Homeಮುಖಪುಟಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್ ರಾಮನು ನಡೆಸಿದ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಮಹಾತ್ಮ ಗಾಂಧಿಯವರು ಬಳಸಿದ ‘ಹೇ ರಾಮ್’ ಎಂಬ ನುಡಿಗಟ್ಟು ‘ಜೀವನದ ಮಾರ್ಗ’ವನ್ನು ಸೂಚಿಸುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಮಧ್ಯಪ್ರದೇಶದ ಮೂಲಕ ಹಾದು ಹೋಗುತ್ತಿರುವ ಭಾರತ್ ಜೋಡೋ ಪಾದಯಾತ್ರೆಯು ಶುಕ್ರವಾರ ಸಂಜೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ವಿರಾಮ ಪಡೆಯಿತು. “ಮಧ್ಯಪ್ರದೇಶದಲ್ಲಿ ಯಾತ್ರೆಯ ವೇಳೆ ನನ್ನನ್ನು ಭೇಟಿಯಾಗಲು ಬಂದಿದ್ದ ಅರ್ಚಕರೊಬ್ಬರು ಗಾಂಧೀಜಿಯವರು ಆಗಾಗ ಬಳಸುತ್ತಿದ್ದ ‘ಹೇ ರಾಮ್’ ಪದದ ಅರ್ಥವನ್ನು ಹೇಳಿದರು. ಹೇ ರಾಮ್ ಒಂದು ಜೀವನ ವಿಧಾನ. ಇದು ಇಡೀ ಜಗತ್ತಿಗೆ ಪ್ರೀತಿ, ಭ್ರಾತೃತ್ವ, ಗೌರವ ಮತ್ತು ತಪಸ್ಸಿನ ಅರ್ಥವನ್ನು ಕಲಿಸಿತು” ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

“ಅದೇ ರೀತಿ, ‘ಜೈ ಸಿಯಾ ರಾಮ್’ ಎಂದರೆ ಸೀತೆ ಮತ್ತು ರಾಮರು ಒಬ್ಬರೇ. ಶ್ರೀರಾಮನು ಸೀತೆಯ ಗೌರವಕ್ಕಾಗಿ ಹೋರಾಡಿದನು” ಎಂದು ಅವರು ತಿಳಿಸಿದ್ದಾರೆ.

“ಜೈ ಶ್ರೀರಾಮ್ ಎಂದರೆ ಭಗವಾನ್ ರಾಮನನ್ನು ಸ್ತುತಿಸುವುದಾಗಿದೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್‌ ರಾಮನಂತೆ ತಮ್ಮ ಜೀವನವನ್ನು ನಡೆಸುತ್ತಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಭಗವಾನ್ ರಾಮನ ಅಸ್ತಿತ್ವವನ್ನು ಎಂದಿಗೂ ನಂಬದವರು ಈಗ ಅವನನ್ನು ನಿಂದಿಸಲು ‘ರಾವಣನನ್ನು ಕರೆತಂದಿದ್ದಾರೆ’” ಎಂದು ಮೋದಿ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದ್ದರು. “ಎಲ್ಲಾ ಚುನಾವಣೆಗಳಲ್ಲಿಯೂ ತಮ್ಮ ಮುಖವನ್ನು ನೋಡಿಕೊಂಡು ಮತ ಚಲಾಯಿಸುವಂತೆ ಪ್ರಧಾನಿ ಕೇಳುತ್ತಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. “ನೀವು ರಾವಣನಂತೆ 100 ತಲೆ ಹೊಂದಿದ್ದೀರಾ?” ಎಂದು ಖರ್ಗೆ ಪ್ರಶ್ನಿಸಿದ್ದರು.

ಇದೇ ವೇಳೆ, ಕೇಂದ್ರ ಹಾಗೂ ಮಧ್ಯಪ್ರದೇಶದ ಬಿಜೆಪಿ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ರಾಹುಲ್ ಗಾಂಧಿ, “ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ ಮತ್ತು 50 ಸಾವಿರದಿಂದ ಒಂದು ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದೆ ಸತಾಯಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಪಾಲಕರು ತಮ್ಮ ಮಗನನ್ನು ಇಂಜಿನಿಯರ್ ಮಾಡಲು ಶೈಕ್ಷಣಿಕ ಸಾಲವನ್ನು ತೆಗೆದುಕೊಳ್ಳುತ್ತಾರೆ, ಆದರೆ ಪದವಿ ಪಡೆದ ನಂತರ, ಯುವ ಇಂಜಿನಿಯರ್‌ಗಳು ಉದ್ಯೋಗದ ಕೊರತೆಯಿಂದಾಗಿ ಕಾರ್ಮಿಕರಾಗಿ ದುಡಿಯುತ್ತಾರೆ” ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

“ಚಿಕ್ಕಪುಟ್ಟ ಅಂಗಡಿಗಳು, ಗೃಹ ಸಂಬಂಧಿ ಕೆಲಸಗಳು ದೊಡ್ಡ ಉದ್ಯೋಗ ಮೂಲವಾಗಿವೆ. ಆದರೆ ಇವುಗಳನ್ನು ಅವಲಂಬಿಸಿರುವವರು ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ನಿಂದ ತೀವ್ರವಾಗಿ ಹೊಡೆತ ತಿಂದಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಉದ್ಯೋಗದ ಮತ್ತೊಂದು ಪ್ರಮುಖ ಮೂಲವೆಂದರೆ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್‌ಯು). ಆದರೆ ಅವುಗಳನ್ನು ಸಹ ಮುಚ್ಚಲಾಗುತ್ತಿದೆ. ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಸಹ ಖಾಸಗೀಕರಣಗೊಳಿಸಲಾಗುತ್ತಿದೆ, ಹೀಗಾಗಿ ಎಲ್ಲಾ ಉದ್ಯೋಗಾವಕಾಶಗಳನ್ನು ಕೊನೆಗೊಳಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ.ಬಂಗಾಳ: ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂರು ಸಾವು

ಬೆಲೆ ಏರಿಕೆಯನ್ನು ಉಲ್ಲೇಖಿಸಿದ ಅವರು, “ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 60 ರೂ. ಇತ್ತು. ಆದರೆ ಈಗ ಅದು ಲೀಟರ್‌ಗೆ 107 ರೂ.ಗೆ ಏರಿಕೆಯಾಗಿದೆ. 400 ರೂಪಾಯಿ ಬೆಲೆಯ ಎಲ್‌ಪಿಜಿ ಸಿಲಿಂಡರ್ ಈಗ 1,000 ರೂಪಾಯಿಗಿಂತ ಹೆಚ್ಚಿದೆ” ಎಂದು ಟೀಕಿಸಿದ್ದಾರೆ.

“ಸಾಮಾನ್ಯ ಜನರ ಜೇಬಿನಿಂದ ಹಣ ತೆಗೆದು ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ, ಈಗ ದೇಶದಲ್ಲಿ ಎರಡು ವಿಭಾಗಗಳಿವೆ. ಒಂದು ವಿಭಾಗದಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿಗಳು ಇದ್ದಾರೆ. ಮತ್ತೊಂದು ವಿಭಾಗದಲ್ಲಿ ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿ ಮಾಲೀಕರು ಇದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಜನರು ಈ ಪರಿಸ್ಥಿತಿಯನ್ನು ಬಯಸುವುದಿಲ್ಲ. ಅವರು ನ್ಯಾಯವನ್ನು ಬಯಸುತ್ತಾರೆ. ಅವರಿಗೆ ನ್ಯಾಯವನ್ನು ದೊರಕಿಸುವುದು ಭಾರತ್ ಜೋಡೋ ಯಾತ್ರೆಯ ಮುಖ್ಯ ಗುರಿಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...