Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...