Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...