Homeಮುಖಪುಟಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

- Advertisement -
- Advertisement -

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಕನಿಷ್ಟ 8 ಕ್ಷೇತ್ರಗಳಲ್ಲಿ ಬಂಡಾಯ ಸಾರಿದ್ದಾರೆ. ಹಲವರು ಪಕ್ಷೇತರರಾಗಿ ಇನ್ನು ಕೆಲವರು ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಮನಸ್ಸು ಮಾಡಿದ್ದಾರೆ.

ಬೆಳಗಾವಿ ಉತ್ತರ – ಅನಿಲ್ ಬೆನಕೆ

ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಅನಿಲ್ ಬೆನಕೆ ಬೆಂಬಲಿಗರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2018 ರಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅನಿಲ್ ಎಸ್ ಬೆನಕೆ ಕಾಂಗ್ರೆಸ್‌ನ ಫೈರೋಜ್ ನೂರುದ್ದೀನ್ ಸೇಠ್‌ರವರನ್ನು 17,267 ಮತಗಳ ಅಂತರದಲ್ಲಿ ಸೋಲಿಸಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಬಿಜೆಪಿ ಡಾ.ರವಿ ಪಾಟೀಲ್‌ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ.

ಯಮಕನಮರಡಿ – ಮಾರುತಿ ಅಷ್ಟಗಿ

ಯಮಕನಮರಡಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾರುತಿ ಅಷ್ಟಗಿಯವರಿಗೆ ಟಿಕೆಟ್ ಕೈ ತಪ್ಪಿದೆ. ಅವರು ಬದಲು ಬಸವರಾಜ ಹುಂದ್ರಿಯವರಿಗೆ ಟಿಕೆಟ್ ಸಿಕ್ಕಿದೆ. ಇದರಿಂದ ಕುಪಿತಗೊಂಡಿರುವ ಮಾರುತಿ ಅಷ್ಟಗಿಯವರು ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅಥಣಿ – ಲಕ್ಷ್ಮಣ ಸವದಿ

ಅಥಣಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಅಲ್ಲಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಹಾಗಾಗಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ.

ರಾಮದುರ್ಗ – ಮಹಾದೇವಪ್ಪ ಯಾದವಾಡ

ರಾಮದುರ್ಗ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಾಸಕ ಮಹದೇವಪ್ಪ ಯಾದವಾಡ ಬೆಂಬಲಿಗರು ಬುಧವಾರ ರಾತ್ರಿ ಮತ್ತು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬುಧವಾರ ರಾತ್ರಿಯೇ ಮಹಾದೇವಪ್ಪ ಯಾದವಾಡ ಬೆಂಗಳೂರಿಗೆ ತೆರಳಿದ್ದಾರೆ.

ಮಹದೇವಪ್ಪ ಯಾದವಾಡರವರು ರಾಮದುರ್ಗದಲ್ಲಿ 1999 ರಲ್ಲಿ ಸೋಲು ಕಂಡಿದ್ದರು. ಆನಂತರ 2004 ಮತ್ತು 2018 ರಲ್ಲಿ ಗೆಲುವು ದಾಖಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಶೋಕ್ ಮಹದೇವಪ್ಪ ಪಟ್ಟಣ್ ವಿರುದ್ಧ 2,875 ಮತಗಳ ಅಂತರದಲ್ಲಿ ಜಯ ಕಂಡಿದ್ದರು. ಈಗ ಅವರ ಬದಲಿಗೆ ಬಿಜೆಪಿಯು ಚಿಕ್ಕರೇವಣ್ಣನವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಸೋತ ಅಭ್ಯರ್ಥಿ ಮಾಜಿ ಶಾಸಕ ಅಶೋಕ್ ಮಹದೇವಪ್ಪ ಪಟ್ಟಣ್ ರವರಿಗೆ ಟಿಕೆಟ್ ನೀಡಿದೆ.

ಬೆಳಗಾವಿ ಗ್ರಾಮೀಣ – ಸಂಜಯ ಪಾಟೀಲ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೇ ಹೊಸಬರಾಗಿರುವ ನಾಗೇಶ ಮನ್ನೋಳಕರಗೆ ಟಿಕೆಟ್ ಘೋಷಿಸಿದ್ದನ್ನು ಖಂಡಿಸಿ ಬಿಜೆಪಿಯ ಜಿಲ್ಲಾ ಹಾಗೂ ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ ಹೊರ ಹಾಕಿದರು. ಮಾಜಿ ಶಾಸಕ ಸಂಜಯ ಪಾಟೀಲರವರಿಗೆ ಇಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

ಬೈಲಹೊಂಗಲ – ಡಾ. ವಿಶ್ವನಾಥ ಪಾಟೀಲ್

ಡಾ. ವಿಶ್ವನಾಥ ಪಾಟೀಲ್ ಅವರು ಬೈಲಹೊಂಗಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಗದೀಶ್ ಮೆಟಗುಡ್ಡ ಕೂಡ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮತದಾನ ನಡೆಸಲಾಗಿತ್ತು. ವೀಕ್ಷಕರ ಸಮ್ಮುಖದಲ್ಲೇ ಈ ಮತದಾನ ನಡೆದಿತ್ತು. ಈ ವೇಳೆ 109 ಮತಗಳ ಪೈಕಿ 98 ಮತ ಡಾ. ವಿಶ್ವನಾಥ ಪಾಟೀಲ್ ರವರನ್ನು ಬಿಟ್ಟು ಜಗದೀಶ್‌ ಚನ್ನಪ್ಪ ಮೆಟಗುಡ್ಡರವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದನ್ನು ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 600ಕ್ಕೂ ಹೆಚ್ಚುಕಾರ್ಯಕರ್ತರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಖಾನಾಪುರ – ಡಾ.ಸೋನಾಲಿ ಸರನೋಬತ್‌

ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ನನಗೆ ತುಂಬ ಆಘಾತವಾಗಿದೆ. ನನ್ನೊಂದಿಗೆ ಇಷ್ಟು ದಿನ ಇದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರನೋಬತ್‌ ಹೇಳಿದರು. ಅದೇ ರೀತಿ ಮತ್ತೋರ್ವ ಟಿಕೆಟ್ ಆಕಾಂಕ್ಷಿತಯಾಗಿದ್ದ ಅರವಿಂದ್ ಪಾಟೀಲ್ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇಲ್ಲಿ ವಿಠ್ಠಲ್ ಹಲಗೇಕಾರ್‌ರವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಸವದತ್ತಿ ಎಲ್ಲಮ್ಮ – ಬಸವರಾಜ ಪಟ್ಟಣಶೆಟ್ಟಿ

ಟಿಕೆಟ್ ವಂಚಿತ ಬಸವರಾಜ ಪಟ್ಟಣಶೆಟ್ಟಿಯವರು ಸಹ ಪಕ್ಷೇತರರಾಗಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇಲ್ಲಿ ರತ್ನ ವಿಶ್ವನಾಥ್ ಮಾಮನಿಯವರಿಗೆ ಟಿಕೆಟ್ ಸಿಕ್ಕಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಇದುವರೆಗೂ ಬಂಡಾಯವೆದ್ದ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...