Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಕಕ್ಕಸು ಗುಂಡೀಲಿ ತರ್ಕಾರಿ ಬ್ಯೆಳ್ಕಂಡು ತಿನ್ಕಳಿ !

ಕಕ್ಕಸು ಗುಂಡೀಲಿ ತರ್ಕಾರಿ ಬ್ಯೆಳ್ಕಂಡು ತಿನ್ಕಳಿ !

- Advertisement -
- Advertisement -

ಎಲ್ಲರಿಗೂ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ ಅಂತ. ಬನ್ನಿ ಈ ವಾರದ ಆಘಾತಕಾರಿ ಸುದ್ದಿಗಳು ಏನೇನಿವೆ ಎಂದು ಒಂಚೂರು ಬಗ್ಗಿ ನೋಡೋಣ.

ಹಾರೆಸ್ಸೆಸ್‍ಗೆ ಬಂತು ಮುಸ್ಲಿಮರ ಮೇಲೆ ಯದ್ವಾತದ್ವಾ ಲವ್ವು: ಎಲೆಕ್ಷನ್ ಟೈಮಲ್ಲಿ ಶುರುವಾಯ್ತು ಕುರಾನ್ ಮೇಲೆ ಪ್ಯಾರು..
ದಿನದ ಇಪ್ಪತ್ನಾಲ್ಕೂ ತಾಸೂ ದೇಶದ ಮುಸ್ಲಿಮರ ಮೇಲೆ ಕತ್ತಿ, ಕೊಡಲಿ, ಮಚ್ಚು, ಬ್ಲೇಡು, ಗರಗಸ ಹೀಗೆ ಕೈಗೆ ಸಿಕ್ಕಿದ್ದೆಲ್ಲವನ್ನೂ ಮಸೆದು ಕೊಯಕೊಯ ಅನ್ನುವ ಹಾರೆಸ್ಸೆಸ್ ಎಂಬ ಬ್ರಿಟಿಷರಿಗೆ ಗುಲಾಮಗಿರಿ ಮಾಡುತ್ತಿದ್ದ ಗೂಢಚಾರಿಗಳ ಸಂಸ್ಥೆಗೆ ಇದ್ದಕ್ಕಿದ್ದಂತೆ ಮುಸ್ಲಿಮರ ಮೇಲೆ ಪ್ಯಾರ್‍ಗೆ ಆಗ್ಬುಟ್ಟೈತೆ ಎಂಬ ನಸುಗುನ್ನಿ ನ್ಯೂಸೊಂದು ನಮಗೆ ಲಭ್ಯವಾಗಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿರುವ ಈ ಸಂದರ್ಭದಲ್ಲಿ ಹಾರೆಸ್ಸೆಸ್ ಬುಡ್ಡಾಗಳು ಅಯೋಧ್ಯೆಯಲ್ಲಿ ಕುರಾನ್ ಪಠಣ ಮತ್ತು ನಮಾಜ್ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ. ಮುಸ್ಲಿಮರ ಓಟು ನಮಗೆ ಬೇಡವೇ ಬೇಡ ಎಂದು ಈಗ ಅಬ್ಬೇಪಾರಿ ಪರಿಸ್ಥಿತಿಗೆ ತಲುಪಿರುವ ಹಾರೆಸ್ಸೆಸ್.. ಇದೀಗ ಸಾಬರ ಗಡ್ಡಕ್ಕೆ ಕೊಬ್ರಿ ಎಣ್ಣೆ ಸವರಿ ‘ಗಡ್ಡ ಎಳೀತೀವಿ ಮಿಠಾಯಿ ಕೊಡಿ’ ಎಂದು ಗಡ್ಡ ನೀವಲು ಹೊರಟಿರುವುದು ನಿಜಕ್ಕೂ ಅವರು ತಲುಪಿರುವ ದರ್ವೇಸಿ ಗತಿಗೆ ಸಾಕ್ಷಿಯಾಗಿದೆಯೆಂದು ತಿಳಿದು ಬಂದಿದೆ.
.                                       *****
ಅಚ್ಛೇದಿನ್ ಕೊಡ್ತೀವಿ ಅಂತ ಜನರ ಓಟು ತಗೊಂಡ್ರು; ಟಾಯ್ಲೆಟ್ ಗೊಬ್ಬರದಲ್ಲಿ ಬೆಳೆದ ತರಕಾರಿ ತಿನ್ನಿ ಅಂದ್ರು
ಬಾಲಿವುಡ್ ಚಿತ್ರರಂಗದ ಒನ್ & ಓನ್ಲಿ ಕೆನಡಾ ಮೂಲದ ದೇಶಭಕ್ತ ನಟ ಅಕ್ಷಯ್‍ಕುಮಾರ್ ಕಡೆಯಿಂದ ಸುದ್ದಿಯೊಂದು ಎಗರಿ ಬಂದಿದೆ. ಅತ್ಯುತ್ತಮ ಗುಣಮಟ್ಟದ ತರಕಾರಿಗಳು ಮತ್ತು ಉತ್ಕøಷ್ಟ ರುಚಿಗಾಗಿ ನಿಮ್ಮ ಮನೆಯ ಕಕ್ಕಸ್ಸುಗುಂಡಿಯ ಗೊಬ್ಬರದಲ್ಲಿ ನೀವೇ ತರಕಾರಿ ಬೆಳೆದು ಚಪ್ಪರಿಸಿಕೊಂಡು ತಿನ್ನಿರೆಂದು ಅಕ್ಷಯ್ ಕುಮಾರ್ ಕೇಂದ್ರ ಸರ್ಕಾರದ ಜಾಹೀರಾತಿನಲ್ಲಿ ಹೇಳಿ ಕಾಸೆತ್ತಿಕೊಂಡು ಹೋಗಿದ್ದಾರೆ. ಅಧಿಕಾರಕ್ಕೆ ಬಂದ್ರೆ ನಿಮ್ಮ ಶರ್ಟು ಜೇಬಿನೊಳಕ್ಕೆ ಸ್ವರ್ಗವನ್ನೇ ಪ್ಯಾಕ್ ಮಾಡಿ ಇಡ್ತೀವಿ ಅಂತ ಬೊಗಳಿದ್ದ ದ್ವೇಷಭಕ್ತರ ಕಮಲ ಪಕ್ಷದವರು ಕೊನೆಗೆ ನಿಮ್ಮದೇ ಸ್ವಂತದೇ ಮಲದ ಗೊಬ್ಬರದಲ್ಲಿ ನಿಮಗಿಷ್ಟ ಬಂದ ತರಕಾರಿ ಬೆಳೆದುಕೊಂಡು ಚಪ್ಪರಿಸಿಕೊಂಡು ತಿನ್ನಿ ಎನ್ನುತ್ತಿದ್ದಾರೆ, ಇದಕ್ಕೆ ಅಕ್ಷಯ್‍ಕುಮಾರ್‍ನಂತಹ ಗುಲಾಮರ ಗುಲಾಮನು ಜಾಹಿರಾತಿನಲ್ಲಿ ನಟಿಸಿ ನಾನೂ ಮನುಷ್ಯರ ಮಲದಲ್ಲಿ ಬೆಳೆದ ತರಕಾರಿ ತಿನ್ನುತ್ತೇನೆಂದು ಎದೆ ತಟ್ಟಿಕೊಂಡು ಹೇಳಿರುವುದು ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾಗಿದೆ.
.                                       *****
ಹಾಫ್‍ಮೆಂಟ್ಲು ಆದಿತ್ಯನಾಥ ಬಿತ್ತು ಫುಲ್‍ಮೆಂಟ್ಲು ಡ್ರೀಮ್ ಪ್ಯಾಕೇಜು: 2000 ವರ್ಷದ ಹಿಂದೆ ಇಂಡಿಯಾಗು ಕೊರಿಯಾಗು ಆಯ್ತಂತೆ ಮ್ಯಾರೇಜು
ಯುಪಿ ರಾಜ್ಯದಲ್ಲಿ ಕಂಡಕಂಡ ಟಾಯ್ಲೆಟ್ಟುಗಳಿಗೆಲ್ಲ ಕೇಸರಿ ಬಣ್ಣ ಹೊಡೆದುಕೊಂಡು ಆರಾಮಾಗಿ ಓಡಾಡುತ್ತಿರುವ ಅಲ್ಲಿನ ಸನ್ಯಾಸಿ ಸಿಎಂ ಯೋಗಿ ಹಾದಿತ್ಯನಾಥ ಅಲಿಯಾಸ್ ಅಜಯ್‍ಸಿಂಗ್ ಭಿಷ್ಟ್ ಎಂಬ ತಲೆತಿಕ್ಕಲು ಐಲು ಗಿರಾಕಿಯ ತಲೆಯಲ್ಲಿರುವ ನಟ್ಟು ಬೋಲ್ಟುಗಳೆಲ್ಲ ತೊಪತೊಪನೆ ಉದುರಿ ಹೋಗಿರುವ ವರ್ತಮಾನ ಇದೀಗತಾನೇ ಲಭ್ಯವಾಗಿದೆ. ಜನರ ಬದುಕನ್ನು ಹಸನು ಮಾಡು ಪುಣ್ಯದ ಕೆಲಸವೊಂದನ್ನು ಬಿಟ್ಟು ಮಿಕ್ಕೆಲ್ಲ ಕೋತಿಚೇಷ್ಟೆ ಮಾಡಿಕೊಂಡು ತಿರುಗುತ್ತಿರುವ ಈ ಬೋಳುಮಂಡೆ ಸೋಂಬೇರಿ ಸಿಎಂ ಇತ್ತೀಚೆಗಷ್ಟೇ ಒಂದು ಬ್ರೈನ್‍ಲೆಸ್ ಹೇಳಿಕೆಯೊಂದನ್ನು ಕೊಟ್ಟು ನಗೆಪಾಟಲಿಗೆ ಈಡಾಗಿದೆ. ಅಯೋಧ್ಯೆಯ ರಾಜಕುಮಾರಿಯನ್ನು 2 ಸಾವಿರ ವರ್ಷಗಳ ಹಿಂದೆ ದಕ್ಷಿಣ ಕೊರಿಯಾದ ರಾಜಕುಮಾರನಿಗೆ ಕೊಟ್ಟು ಮದುವೆ ಮಾಡಲಾಗಿತ್ತು ಎಂದಿದ್ದಾನೆÀ ಯುಪಿ ರಾಜ್ಯದ ಸನ್ಯಾಸಿ ಸಿಎಂ, ಈ ಬಗ್ಗೆ ಅಧಿಕೃತ ಮಾಹಿತಿ ಎಲ್ಲಿಂದ ಲಭಿಸಿತು? ಆವಾಗ ನೀವು ಯಾವ ಕುದುರೆಲಾಯದಲ್ಲಿ ಲಂಗೋಟಿ ಹಾಕ್ಕೊಂಡು ಸೆಗಣಿ ಎತ್ತುತ್ತ ಇದನ್ನೆಲ್ಲ ಗಮನಿಸಿದಿರಿ.. ಎಂಬ ಪತ್ರಕರ್ತರ ಪ್ರಶ್ನೆಗೆ ತೀವ್ರವಾಗಿ ಬೇಜಾರು ಮಾಡಿಕೊಂಡ ಈ ಕೆಪರಗೇಡಿಯು, ಪ್ರಶ್ನೆ ಕೇಳಿದ ಟಿವಿ ಚಾನೆಲ್‍ನ ಮೈಕನ್ನು ಕೈಗೆತ್ತಿಕೊಂಡು ತನ್ನ ಬಾಣಲಿತಲೆಗೆ ¥sಟ್ ಫಟ್ ಫಟ್ ಎಂದು ಹೊಡೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿಲ್ಲವೆಂದು ತಿಳಿದುಬಂದಿದೆ.
.                                       *****
ಸನಾತನಿ ಸಂಘಿ-ಮಂಕಿಗಳ ಭ್ರಮೆಯ ರೋಗವಾಯ್ತು ವಿಪರೀತ: ಲಂಗೋಟಿಗೆ ಬಿದ್ದ ಬೆಂಕಿಗೆ ಮಾಡ್ತಿದ್ದಾರೆ ತೋಂ ತಕಿಟ ತಕಧಿಮಿತ
ಇತ್ತೀಚೆಗೆ ಯಾರ ಕಣ್ಣಿಗೂ ಕಾಣದ್ದೆಲ್ಲ ಭ್ರಮೆಯಲ್ಲೇ ನುಗುರುಕೊಂಡು ಓಡಾಡುವ ಸಂಘಿ ಮಂಕಿಗಳಿಗೆ ಕಾಣುತ್ತಿರುವುದು ಆಶ್ಚರ್ಯದ ವಿಷಯವೇ ಸರಿ. ದನದ ಮೂತ್ರದಲ್ಲಿ ಜಗತ್ತಿನ ಎಲ್ಲ ಕಾಯಿಲೆಗಳಿಗೂ ಔಷಧಿ ಕಂಡುಹಿಡಿದ ಈ ಇಂಕಿ ಮಂಕಿ ಪಾಂಕಿಗಳು ಇದೀಗ ತಮ್ಮ ಎಂಜಲುಕಾಸಿನ ದೊರೆ ಅಂಬಾನಿಯು ಇನ್ನೂ ಸ್ಥಾಪಿಸದೇ ಇರುವ ಸಂಸ್ಥೆಯೊಂದು ಕಂಡುಬಿಟ್ಟಿದೆಯಂತೆ. ‘ಜಿಯೋ ಇನ್ಸ್‍ಟಿಟ್ಯೂಟ್’ ಎಂಬ ಅಸ್ತಿತ್ವದಲ್ಲೇ ಇಲ್ಲದ ಅಂಬಾನಿಯ ಸಂಸ್ಥೆಯು ದೇಶದ ಅತ್ಯುತ್ತಮ ಸಂಸ್ಥೆಗಳಲ್ಲೊಂದು ಎಂದು ತಮ್ಮ ಗುಲಾಮಿ ಸರ್ಕಾರದ ಮೂಲದ ಘೋಷಿಸಿರುವ ಈ ಸಾಂಪ್ ಸಂಘಿಗಳು ಈ ಮೂಲಕ ತಾವು ಹ್ಯಾಲೂಸಿನೇಷನ್ ರೋಗದಿಂದ ನರಳಾಡಿ ಹುಳ ಬಿದ್ದು ಒದ್ದಾಡುತ್ತಿದ್ದೇವೆಂದು ಘಂಟಾಘೋಷವಾಗಿ ಸಾರಿಬಿಟ್ಟಿದ್ದಾರೆÉ. ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಸಂಘಿಗಳ ಮಾನಸಿಕ ಅಸ್ವಸ್ಥತೆಯ ಮೇಲೆ ಮುಗಿಬಿದ್ದ ಅಷ್ಟಿಷ್ಟು ಮಾಧ್ಯಮಗಳು ಸಂಘಿಗಳ ಲಂಗೋಟಿಗೆ ಸೀಮೆಎಣ್ಣೆ ಎರಚಿ ಕಡ್ಡಿ ಗೀರಿದ್ದಾರೆಂದು, ಉರಿ ತಡೆಯಲಾಗದೆ ಸಂಘಿ-ಮಂಕಿಗಳು ಲಡಕಾಸಿ ನೃತ್ಯ ಮಾಡುತ್ತ ಉರಿ ಶಮನ ಮಾಡಿಕೊಳ್ಳುತ್ತಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.
.                                       *****

ಹೆಡ್ಡಪ್ಪನ ಮರೆಗುಳಿ ಅಧ್ವಾನಗಳಿಗೆ ಸ್ಕೋಪಕ್ಕ ಆದ್ರು ಕಕ್ಕಾಬಿಕ್ಕಿ: ಇವರಿಗೆ ಕೊಡೋದು ಅವ್ರಿಗೆ, ಅವ್ರಿಗೆ ಕೊಡೋದು ಇವ್ರಿಗೆ..
ಹತ್ತನ್ನೆರಡು ವರ್ಷಗಳ ಹಿಂದೆ 38 ಎಮ್ಮೆಲ್ಲೆಗಳನ್ನು ಹೊಂದಿದ್ದ ಕುಮಾರಣ್ಣನನ್ನು ಸಿಎಂ ಮಾಡಿ ಅಪ್ಪಿ ಮುದ್ದಾಡಿ ಲೊಚಲೊಚನೆ ಕಿಸ್ಸು ಕೊಟ್ಟಿದ್ದ ಕರ್ನಾಟಕ ಕಮಲ ಪಕ್ಷದವರು ಇದೀಗ, ಅದೇ ರೀತಿ ಕಾಂಗ್ರೆಸ್ ಕುಮಾರಣ್ಣನನ್ನು ಸಿಎಂ ಮಾಡಿರುವುದಕ್ಕೆ ಚಡ್ಡಿಯೊಳಗೆ ಓತಿಕ್ಯಾತ ಹೊಕ್ಕಂತೆ ಆಡುತ್ತಿರುವುದು ಬಯಲಾಗಿದೆ. ಸತ್ಯಹರಿಶ್ಚಂದ್ರ ದೇವರಪಾದ ಸೇರಿದ ಮೇಲೆ ಮತ್ತೆ ಶಿಕಾರಿಪುರದಲ್ಲಿ ರೈಸ್ ಮಿಲ್ ರೈಟರಾಗಿ ಮರುಜನ್ಮ ಪಡೆದು ಹುಟ್ಟಿರೋದೇ ನಾನು ಎಂಬಂತೆ ನೈತಿಕತೆಯ ಭಾಷಣ ಬೊಗಳುತ್ತಿರುವ ಹೆಡ್ಯೂರಪ್ಪನಿಗೆ ತನ್ನ ಹಳೆಯ ಬ್ಲಾಕಂಡ್ ವೈಟ್ ಡ್ರಾಮಾಗಳು ನೆನಪಾಗದಿರುವುದಕ್ಕೆ ನಿವೃತ್ತ ಕುಮಾರಿ ಸ್ಕೋಪಕ್ಕನಿಗೆ ಶ್ಯಾನೆ ಬೇಜಾರಾಗಿದೆಯಂತೆ. ಹಳೆಯದೆಲ್ಲವನ್ನೂ ಮರೆತು ಇನ್ನೇನೋ ಹೊಸ ಅಧ್ವಾನ ಮಾಡಿ ಮಾಡಿ ಎಲ್ರಿಂದಲೂ ಬೈಸಿಕೊಳ್ಳುವ ಹೆಡ್ಯೂರಪ್ಪ.. ಮನೆಯಲ್ಲಿ ಡ್ರೈವರನ್ನು ಸ್ಕೋಪÀಕ್ಕನೆಂದೂ, ಸ್ಕೋಪಕ್ಕನನ್ನು ಡ್ರೈವರೆಂದು ಕನ್ ಫ್ಯೂಸು ಮಾಡಿಕೊಂಡು ಇವರಿಗೆ ಕೊಡೋದನ್ನ ಅವರಿಗೆ ಕೊಟ್ಟು, ಅವರಿಗೆ ಕೊಡೋದನ್ನ ಇವರಿಗೆ ಕೊಟ್ಟು ಎಡವಟ್ಟಿನ ಮೇಲೆ ಎಡವಟ್ಟು ಮಾಡ್ತಿರುವುದು ಸ್ಕೋಪಕ್ಕನ ಚಿಂತೆಗೆ ಕಾರಣವಾಗಿದೆಯಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಮುಂದಿನವಾರ ಇಂಥಹದೇ ಅನಾಹುತಕಾರಿ ಸುದ್ದಿಗಳೊಡನೆ ನಿಮಗೆ ಸಿಗುತ್ತೇನೆ. ಅಲ್ಲೀತನಕ ಸಲಾಂ ನಮಸ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...