿಸಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಬಿಜೆಪಿ ಡಾ.ರವಿ ಪಾಟೀಲ್‌ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ.

ಯಮಕನಮರಡಿ – ಮಾರುತಿ ಅಷ್ಟಗಿ

ಯಮಕನಮರಡಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾರುತಿ ಅಷ್ಟಗಿಯವರಿಗೆ ಟಿಕೆಟ್ ಕೈ ತಪ್ಪಿದೆ. ಅವರು ಬದಲು ಬಸವರಾಜ ಹುಂದ್ರಿಯವರಿಗೆ ಟಿಕೆಟ್ ಸಿಕ್ಕಿದೆ. ಇದರಿಂದ ಕುಪಿತಗೊಂಡಿರುವ ಮಾರುತಿ ಅಷ್ಟಗಿಯವರು ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅಥಣಿ – ಲಕ್ಷ್ಮಣ ಸವದಿ

ಅಥಣಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಅಲ್ಲಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಹಾಗಾಗಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ.

ರಾಮದುರ್ಗ – ಮಹಾದೇವಪ್ಪ ಯಾದವಾಡ

ರಾಮದುರ್ಗ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಾಸಕ ಮಹದೇವಪ್ಪ ಯಾದವಾಡ ಬೆಂಬಲಿಗರು ಬುಧವಾರ ರಾತ್ರಿ ಮತ್ತು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬುಧವಾರ ರಾತ್ರಿಯೇ ಮಹಾದೇವಪ್ಪ ಯಾದವಾಡ ಬೆಂಗಳೂರಿಗೆ ತೆರಳಿದ್ದಾರೆ.

ಮಹದೇವಪ್ಪ ಯಾದವಾಡರವರು ರಾಮದುರ್ಗದಲ್ಲಿ 1999 ರಲ್ಲಿ ಸೋಲು ಕಂಡಿದ್ದರು. ಆನಂತರ 2004 ಮತ್ತು 2018 ರಲ್ಲಿ ಗೆಲುವು ದಾಖಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಶೋಕ್ ಮಹದೇವಪ್ಪ ಪಟ್ಟಣ್ ವಿರುದ್ಧ 2,875 ಮತಗಳ ಅಂತರದಲ್ಲಿ ಜಯ ಕಂಡಿದ್ದರು. ಈಗ ಅವರ ಬದಲಿಗೆ ಬಿಜೆಪಿಯು ಚಿಕ್ಕರೇವಣ್ಣನವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಸೋತ ಅಭ್ಯರ್ಥಿ ಮಾಜಿ ಶಾಸಕ ಅಶೋಕ್ ಮಹದೇವಪ್ಪ ಪಟ್ಟಣ್ ರವರಿಗೆ ಟಿಕೆಟ್ ನೀಡಿದೆ.

ಬೆಳಗಾವಿ ಗ್ರಾಮೀಣ – ಸಂಜಯ ಪಾಟೀಲ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೇ ಹೊಸಬರಾಗಿರುವ ನಾಗೇಶ ಮನ್ನೋಳಕರಗೆ ಟಿಕೆಟ್ ಘೋಷಿಸಿದ್ದನ್ನು ಖಂಡಿಸಿ ಬಿಜೆಪಿಯ ಜಿಲ್ಲಾ ಹಾಗೂ ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ ಹೊರ ಹಾಕಿದರು. ಮಾಜಿ ಶಾಸಕ ಸಂಜಯ ಪಾಟೀಲರವರಿಗೆ ಇಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

ಬೈಲಹೊಂಗಲ – ಡಾ. ವಿಶ್ವನಾಥ ಪಾಟೀಲ್

ಡಾ. ವಿಶ್ವನಾಥ ಪಾಟೀಲ್ ಅವರು ಬೈಲಹೊಂಗಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಗದೀಶ್ ಮೆಟಗುಡ್ಡ ಕೂಡ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮತದಾನ ನಡೆಸಲಾಗಿತ್ತು. ವೀಕ್ಷಕರ ಸಮ್ಮುಖದಲ್ಲೇ ಈ ಮತದಾನ ನಡೆದಿತ್ತು. ಈ ವೇಳೆ 109 ಮತಗಳ ಪೈಕಿ 98 ಮತ ಡಾ. ವಿಶ್ವನಾಥ ಪಾಟೀಲ್ ರವರನ್ನು ಬಿಟ್ಟು ಜಗದೀಶ್‌ ಚನ್ನಪ್ಪ ಮೆಟಗುಡ್ಡರವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದನ್ನು ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 600ಕ್ಕೂ ಹೆಚ್ಚುಕಾರ್ಯಕರ್ತರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಖಾನಾಪುರ – ಡಾ.ಸೋನಾಲಿ ಸರನೋಬತ್‌

ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ನನಗೆ ತುಂಬ ಆಘಾತವಾಗಿದೆ. ನನ್ನೊಂದಿಗೆ ಇಷ್ಟು ದಿನ ಇದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರನೋಬತ್‌ ಹೇಳಿದರು. ಅದೇ ರೀತಿ ಮತ್ತೋರ್ವ ಟಿಕೆಟ್ ಆಕಾಂಕ್ಷಿತಯಾಗಿದ್ದ ಅರವಿಂದ್ ಪಾಟೀಲ್ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇಲ್ಲಿ ವಿಠ್ಠಲ್ ಹಲಗೇಕಾರ್‌ರವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಸವದತ್ತಿ ಎಲ್ಲಮ್ಮ – ಬಸವರಾಜ ಪಟ್ಟಣಶೆಟ್ಟಿ

ಟಿಕೆಟ್ ವಂಚಿತ ಬಸವರಾಜ ಪಟ್ಟಣಶೆಟ್ಟಿಯವರು ಸಹ ಪಕ್ಷೇತರರಾಗಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇಲ್ಲಿ ರತ್ನ ವಿಶ್ವನಾಥ್ ಮಾಮನಿಯವರಿಗೆ ಟಿಕೆಟ್ ಸಿಕ್ಕಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಇದುವರೆಗೂ ಬಂಡಾಯವೆದ್ದ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...