Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...