Homeಮುಖಪುಟಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್ ರಾಮನು ನಡೆಸಿದ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಮಹಾತ್ಮ ಗಾಂಧಿಯವರು ಬಳಸಿದ ‘ಹೇ ರಾಮ್’ ಎಂಬ ನುಡಿಗಟ್ಟು ‘ಜೀವನದ ಮಾರ್ಗ’ವನ್ನು ಸೂಚಿಸುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಮಧ್ಯಪ್ರದೇಶದ ಮೂಲಕ ಹಾದು ಹೋಗುತ್ತಿರುವ ಭಾರತ್ ಜೋಡೋ ಪಾದಯಾತ್ರೆಯು ಶುಕ್ರವಾರ ಸಂಜೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ವಿರಾಮ ಪಡೆಯಿತು. “ಮಧ್ಯಪ್ರದೇಶದಲ್ಲಿ ಯಾತ್ರೆಯ ವೇಳೆ ನನ್ನನ್ನು ಭೇಟಿಯಾಗಲು ಬಂದಿದ್ದ ಅರ್ಚಕರೊಬ್ಬರು ಗಾಂಧೀಜಿಯವರು ಆಗಾಗ ಬಳಸುತ್ತಿದ್ದ ‘ಹೇ ರಾಮ್’ ಪದದ ಅರ್ಥವನ್ನು ಹೇಳಿದರು. ಹೇ ರಾಮ್ ಒಂದು ಜೀವನ ವಿಧಾನ. ಇದು ಇಡೀ ಜಗತ್ತಿಗೆ ಪ್ರೀತಿ, ಭ್ರಾತೃತ್ವ, ಗೌರವ ಮತ್ತು ತಪಸ್ಸಿನ ಅರ್ಥವನ್ನು ಕಲಿಸಿತು” ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

“ಅದೇ ರೀತಿ, ‘ಜೈ ಸಿಯಾ ರಾಮ್’ ಎಂದರೆ ಸೀತೆ ಮತ್ತು ರಾಮರು ಒಬ್ಬರೇ. ಶ್ರೀರಾಮನು ಸೀತೆಯ ಗೌರವಕ್ಕಾಗಿ ಹೋರಾಡಿದನು” ಎಂದು ಅವರು ತಿಳಿಸಿದ್ದಾರೆ.

“ಜೈ ಶ್ರೀರಾಮ್ ಎಂದರೆ ಭಗವಾನ್ ರಾಮನನ್ನು ಸ್ತುತಿಸುವುದಾಗಿದೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್‌ ರಾಮನಂತೆ ತಮ್ಮ ಜೀವನವನ್ನು ನಡೆಸುತ್ತಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಭಗವಾನ್ ರಾಮನ ಅಸ್ತಿತ್ವವನ್ನು ಎಂದಿಗೂ ನಂಬದವರು ಈಗ ಅವನನ್ನು ನಿಂದಿಸಲು ‘ರಾವಣನನ್ನು ಕರೆತಂದಿದ್ದಾರೆ’” ಎಂದು ಮೋದಿ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದ್ದರು. “ಎಲ್ಲಾ ಚುನಾವಣೆಗಳಲ್ಲಿಯೂ ತಮ್ಮ ಮುಖವನ್ನು ನೋಡಿಕೊಂಡು ಮತ ಚಲಾಯಿಸುವಂತೆ ಪ್ರಧಾನಿ ಕೇಳುತ್ತಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. “ನೀವು ರಾವಣನಂತೆ 100 ತಲೆ ಹೊಂದಿದ್ದೀರಾ?” ಎಂದು ಖರ್ಗೆ ಪ್ರಶ್ನಿಸಿದ್ದರು.

ಇದೇ ವೇಳೆ, ಕೇಂದ್ರ ಹಾಗೂ ಮಧ್ಯಪ್ರದೇಶದ ಬಿಜೆಪಿ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ರಾಹುಲ್ ಗಾಂಧಿ, “ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ ಮತ್ತು 50 ಸಾವಿರದಿಂದ ಒಂದು ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದೆ ಸತಾಯಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಪಾಲಕರು ತಮ್ಮ ಮಗನನ್ನು ಇಂಜಿನಿಯರ್ ಮಾಡಲು ಶೈಕ್ಷಣಿಕ ಸಾಲವನ್ನು ತೆಗೆದುಕೊಳ್ಳುತ್ತಾರೆ, ಆದರೆ ಪದವಿ ಪಡೆದ ನಂತರ, ಯುವ ಇಂಜಿನಿಯರ್‌ಗಳು ಉದ್ಯೋಗದ ಕೊರತೆಯಿಂದಾಗಿ ಕಾರ್ಮಿಕರಾಗಿ ದುಡಿಯುತ್ತಾರೆ” ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

“ಚಿಕ್ಕಪುಟ್ಟ ಅಂಗಡಿಗಳು, ಗೃಹ ಸಂಬಂಧಿ ಕೆಲಸಗಳು ದೊಡ್ಡ ಉದ್ಯೋಗ ಮೂಲವಾಗಿವೆ. ಆದರೆ ಇವುಗಳನ್ನು ಅವಲಂಬಿಸಿರುವವರು ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ನಿಂದ ತೀವ್ರವಾಗಿ ಹೊಡೆತ ತಿಂದಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಉದ್ಯೋಗದ ಮತ್ತೊಂದು ಪ್ರಮುಖ ಮೂಲವೆಂದರೆ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್‌ಯು). ಆದರೆ ಅವುಗಳನ್ನು ಸಹ ಮುಚ್ಚಲಾಗುತ್ತಿದೆ. ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಸಹ ಖಾಸಗೀಕರಣಗೊಳಿಸಲಾಗುತ್ತಿದೆ, ಹೀಗಾಗಿ ಎಲ್ಲಾ ಉದ್ಯೋಗಾವಕಾಶಗಳನ್ನು ಕೊನೆಗೊಳಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ.ಬಂಗಾಳ: ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂರು ಸಾವು

ಬೆಲೆ ಏರಿಕೆಯನ್ನು ಉಲ್ಲೇಖಿಸಿದ ಅವರು, “ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 60 ರೂ. ಇತ್ತು. ಆದರೆ ಈಗ ಅದು ಲೀಟರ್‌ಗೆ 107 ರೂ.ಗೆ ಏರಿಕೆಯಾಗಿದೆ. 400 ರೂಪಾಯಿ ಬೆಲೆಯ ಎಲ್‌ಪಿಜಿ ಸಿಲಿಂಡರ್ ಈಗ 1,000 ರೂಪಾಯಿಗಿಂತ ಹೆಚ್ಚಿದೆ” ಎಂದು ಟೀಕಿಸಿದ್ದಾರೆ.

“ಸಾಮಾನ್ಯ ಜನರ ಜೇಬಿನಿಂದ ಹಣ ತೆಗೆದು ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ, ಈಗ ದೇಶದಲ್ಲಿ ಎರಡು ವಿಭಾಗಗಳಿವೆ. ಒಂದು ವಿಭಾಗದಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿಗಳು ಇದ್ದಾರೆ. ಮತ್ತೊಂದು ವಿಭಾಗದಲ್ಲಿ ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿ ಮಾಲೀಕರು ಇದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಜನರು ಈ ಪರಿಸ್ಥಿತಿಯನ್ನು ಬಯಸುವುದಿಲ್ಲ. ಅವರು ನ್ಯಾಯವನ್ನು ಬಯಸುತ್ತಾರೆ. ಅವರಿಗೆ ನ್ಯಾಯವನ್ನು ದೊರಕಿಸುವುದು ಭಾರತ್ ಜೋಡೋ ಯಾತ್ರೆಯ ಮುಖ್ಯ ಗುರಿಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...