Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...