Homeಮುಖಪುಟಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್ ರಾಮನು ನಡೆಸಿದ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಮಹಾತ್ಮ ಗಾಂಧಿಯವರು ಬಳಸಿದ ‘ಹೇ ರಾಮ್’ ಎಂಬ ನುಡಿಗಟ್ಟು ‘ಜೀವನದ ಮಾರ್ಗ’ವನ್ನು ಸೂಚಿಸುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಮಧ್ಯಪ್ರದೇಶದ ಮೂಲಕ ಹಾದು ಹೋಗುತ್ತಿರುವ ಭಾರತ್ ಜೋಡೋ ಪಾದಯಾತ್ರೆಯು ಶುಕ್ರವಾರ ಸಂಜೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ವಿರಾಮ ಪಡೆಯಿತು. “ಮಧ್ಯಪ್ರದೇಶದಲ್ಲಿ ಯಾತ್ರೆಯ ವೇಳೆ ನನ್ನನ್ನು ಭೇಟಿಯಾಗಲು ಬಂದಿದ್ದ ಅರ್ಚಕರೊಬ್ಬರು ಗಾಂಧೀಜಿಯವರು ಆಗಾಗ ಬಳಸುತ್ತಿದ್ದ ‘ಹೇ ರಾಮ್’ ಪದದ ಅರ್ಥವನ್ನು ಹೇಳಿದರು. ಹೇ ರಾಮ್ ಒಂದು ಜೀವನ ವಿಧಾನ. ಇದು ಇಡೀ ಜಗತ್ತಿಗೆ ಪ್ರೀತಿ, ಭ್ರಾತೃತ್ವ, ಗೌರವ ಮತ್ತು ತಪಸ್ಸಿನ ಅರ್ಥವನ್ನು ಕಲಿಸಿತು” ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

“ಅದೇ ರೀತಿ, ‘ಜೈ ಸಿಯಾ ರಾಮ್’ ಎಂದರೆ ಸೀತೆ ಮತ್ತು ರಾಮರು ಒಬ್ಬರೇ. ಶ್ರೀರಾಮನು ಸೀತೆಯ ಗೌರವಕ್ಕಾಗಿ ಹೋರಾಡಿದನು” ಎಂದು ಅವರು ತಿಳಿಸಿದ್ದಾರೆ.

“ಜೈ ಶ್ರೀರಾಮ್ ಎಂದರೆ ಭಗವಾನ್ ರಾಮನನ್ನು ಸ್ತುತಿಸುವುದಾಗಿದೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್‌ ರಾಮನಂತೆ ತಮ್ಮ ಜೀವನವನ್ನು ನಡೆಸುತ್ತಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಭಗವಾನ್ ರಾಮನ ಅಸ್ತಿತ್ವವನ್ನು ಎಂದಿಗೂ ನಂಬದವರು ಈಗ ಅವನನ್ನು ನಿಂದಿಸಲು ‘ರಾವಣನನ್ನು ಕರೆತಂದಿದ್ದಾರೆ’” ಎಂದು ಮೋದಿ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದ್ದರು. “ಎಲ್ಲಾ ಚುನಾವಣೆಗಳಲ್ಲಿಯೂ ತಮ್ಮ ಮುಖವನ್ನು ನೋಡಿಕೊಂಡು ಮತ ಚಲಾಯಿಸುವಂತೆ ಪ್ರಧಾನಿ ಕೇಳುತ್ತಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. “ನೀವು ರಾವಣನಂತೆ 100 ತಲೆ ಹೊಂದಿದ್ದೀರಾ?” ಎಂದು ಖರ್ಗೆ ಪ್ರಶ್ನಿಸಿದ್ದರು.

ಇದೇ ವೇಳೆ, ಕೇಂದ್ರ ಹಾಗೂ ಮಧ್ಯಪ್ರದೇಶದ ಬಿಜೆಪಿ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ರಾಹುಲ್ ಗಾಂಧಿ, “ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ ಮತ್ತು 50 ಸಾವಿರದಿಂದ ಒಂದು ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದೆ ಸತಾಯಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಪಾಲಕರು ತಮ್ಮ ಮಗನನ್ನು ಇಂಜಿನಿಯರ್ ಮಾಡಲು ಶೈಕ್ಷಣಿಕ ಸಾಲವನ್ನು ತೆಗೆದುಕೊಳ್ಳುತ್ತಾರೆ, ಆದರೆ ಪದವಿ ಪಡೆದ ನಂತರ, ಯುವ ಇಂಜಿನಿಯರ್‌ಗಳು ಉದ್ಯೋಗದ ಕೊರತೆಯಿಂದಾಗಿ ಕಾರ್ಮಿಕರಾಗಿ ದುಡಿಯುತ್ತಾರೆ” ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

“ಚಿಕ್ಕಪುಟ್ಟ ಅಂಗಡಿಗಳು, ಗೃಹ ಸಂಬಂಧಿ ಕೆಲಸಗಳು ದೊಡ್ಡ ಉದ್ಯೋಗ ಮೂಲವಾಗಿವೆ. ಆದರೆ ಇವುಗಳನ್ನು ಅವಲಂಬಿಸಿರುವವರು ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ನಿಂದ ತೀವ್ರವಾಗಿ ಹೊಡೆತ ತಿಂದಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಉದ್ಯೋಗದ ಮತ್ತೊಂದು ಪ್ರಮುಖ ಮೂಲವೆಂದರೆ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್‌ಯು). ಆದರೆ ಅವುಗಳನ್ನು ಸಹ ಮುಚ್ಚಲಾಗುತ್ತಿದೆ. ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಸಹ ಖಾಸಗೀಕರಣಗೊಳಿಸಲಾಗುತ್ತಿದೆ, ಹೀಗಾಗಿ ಎಲ್ಲಾ ಉದ್ಯೋಗಾವಕಾಶಗಳನ್ನು ಕೊನೆಗೊಳಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ.ಬಂಗಾಳ: ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂರು ಸಾವು

ಬೆಲೆ ಏರಿಕೆಯನ್ನು ಉಲ್ಲೇಖಿಸಿದ ಅವರು, “ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 60 ರೂ. ಇತ್ತು. ಆದರೆ ಈಗ ಅದು ಲೀಟರ್‌ಗೆ 107 ರೂ.ಗೆ ಏರಿಕೆಯಾಗಿದೆ. 400 ರೂಪಾಯಿ ಬೆಲೆಯ ಎಲ್‌ಪಿಜಿ ಸಿಲಿಂಡರ್ ಈಗ 1,000 ರೂಪಾಯಿಗಿಂತ ಹೆಚ್ಚಿದೆ” ಎಂದು ಟೀಕಿಸಿದ್ದಾರೆ.

“ಸಾಮಾನ್ಯ ಜನರ ಜೇಬಿನಿಂದ ಹಣ ತೆಗೆದು ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ, ಈಗ ದೇಶದಲ್ಲಿ ಎರಡು ವಿಭಾಗಗಳಿವೆ. ಒಂದು ವಿಭಾಗದಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿಗಳು ಇದ್ದಾರೆ. ಮತ್ತೊಂದು ವಿಭಾಗದಲ್ಲಿ ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿ ಮಾಲೀಕರು ಇದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಜನರು ಈ ಪರಿಸ್ಥಿತಿಯನ್ನು ಬಯಸುವುದಿಲ್ಲ. ಅವರು ನ್ಯಾಯವನ್ನು ಬಯಸುತ್ತಾರೆ. ಅವರಿಗೆ ನ್ಯಾಯವನ್ನು ದೊರಕಿಸುವುದು ಭಾರತ್ ಜೋಡೋ ಯಾತ್ರೆಯ ಮುಖ್ಯ ಗುರಿಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...