Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...