Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಕಕ್ಕಸು ಗುಂಡೀಲಿ ತರ್ಕಾರಿ ಬ್ಯೆಳ್ಕಂಡು ತಿನ್ಕಳಿ !

ಕಕ್ಕಸು ಗುಂಡೀಲಿ ತರ್ಕಾರಿ ಬ್ಯೆಳ್ಕಂಡು ತಿನ್ಕಳಿ !

- Advertisement -
- Advertisement -

ಎಲ್ಲರಿಗೂ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ ಅಂತ. ಬನ್ನಿ ಈ ವಾರದ ಆಘಾತಕಾರಿ ಸುದ್ದಿಗಳು ಏನೇನಿವೆ ಎಂದು ಒಂಚೂರು ಬಗ್ಗಿ ನೋಡೋಣ.

ಹಾರೆಸ್ಸೆಸ್‍ಗೆ ಬಂತು ಮುಸ್ಲಿಮರ ಮೇಲೆ ಯದ್ವಾತದ್ವಾ ಲವ್ವು: ಎಲೆಕ್ಷನ್ ಟೈಮಲ್ಲಿ ಶುರುವಾಯ್ತು ಕುರಾನ್ ಮೇಲೆ ಪ್ಯಾರು..
ದಿನದ ಇಪ್ಪತ್ನಾಲ್ಕೂ ತಾಸೂ ದೇಶದ ಮುಸ್ಲಿಮರ ಮೇಲೆ ಕತ್ತಿ, ಕೊಡಲಿ, ಮಚ್ಚು, ಬ್ಲೇಡು, ಗರಗಸ ಹೀಗೆ ಕೈಗೆ ಸಿಕ್ಕಿದ್ದೆಲ್ಲವನ್ನೂ ಮಸೆದು ಕೊಯಕೊಯ ಅನ್ನುವ ಹಾರೆಸ್ಸೆಸ್ ಎಂಬ ಬ್ರಿಟಿಷರಿಗೆ ಗುಲಾಮಗಿರಿ ಮಾಡುತ್ತಿದ್ದ ಗೂಢಚಾರಿಗಳ ಸಂಸ್ಥೆಗೆ ಇದ್ದಕ್ಕಿದ್ದಂತೆ ಮುಸ್ಲಿಮರ ಮೇಲೆ ಪ್ಯಾರ್‍ಗೆ ಆಗ್ಬುಟ್ಟೈತೆ ಎಂಬ ನಸುಗುನ್ನಿ ನ್ಯೂಸೊಂದು ನಮಗೆ ಲಭ್ಯವಾಗಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿರುವ ಈ ಸಂದರ್ಭದಲ್ಲಿ ಹಾರೆಸ್ಸೆಸ್ ಬುಡ್ಡಾಗಳು ಅಯೋಧ್ಯೆಯಲ್ಲಿ ಕುರಾನ್ ಪಠಣ ಮತ್ತು ನಮಾಜ್ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ. ಮುಸ್ಲಿಮರ ಓಟು ನಮಗೆ ಬೇಡವೇ ಬೇಡ ಎಂದು ಈಗ ಅಬ್ಬೇಪಾರಿ ಪರಿಸ್ಥಿತಿಗೆ ತಲುಪಿರುವ ಹಾರೆಸ್ಸೆಸ್.. ಇದೀಗ ಸಾಬರ ಗಡ್ಡಕ್ಕೆ ಕೊಬ್ರಿ ಎಣ್ಣೆ ಸವರಿ ‘ಗಡ್ಡ ಎಳೀತೀವಿ ಮಿಠಾಯಿ ಕೊಡಿ’ ಎಂದು ಗಡ್ಡ ನೀವಲು ಹೊರಟಿರುವುದು ನಿಜಕ್ಕೂ ಅವರು ತಲುಪಿರುವ ದರ್ವೇಸಿ ಗತಿಗೆ ಸಾಕ್ಷಿಯಾಗಿದೆಯೆಂದು ತಿಳಿದು ಬಂದಿದೆ.
.                                       *****
ಅಚ್ಛೇದಿನ್ ಕೊಡ್ತೀವಿ ಅಂತ ಜನರ ಓಟು ತಗೊಂಡ್ರು; ಟಾಯ್ಲೆಟ್ ಗೊಬ್ಬರದಲ್ಲಿ ಬೆಳೆದ ತರಕಾರಿ ತಿನ್ನಿ ಅಂದ್ರು
ಬಾಲಿವುಡ್ ಚಿತ್ರರಂಗದ ಒನ್ & ಓನ್ಲಿ ಕೆನಡಾ ಮೂಲದ ದೇಶಭಕ್ತ ನಟ ಅಕ್ಷಯ್‍ಕುಮಾರ್ ಕಡೆಯಿಂದ ಸುದ್ದಿಯೊಂದು ಎಗರಿ ಬಂದಿದೆ. ಅತ್ಯುತ್ತಮ ಗುಣಮಟ್ಟದ ತರಕಾರಿಗಳು ಮತ್ತು ಉತ್ಕøಷ್ಟ ರುಚಿಗಾಗಿ ನಿಮ್ಮ ಮನೆಯ ಕಕ್ಕಸ್ಸುಗುಂಡಿಯ ಗೊಬ್ಬರದಲ್ಲಿ ನೀವೇ ತರಕಾರಿ ಬೆಳೆದು ಚಪ್ಪರಿಸಿಕೊಂಡು ತಿನ್ನಿರೆಂದು ಅಕ್ಷಯ್ ಕುಮಾರ್ ಕೇಂದ್ರ ಸರ್ಕಾರದ ಜಾಹೀರಾತಿನಲ್ಲಿ ಹೇಳಿ ಕಾಸೆತ್ತಿಕೊಂಡು ಹೋಗಿದ್ದಾರೆ. ಅಧಿಕಾರಕ್ಕೆ ಬಂದ್ರೆ ನಿಮ್ಮ ಶರ್ಟು ಜೇಬಿನೊಳಕ್ಕೆ ಸ್ವರ್ಗವನ್ನೇ ಪ್ಯಾಕ್ ಮಾಡಿ ಇಡ್ತೀವಿ ಅಂತ ಬೊಗಳಿದ್ದ ದ್ವೇಷಭಕ್ತರ ಕಮಲ ಪಕ್ಷದವರು ಕೊನೆಗೆ ನಿಮ್ಮದೇ ಸ್ವಂತದೇ ಮಲದ ಗೊಬ್ಬರದಲ್ಲಿ ನಿಮಗಿಷ್ಟ ಬಂದ ತರಕಾರಿ ಬೆಳೆದುಕೊಂಡು ಚಪ್ಪರಿಸಿಕೊಂಡು ತಿನ್ನಿ ಎನ್ನುತ್ತಿದ್ದಾರೆ, ಇದಕ್ಕೆ ಅಕ್ಷಯ್‍ಕುಮಾರ್‍ನಂತಹ ಗುಲಾಮರ ಗುಲಾಮನು ಜಾಹಿರಾತಿನಲ್ಲಿ ನಟಿಸಿ ನಾನೂ ಮನುಷ್ಯರ ಮಲದಲ್ಲಿ ಬೆಳೆದ ತರಕಾರಿ ತಿನ್ನುತ್ತೇನೆಂದು ಎದೆ ತಟ್ಟಿಕೊಂಡು ಹೇಳಿರುವುದು ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾಗಿದೆ.
.                                       *****
ಹಾಫ್‍ಮೆಂಟ್ಲು ಆದಿತ್ಯನಾಥ ಬಿತ್ತು ಫುಲ್‍ಮೆಂಟ್ಲು ಡ್ರೀಮ್ ಪ್ಯಾಕೇಜು: 2000 ವರ್ಷದ ಹಿಂದೆ ಇಂಡಿಯಾಗು ಕೊರಿಯಾಗು ಆಯ್ತಂತೆ ಮ್ಯಾರೇಜು
ಯುಪಿ ರಾಜ್ಯದಲ್ಲಿ ಕಂಡಕಂಡ ಟಾಯ್ಲೆಟ್ಟುಗಳಿಗೆಲ್ಲ ಕೇಸರಿ ಬಣ್ಣ ಹೊಡೆದುಕೊಂಡು ಆರಾಮಾಗಿ ಓಡಾಡುತ್ತಿರುವ ಅಲ್ಲಿನ ಸನ್ಯಾಸಿ ಸಿಎಂ ಯೋಗಿ ಹಾದಿತ್ಯನಾಥ ಅಲಿಯಾಸ್ ಅಜಯ್‍ಸಿಂಗ್ ಭಿಷ್ಟ್ ಎಂಬ ತಲೆತಿಕ್ಕಲು ಐಲು ಗಿರಾಕಿಯ ತಲೆಯಲ್ಲಿರುವ ನಟ್ಟು ಬೋಲ್ಟುಗಳೆಲ್ಲ ತೊಪತೊಪನೆ ಉದುರಿ ಹೋಗಿರುವ ವರ್ತಮಾನ ಇದೀಗತಾನೇ ಲಭ್ಯವಾಗಿದೆ. ಜನರ ಬದುಕನ್ನು ಹಸನು ಮಾಡು ಪುಣ್ಯದ ಕೆಲಸವೊಂದನ್ನು ಬಿಟ್ಟು ಮಿಕ್ಕೆಲ್ಲ ಕೋತಿಚೇಷ್ಟೆ ಮಾಡಿಕೊಂಡು ತಿರುಗುತ್ತಿರುವ ಈ ಬೋಳುಮಂಡೆ ಸೋಂಬೇರಿ ಸಿಎಂ ಇತ್ತೀಚೆಗಷ್ಟೇ ಒಂದು ಬ್ರೈನ್‍ಲೆಸ್ ಹೇಳಿಕೆಯೊಂದನ್ನು ಕೊಟ್ಟು ನಗೆಪಾಟಲಿಗೆ ಈಡಾಗಿದೆ. ಅಯೋಧ್ಯೆಯ ರಾಜಕುಮಾರಿಯನ್ನು 2 ಸಾವಿರ ವರ್ಷಗಳ ಹಿಂದೆ ದಕ್ಷಿಣ ಕೊರಿಯಾದ ರಾಜಕುಮಾರನಿಗೆ ಕೊಟ್ಟು ಮದುವೆ ಮಾಡಲಾಗಿತ್ತು ಎಂದಿದ್ದಾನೆÀ ಯುಪಿ ರಾಜ್ಯದ ಸನ್ಯಾಸಿ ಸಿಎಂ, ಈ ಬಗ್ಗೆ ಅಧಿಕೃತ ಮಾಹಿತಿ ಎಲ್ಲಿಂದ ಲಭಿಸಿತು? ಆವಾಗ ನೀವು ಯಾವ ಕುದುರೆಲಾಯದಲ್ಲಿ ಲಂಗೋಟಿ ಹಾಕ್ಕೊಂಡು ಸೆಗಣಿ ಎತ್ತುತ್ತ ಇದನ್ನೆಲ್ಲ ಗಮನಿಸಿದಿರಿ.. ಎಂಬ ಪತ್ರಕರ್ತರ ಪ್ರಶ್ನೆಗೆ ತೀವ್ರವಾಗಿ ಬೇಜಾರು ಮಾಡಿಕೊಂಡ ಈ ಕೆಪರಗೇಡಿಯು, ಪ್ರಶ್ನೆ ಕೇಳಿದ ಟಿವಿ ಚಾನೆಲ್‍ನ ಮೈಕನ್ನು ಕೈಗೆತ್ತಿಕೊಂಡು ತನ್ನ ಬಾಣಲಿತಲೆಗೆ ¥sಟ್ ಫಟ್ ಫಟ್ ಎಂದು ಹೊಡೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿಲ್ಲವೆಂದು ತಿಳಿದುಬಂದಿದೆ.
.                                       *****
ಸನಾತನಿ ಸಂಘಿ-ಮಂಕಿಗಳ ಭ್ರಮೆಯ ರೋಗವಾಯ್ತು ವಿಪರೀತ: ಲಂಗೋಟಿಗೆ ಬಿದ್ದ ಬೆಂಕಿಗೆ ಮಾಡ್ತಿದ್ದಾರೆ ತೋಂ ತಕಿಟ ತಕಧಿಮಿತ
ಇತ್ತೀಚೆಗೆ ಯಾರ ಕಣ್ಣಿಗೂ ಕಾಣದ್ದೆಲ್ಲ ಭ್ರಮೆಯಲ್ಲೇ ನುಗುರುಕೊಂಡು ಓಡಾಡುವ ಸಂಘಿ ಮಂಕಿಗಳಿಗೆ ಕಾಣುತ್ತಿರುವುದು ಆಶ್ಚರ್ಯದ ವಿಷಯವೇ ಸರಿ. ದನದ ಮೂತ್ರದಲ್ಲಿ ಜಗತ್ತಿನ ಎಲ್ಲ ಕಾಯಿಲೆಗಳಿಗೂ ಔಷಧಿ ಕಂಡುಹಿಡಿದ ಈ ಇಂಕಿ ಮಂಕಿ ಪಾಂಕಿಗಳು ಇದೀಗ ತಮ್ಮ ಎಂಜಲುಕಾಸಿನ ದೊರೆ ಅಂಬಾನಿಯು ಇನ್ನೂ ಸ್ಥಾಪಿಸದೇ ಇರುವ ಸಂಸ್ಥೆಯೊಂದು ಕಂಡುಬಿಟ್ಟಿದೆಯಂತೆ. ‘ಜಿಯೋ ಇನ್ಸ್‍ಟಿಟ್ಯೂಟ್’ ಎಂಬ ಅಸ್ತಿತ್ವದಲ್ಲೇ ಇಲ್ಲದ ಅಂಬಾನಿಯ ಸಂಸ್ಥೆಯು ದೇಶದ ಅತ್ಯುತ್ತಮ ಸಂಸ್ಥೆಗಳಲ್ಲೊಂದು ಎಂದು ತಮ್ಮ ಗುಲಾಮಿ ಸರ್ಕಾರದ ಮೂಲದ ಘೋಷಿಸಿರುವ ಈ ಸಾಂಪ್ ಸಂಘಿಗಳು ಈ ಮೂಲಕ ತಾವು ಹ್ಯಾಲೂಸಿನೇಷನ್ ರೋಗದಿಂದ ನರಳಾಡಿ ಹುಳ ಬಿದ್ದು ಒದ್ದಾಡುತ್ತಿದ್ದೇವೆಂದು ಘಂಟಾಘೋಷವಾಗಿ ಸಾರಿಬಿಟ್ಟಿದ್ದಾರೆÉ. ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಸಂಘಿಗಳ ಮಾನಸಿಕ ಅಸ್ವಸ್ಥತೆಯ ಮೇಲೆ ಮುಗಿಬಿದ್ದ ಅಷ್ಟಿಷ್ಟು ಮಾಧ್ಯಮಗಳು ಸಂಘಿಗಳ ಲಂಗೋಟಿಗೆ ಸೀಮೆಎಣ್ಣೆ ಎರಚಿ ಕಡ್ಡಿ ಗೀರಿದ್ದಾರೆಂದು, ಉರಿ ತಡೆಯಲಾಗದೆ ಸಂಘಿ-ಮಂಕಿಗಳು ಲಡಕಾಸಿ ನೃತ್ಯ ಮಾಡುತ್ತ ಉರಿ ಶಮನ ಮಾಡಿಕೊಳ್ಳುತ್ತಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.
.                                       *****

ಹೆಡ್ಡಪ್ಪನ ಮರೆಗುಳಿ ಅಧ್ವಾನಗಳಿಗೆ ಸ್ಕೋಪಕ್ಕ ಆದ್ರು ಕಕ್ಕಾಬಿಕ್ಕಿ: ಇವರಿಗೆ ಕೊಡೋದು ಅವ್ರಿಗೆ, ಅವ್ರಿಗೆ ಕೊಡೋದು ಇವ್ರಿಗೆ..
ಹತ್ತನ್ನೆರಡು ವರ್ಷಗಳ ಹಿಂದೆ 38 ಎಮ್ಮೆಲ್ಲೆಗಳನ್ನು ಹೊಂದಿದ್ದ ಕುಮಾರಣ್ಣನನ್ನು ಸಿಎಂ ಮಾಡಿ ಅಪ್ಪಿ ಮುದ್ದಾಡಿ ಲೊಚಲೊಚನೆ ಕಿಸ್ಸು ಕೊಟ್ಟಿದ್ದ ಕರ್ನಾಟಕ ಕಮಲ ಪಕ್ಷದವರು ಇದೀಗ, ಅದೇ ರೀತಿ ಕಾಂಗ್ರೆಸ್ ಕುಮಾರಣ್ಣನನ್ನು ಸಿಎಂ ಮಾಡಿರುವುದಕ್ಕೆ ಚಡ್ಡಿಯೊಳಗೆ ಓತಿಕ್ಯಾತ ಹೊಕ್ಕಂತೆ ಆಡುತ್ತಿರುವುದು ಬಯಲಾಗಿದೆ. ಸತ್ಯಹರಿಶ್ಚಂದ್ರ ದೇವರಪಾದ ಸೇರಿದ ಮೇಲೆ ಮತ್ತೆ ಶಿಕಾರಿಪುರದಲ್ಲಿ ರೈಸ್ ಮಿಲ್ ರೈಟರಾಗಿ ಮರುಜನ್ಮ ಪಡೆದು ಹುಟ್ಟಿರೋದೇ ನಾನು ಎಂಬಂತೆ ನೈತಿಕತೆಯ ಭಾಷಣ ಬೊಗಳುತ್ತಿರುವ ಹೆಡ್ಯೂರಪ್ಪನಿಗೆ ತನ್ನ ಹಳೆಯ ಬ್ಲಾಕಂಡ್ ವೈಟ್ ಡ್ರಾಮಾಗಳು ನೆನಪಾಗದಿರುವುದಕ್ಕೆ ನಿವೃತ್ತ ಕುಮಾರಿ ಸ್ಕೋಪಕ್ಕನಿಗೆ ಶ್ಯಾನೆ ಬೇಜಾರಾಗಿದೆಯಂತೆ. ಹಳೆಯದೆಲ್ಲವನ್ನೂ ಮರೆತು ಇನ್ನೇನೋ ಹೊಸ ಅಧ್ವಾನ ಮಾಡಿ ಮಾಡಿ ಎಲ್ರಿಂದಲೂ ಬೈಸಿಕೊಳ್ಳುವ ಹೆಡ್ಯೂರಪ್ಪ.. ಮನೆಯಲ್ಲಿ ಡ್ರೈವರನ್ನು ಸ್ಕೋಪÀಕ್ಕನೆಂದೂ, ಸ್ಕೋಪಕ್ಕನನ್ನು ಡ್ರೈವರೆಂದು ಕನ್ ಫ್ಯೂಸು ಮಾಡಿಕೊಂಡು ಇವರಿಗೆ ಕೊಡೋದನ್ನ ಅವರಿಗೆ ಕೊಟ್ಟು, ಅವರಿಗೆ ಕೊಡೋದನ್ನ ಇವರಿಗೆ ಕೊಟ್ಟು ಎಡವಟ್ಟಿನ ಮೇಲೆ ಎಡವಟ್ಟು ಮಾಡ್ತಿರುವುದು ಸ್ಕೋಪಕ್ಕನ ಚಿಂತೆಗೆ ಕಾರಣವಾಗಿದೆಯಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಮುಂದಿನವಾರ ಇಂಥಹದೇ ಅನಾಹುತಕಾರಿ ಸುದ್ದಿಗಳೊಡನೆ ನಿಮಗೆ ಸಿಗುತ್ತೇನೆ. ಅಲ್ಲೀತನಕ ಸಲಾಂ ನಮಸ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...