Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...