Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಕಕ್ಕಸು ಗುಂಡೀಲಿ ತರ್ಕಾರಿ ಬ್ಯೆಳ್ಕಂಡು ತಿನ್ಕಳಿ !

ಕಕ್ಕಸು ಗುಂಡೀಲಿ ತರ್ಕಾರಿ ಬ್ಯೆಳ್ಕಂಡು ತಿನ್ಕಳಿ !

- Advertisement -
- Advertisement -

ಎಲ್ಲರಿಗೂ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ ಅಂತ. ಬನ್ನಿ ಈ ವಾರದ ಆಘಾತಕಾರಿ ಸುದ್ದಿಗಳು ಏನೇನಿವೆ ಎಂದು ಒಂಚೂರು ಬಗ್ಗಿ ನೋಡೋಣ.

ಹಾರೆಸ್ಸೆಸ್‍ಗೆ ಬಂತು ಮುಸ್ಲಿಮರ ಮೇಲೆ ಯದ್ವಾತದ್ವಾ ಲವ್ವು: ಎಲೆಕ್ಷನ್ ಟೈಮಲ್ಲಿ ಶುರುವಾಯ್ತು ಕುರಾನ್ ಮೇಲೆ ಪ್ಯಾರು..
ದಿನದ ಇಪ್ಪತ್ನಾಲ್ಕೂ ತಾಸೂ ದೇಶದ ಮುಸ್ಲಿಮರ ಮೇಲೆ ಕತ್ತಿ, ಕೊಡಲಿ, ಮಚ್ಚು, ಬ್ಲೇಡು, ಗರಗಸ ಹೀಗೆ ಕೈಗೆ ಸಿಕ್ಕಿದ್ದೆಲ್ಲವನ್ನೂ ಮಸೆದು ಕೊಯಕೊಯ ಅನ್ನುವ ಹಾರೆಸ್ಸೆಸ್ ಎಂಬ ಬ್ರಿಟಿಷರಿಗೆ ಗುಲಾಮಗಿರಿ ಮಾಡುತ್ತಿದ್ದ ಗೂಢಚಾರಿಗಳ ಸಂಸ್ಥೆಗೆ ಇದ್ದಕ್ಕಿದ್ದಂತೆ ಮುಸ್ಲಿಮರ ಮೇಲೆ ಪ್ಯಾರ್‍ಗೆ ಆಗ್ಬುಟ್ಟೈತೆ ಎಂಬ ನಸುಗುನ್ನಿ ನ್ಯೂಸೊಂದು ನಮಗೆ ಲಭ್ಯವಾಗಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿರುವ ಈ ಸಂದರ್ಭದಲ್ಲಿ ಹಾರೆಸ್ಸೆಸ್ ಬುಡ್ಡಾಗಳು ಅಯೋಧ್ಯೆಯಲ್ಲಿ ಕುರಾನ್ ಪಠಣ ಮತ್ತು ನಮಾಜ್ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ. ಮುಸ್ಲಿಮರ ಓಟು ನಮಗೆ ಬೇಡವೇ ಬೇಡ ಎಂದು ಈಗ ಅಬ್ಬೇಪಾರಿ ಪರಿಸ್ಥಿತಿಗೆ ತಲುಪಿರುವ ಹಾರೆಸ್ಸೆಸ್.. ಇದೀಗ ಸಾಬರ ಗಡ್ಡಕ್ಕೆ ಕೊಬ್ರಿ ಎಣ್ಣೆ ಸವರಿ ‘ಗಡ್ಡ ಎಳೀತೀವಿ ಮಿಠಾಯಿ ಕೊಡಿ’ ಎಂದು ಗಡ್ಡ ನೀವಲು ಹೊರಟಿರುವುದು ನಿಜಕ್ಕೂ ಅವರು ತಲುಪಿರುವ ದರ್ವೇಸಿ ಗತಿಗೆ ಸಾಕ್ಷಿಯಾಗಿದೆಯೆಂದು ತಿಳಿದು ಬಂದಿದೆ.
.                                       *****
ಅಚ್ಛೇದಿನ್ ಕೊಡ್ತೀವಿ ಅಂತ ಜನರ ಓಟು ತಗೊಂಡ್ರು; ಟಾಯ್ಲೆಟ್ ಗೊಬ್ಬರದಲ್ಲಿ ಬೆಳೆದ ತರಕಾರಿ ತಿನ್ನಿ ಅಂದ್ರು
ಬಾಲಿವುಡ್ ಚಿತ್ರರಂಗದ ಒನ್ & ಓನ್ಲಿ ಕೆನಡಾ ಮೂಲದ ದೇಶಭಕ್ತ ನಟ ಅಕ್ಷಯ್‍ಕುಮಾರ್ ಕಡೆಯಿಂದ ಸುದ್ದಿಯೊಂದು ಎಗರಿ ಬಂದಿದೆ. ಅತ್ಯುತ್ತಮ ಗುಣಮಟ್ಟದ ತರಕಾರಿಗಳು ಮತ್ತು ಉತ್ಕøಷ್ಟ ರುಚಿಗಾಗಿ ನಿಮ್ಮ ಮನೆಯ ಕಕ್ಕಸ್ಸುಗುಂಡಿಯ ಗೊಬ್ಬರದಲ್ಲಿ ನೀವೇ ತರಕಾರಿ ಬೆಳೆದು ಚಪ್ಪರಿಸಿಕೊಂಡು ತಿನ್ನಿರೆಂದು ಅಕ್ಷಯ್ ಕುಮಾರ್ ಕೇಂದ್ರ ಸರ್ಕಾರದ ಜಾಹೀರಾತಿನಲ್ಲಿ ಹೇಳಿ ಕಾಸೆತ್ತಿಕೊಂಡು ಹೋಗಿದ್ದಾರೆ. ಅಧಿಕಾರಕ್ಕೆ ಬಂದ್ರೆ ನಿಮ್ಮ ಶರ್ಟು ಜೇಬಿನೊಳಕ್ಕೆ ಸ್ವರ್ಗವನ್ನೇ ಪ್ಯಾಕ್ ಮಾಡಿ ಇಡ್ತೀವಿ ಅಂತ ಬೊಗಳಿದ್ದ ದ್ವೇಷಭಕ್ತರ ಕಮಲ ಪಕ್ಷದವರು ಕೊನೆಗೆ ನಿಮ್ಮದೇ ಸ್ವಂತದೇ ಮಲದ ಗೊಬ್ಬರದಲ್ಲಿ ನಿಮಗಿಷ್ಟ ಬಂದ ತರಕಾರಿ ಬೆಳೆದುಕೊಂಡು ಚಪ್ಪರಿಸಿಕೊಂಡು ತಿನ್ನಿ ಎನ್ನುತ್ತಿದ್ದಾರೆ, ಇದಕ್ಕೆ ಅಕ್ಷಯ್‍ಕುಮಾರ್‍ನಂತಹ ಗುಲಾಮರ ಗುಲಾಮನು ಜಾಹಿರಾತಿನಲ್ಲಿ ನಟಿಸಿ ನಾನೂ ಮನುಷ್ಯರ ಮಲದಲ್ಲಿ ಬೆಳೆದ ತರಕಾರಿ ತಿನ್ನುತ್ತೇನೆಂದು ಎದೆ ತಟ್ಟಿಕೊಂಡು ಹೇಳಿರುವುದು ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾಗಿದೆ.
.                                       *****
ಹಾಫ್‍ಮೆಂಟ್ಲು ಆದಿತ್ಯನಾಥ ಬಿತ್ತು ಫುಲ್‍ಮೆಂಟ್ಲು ಡ್ರೀಮ್ ಪ್ಯಾಕೇಜು: 2000 ವರ್ಷದ ಹಿಂದೆ ಇಂಡಿಯಾಗು ಕೊರಿಯಾಗು ಆಯ್ತಂತೆ ಮ್ಯಾರೇಜು
ಯುಪಿ ರಾಜ್ಯದಲ್ಲಿ ಕಂಡಕಂಡ ಟಾಯ್ಲೆಟ್ಟುಗಳಿಗೆಲ್ಲ ಕೇಸರಿ ಬಣ್ಣ ಹೊಡೆದುಕೊಂಡು ಆರಾಮಾಗಿ ಓಡಾಡುತ್ತಿರುವ ಅಲ್ಲಿನ ಸನ್ಯಾಸಿ ಸಿಎಂ ಯೋಗಿ ಹಾದಿತ್ಯನಾಥ ಅಲಿಯಾಸ್ ಅಜಯ್‍ಸಿಂಗ್ ಭಿಷ್ಟ್ ಎಂಬ ತಲೆತಿಕ್ಕಲು ಐಲು ಗಿರಾಕಿಯ ತಲೆಯಲ್ಲಿರುವ ನಟ್ಟು ಬೋಲ್ಟುಗಳೆಲ್ಲ ತೊಪತೊಪನೆ ಉದುರಿ ಹೋಗಿರುವ ವರ್ತಮಾನ ಇದೀಗತಾನೇ ಲಭ್ಯವಾಗಿದೆ. ಜನರ ಬದುಕನ್ನು ಹಸನು ಮಾಡು ಪುಣ್ಯದ ಕೆಲಸವೊಂದನ್ನು ಬಿಟ್ಟು ಮಿಕ್ಕೆಲ್ಲ ಕೋತಿಚೇಷ್ಟೆ ಮಾಡಿಕೊಂಡು ತಿರುಗುತ್ತಿರುವ ಈ ಬೋಳುಮಂಡೆ ಸೋಂಬೇರಿ ಸಿಎಂ ಇತ್ತೀಚೆಗಷ್ಟೇ ಒಂದು ಬ್ರೈನ್‍ಲೆಸ್ ಹೇಳಿಕೆಯೊಂದನ್ನು ಕೊಟ್ಟು ನಗೆಪಾಟಲಿಗೆ ಈಡಾಗಿದೆ. ಅಯೋಧ್ಯೆಯ ರಾಜಕುಮಾರಿಯನ್ನು 2 ಸಾವಿರ ವರ್ಷಗಳ ಹಿಂದೆ ದಕ್ಷಿಣ ಕೊರಿಯಾದ ರಾಜಕುಮಾರನಿಗೆ ಕೊಟ್ಟು ಮದುವೆ ಮಾಡಲಾಗಿತ್ತು ಎಂದಿದ್ದಾನೆÀ ಯುಪಿ ರಾಜ್ಯದ ಸನ್ಯಾಸಿ ಸಿಎಂ, ಈ ಬಗ್ಗೆ ಅಧಿಕೃತ ಮಾಹಿತಿ ಎಲ್ಲಿಂದ ಲಭಿಸಿತು? ಆವಾಗ ನೀವು ಯಾವ ಕುದುರೆಲಾಯದಲ್ಲಿ ಲಂಗೋಟಿ ಹಾಕ್ಕೊಂಡು ಸೆಗಣಿ ಎತ್ತುತ್ತ ಇದನ್ನೆಲ್ಲ ಗಮನಿಸಿದಿರಿ.. ಎಂಬ ಪತ್ರಕರ್ತರ ಪ್ರಶ್ನೆಗೆ ತೀವ್ರವಾಗಿ ಬೇಜಾರು ಮಾಡಿಕೊಂಡ ಈ ಕೆಪರಗೇಡಿಯು, ಪ್ರಶ್ನೆ ಕೇಳಿದ ಟಿವಿ ಚಾನೆಲ್‍ನ ಮೈಕನ್ನು ಕೈಗೆತ್ತಿಕೊಂಡು ತನ್ನ ಬಾಣಲಿತಲೆಗೆ ¥sಟ್ ಫಟ್ ಫಟ್ ಎಂದು ಹೊಡೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿಲ್ಲವೆಂದು ತಿಳಿದುಬಂದಿದೆ.
.                                       *****
ಸನಾತನಿ ಸಂಘಿ-ಮಂಕಿಗಳ ಭ್ರಮೆಯ ರೋಗವಾಯ್ತು ವಿಪರೀತ: ಲಂಗೋಟಿಗೆ ಬಿದ್ದ ಬೆಂಕಿಗೆ ಮಾಡ್ತಿದ್ದಾರೆ ತೋಂ ತಕಿಟ ತಕಧಿಮಿತ
ಇತ್ತೀಚೆಗೆ ಯಾರ ಕಣ್ಣಿಗೂ ಕಾಣದ್ದೆಲ್ಲ ಭ್ರಮೆಯಲ್ಲೇ ನುಗುರುಕೊಂಡು ಓಡಾಡುವ ಸಂಘಿ ಮಂಕಿಗಳಿಗೆ ಕಾಣುತ್ತಿರುವುದು ಆಶ್ಚರ್ಯದ ವಿಷಯವೇ ಸರಿ. ದನದ ಮೂತ್ರದಲ್ಲಿ ಜಗತ್ತಿನ ಎಲ್ಲ ಕಾಯಿಲೆಗಳಿಗೂ ಔಷಧಿ ಕಂಡುಹಿಡಿದ ಈ ಇಂಕಿ ಮಂಕಿ ಪಾಂಕಿಗಳು ಇದೀಗ ತಮ್ಮ ಎಂಜಲುಕಾಸಿನ ದೊರೆ ಅಂಬಾನಿಯು ಇನ್ನೂ ಸ್ಥಾಪಿಸದೇ ಇರುವ ಸಂಸ್ಥೆಯೊಂದು ಕಂಡುಬಿಟ್ಟಿದೆಯಂತೆ. ‘ಜಿಯೋ ಇನ್ಸ್‍ಟಿಟ್ಯೂಟ್’ ಎಂಬ ಅಸ್ತಿತ್ವದಲ್ಲೇ ಇಲ್ಲದ ಅಂಬಾನಿಯ ಸಂಸ್ಥೆಯು ದೇಶದ ಅತ್ಯುತ್ತಮ ಸಂಸ್ಥೆಗಳಲ್ಲೊಂದು ಎಂದು ತಮ್ಮ ಗುಲಾಮಿ ಸರ್ಕಾರದ ಮೂಲದ ಘೋಷಿಸಿರುವ ಈ ಸಾಂಪ್ ಸಂಘಿಗಳು ಈ ಮೂಲಕ ತಾವು ಹ್ಯಾಲೂಸಿನೇಷನ್ ರೋಗದಿಂದ ನರಳಾಡಿ ಹುಳ ಬಿದ್ದು ಒದ್ದಾಡುತ್ತಿದ್ದೇವೆಂದು ಘಂಟಾಘೋಷವಾಗಿ ಸಾರಿಬಿಟ್ಟಿದ್ದಾರೆÉ. ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಸಂಘಿಗಳ ಮಾನಸಿಕ ಅಸ್ವಸ್ಥತೆಯ ಮೇಲೆ ಮುಗಿಬಿದ್ದ ಅಷ್ಟಿಷ್ಟು ಮಾಧ್ಯಮಗಳು ಸಂಘಿಗಳ ಲಂಗೋಟಿಗೆ ಸೀಮೆಎಣ್ಣೆ ಎರಚಿ ಕಡ್ಡಿ ಗೀರಿದ್ದಾರೆಂದು, ಉರಿ ತಡೆಯಲಾಗದೆ ಸಂಘಿ-ಮಂಕಿಗಳು ಲಡಕಾಸಿ ನೃತ್ಯ ಮಾಡುತ್ತ ಉರಿ ಶಮನ ಮಾಡಿಕೊಳ್ಳುತ್ತಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.
.                                       *****

ಹೆಡ್ಡಪ್ಪನ ಮರೆಗುಳಿ ಅಧ್ವಾನಗಳಿಗೆ ಸ್ಕೋಪಕ್ಕ ಆದ್ರು ಕಕ್ಕಾಬಿಕ್ಕಿ: ಇವರಿಗೆ ಕೊಡೋದು ಅವ್ರಿಗೆ, ಅವ್ರಿಗೆ ಕೊಡೋದು ಇವ್ರಿಗೆ..
ಹತ್ತನ್ನೆರಡು ವರ್ಷಗಳ ಹಿಂದೆ 38 ಎಮ್ಮೆಲ್ಲೆಗಳನ್ನು ಹೊಂದಿದ್ದ ಕುಮಾರಣ್ಣನನ್ನು ಸಿಎಂ ಮಾಡಿ ಅಪ್ಪಿ ಮುದ್ದಾಡಿ ಲೊಚಲೊಚನೆ ಕಿಸ್ಸು ಕೊಟ್ಟಿದ್ದ ಕರ್ನಾಟಕ ಕಮಲ ಪಕ್ಷದವರು ಇದೀಗ, ಅದೇ ರೀತಿ ಕಾಂಗ್ರೆಸ್ ಕುಮಾರಣ್ಣನನ್ನು ಸಿಎಂ ಮಾಡಿರುವುದಕ್ಕೆ ಚಡ್ಡಿಯೊಳಗೆ ಓತಿಕ್ಯಾತ ಹೊಕ್ಕಂತೆ ಆಡುತ್ತಿರುವುದು ಬಯಲಾಗಿದೆ. ಸತ್ಯಹರಿಶ್ಚಂದ್ರ ದೇವರಪಾದ ಸೇರಿದ ಮೇಲೆ ಮತ್ತೆ ಶಿಕಾರಿಪುರದಲ್ಲಿ ರೈಸ್ ಮಿಲ್ ರೈಟರಾಗಿ ಮರುಜನ್ಮ ಪಡೆದು ಹುಟ್ಟಿರೋದೇ ನಾನು ಎಂಬಂತೆ ನೈತಿಕತೆಯ ಭಾಷಣ ಬೊಗಳುತ್ತಿರುವ ಹೆಡ್ಯೂರಪ್ಪನಿಗೆ ತನ್ನ ಹಳೆಯ ಬ್ಲಾಕಂಡ್ ವೈಟ್ ಡ್ರಾಮಾಗಳು ನೆನಪಾಗದಿರುವುದಕ್ಕೆ ನಿವೃತ್ತ ಕುಮಾರಿ ಸ್ಕೋಪಕ್ಕನಿಗೆ ಶ್ಯಾನೆ ಬೇಜಾರಾಗಿದೆಯಂತೆ. ಹಳೆಯದೆಲ್ಲವನ್ನೂ ಮರೆತು ಇನ್ನೇನೋ ಹೊಸ ಅಧ್ವಾನ ಮಾಡಿ ಮಾಡಿ ಎಲ್ರಿಂದಲೂ ಬೈಸಿಕೊಳ್ಳುವ ಹೆಡ್ಯೂರಪ್ಪ.. ಮನೆಯಲ್ಲಿ ಡ್ರೈವರನ್ನು ಸ್ಕೋಪÀಕ್ಕನೆಂದೂ, ಸ್ಕೋಪಕ್ಕನನ್ನು ಡ್ರೈವರೆಂದು ಕನ್ ಫ್ಯೂಸು ಮಾಡಿಕೊಂಡು ಇವರಿಗೆ ಕೊಡೋದನ್ನ ಅವರಿಗೆ ಕೊಟ್ಟು, ಅವರಿಗೆ ಕೊಡೋದನ್ನ ಇವರಿಗೆ ಕೊಟ್ಟು ಎಡವಟ್ಟಿನ ಮೇಲೆ ಎಡವಟ್ಟು ಮಾಡ್ತಿರುವುದು ಸ್ಕೋಪಕ್ಕನ ಚಿಂತೆಗೆ ಕಾರಣವಾಗಿದೆಯಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಮುಂದಿನವಾರ ಇಂಥಹದೇ ಅನಾಹುತಕಾರಿ ಸುದ್ದಿಗಳೊಡನೆ ನಿಮಗೆ ಸಿಗುತ್ತೇನೆ. ಅಲ್ಲೀತನಕ ಸಲಾಂ ನಮಸ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...