Homeಮುಖಪುಟಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್ ರಾಮನು ನಡೆಸಿದ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಮಹಾತ್ಮ ಗಾಂಧಿಯವರು ಬಳಸಿದ ‘ಹೇ ರಾಮ್’ ಎಂಬ ನುಡಿಗಟ್ಟು ‘ಜೀವನದ ಮಾರ್ಗ’ವನ್ನು ಸೂಚಿಸುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಮಧ್ಯಪ್ರದೇಶದ ಮೂಲಕ ಹಾದು ಹೋಗುತ್ತಿರುವ ಭಾರತ್ ಜೋಡೋ ಪಾದಯಾತ್ರೆಯು ಶುಕ್ರವಾರ ಸಂಜೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ವಿರಾಮ ಪಡೆಯಿತು. “ಮಧ್ಯಪ್ರದೇಶದಲ್ಲಿ ಯಾತ್ರೆಯ ವೇಳೆ ನನ್ನನ್ನು ಭೇಟಿಯಾಗಲು ಬಂದಿದ್ದ ಅರ್ಚಕರೊಬ್ಬರು ಗಾಂಧೀಜಿಯವರು ಆಗಾಗ ಬಳಸುತ್ತಿದ್ದ ‘ಹೇ ರಾಮ್’ ಪದದ ಅರ್ಥವನ್ನು ಹೇಳಿದರು. ಹೇ ರಾಮ್ ಒಂದು ಜೀವನ ವಿಧಾನ. ಇದು ಇಡೀ ಜಗತ್ತಿಗೆ ಪ್ರೀತಿ, ಭ್ರಾತೃತ್ವ, ಗೌರವ ಮತ್ತು ತಪಸ್ಸಿನ ಅರ್ಥವನ್ನು ಕಲಿಸಿತು” ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

“ಅದೇ ರೀತಿ, ‘ಜೈ ಸಿಯಾ ರಾಮ್’ ಎಂದರೆ ಸೀತೆ ಮತ್ತು ರಾಮರು ಒಬ್ಬರೇ. ಶ್ರೀರಾಮನು ಸೀತೆಯ ಗೌರವಕ್ಕಾಗಿ ಹೋರಾಡಿದನು” ಎಂದು ಅವರು ತಿಳಿಸಿದ್ದಾರೆ.

“ಜೈ ಶ್ರೀರಾಮ್ ಎಂದರೆ ಭಗವಾನ್ ರಾಮನನ್ನು ಸ್ತುತಿಸುವುದಾಗಿದೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್‌ ರಾಮನಂತೆ ತಮ್ಮ ಜೀವನವನ್ನು ನಡೆಸುತ್ತಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಭಗವಾನ್ ರಾಮನ ಅಸ್ತಿತ್ವವನ್ನು ಎಂದಿಗೂ ನಂಬದವರು ಈಗ ಅವನನ್ನು ನಿಂದಿಸಲು ‘ರಾವಣನನ್ನು ಕರೆತಂದಿದ್ದಾರೆ’” ಎಂದು ಮೋದಿ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದ್ದರು. “ಎಲ್ಲಾ ಚುನಾವಣೆಗಳಲ್ಲಿಯೂ ತಮ್ಮ ಮುಖವನ್ನು ನೋಡಿಕೊಂಡು ಮತ ಚಲಾಯಿಸುವಂತೆ ಪ್ರಧಾನಿ ಕೇಳುತ್ತಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. “ನೀವು ರಾವಣನಂತೆ 100 ತಲೆ ಹೊಂದಿದ್ದೀರಾ?” ಎಂದು ಖರ್ಗೆ ಪ್ರಶ್ನಿಸಿದ್ದರು.

ಇದೇ ವೇಳೆ, ಕೇಂದ್ರ ಹಾಗೂ ಮಧ್ಯಪ್ರದೇಶದ ಬಿಜೆಪಿ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ರಾಹುಲ್ ಗಾಂಧಿ, “ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ ಮತ್ತು 50 ಸಾವಿರದಿಂದ ಒಂದು ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದೆ ಸತಾಯಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಪಾಲಕರು ತಮ್ಮ ಮಗನನ್ನು ಇಂಜಿನಿಯರ್ ಮಾಡಲು ಶೈಕ್ಷಣಿಕ ಸಾಲವನ್ನು ತೆಗೆದುಕೊಳ್ಳುತ್ತಾರೆ, ಆದರೆ ಪದವಿ ಪಡೆದ ನಂತರ, ಯುವ ಇಂಜಿನಿಯರ್‌ಗಳು ಉದ್ಯೋಗದ ಕೊರತೆಯಿಂದಾಗಿ ಕಾರ್ಮಿಕರಾಗಿ ದುಡಿಯುತ್ತಾರೆ” ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

“ಚಿಕ್ಕಪುಟ್ಟ ಅಂಗಡಿಗಳು, ಗೃಹ ಸಂಬಂಧಿ ಕೆಲಸಗಳು ದೊಡ್ಡ ಉದ್ಯೋಗ ಮೂಲವಾಗಿವೆ. ಆದರೆ ಇವುಗಳನ್ನು ಅವಲಂಬಿಸಿರುವವರು ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ನಿಂದ ತೀವ್ರವಾಗಿ ಹೊಡೆತ ತಿಂದಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಉದ್ಯೋಗದ ಮತ್ತೊಂದು ಪ್ರಮುಖ ಮೂಲವೆಂದರೆ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್‌ಯು). ಆದರೆ ಅವುಗಳನ್ನು ಸಹ ಮುಚ್ಚಲಾಗುತ್ತಿದೆ. ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಸಹ ಖಾಸಗೀಕರಣಗೊಳಿಸಲಾಗುತ್ತಿದೆ, ಹೀಗಾಗಿ ಎಲ್ಲಾ ಉದ್ಯೋಗಾವಕಾಶಗಳನ್ನು ಕೊನೆಗೊಳಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ.ಬಂಗಾಳ: ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂರು ಸಾವು

ಬೆಲೆ ಏರಿಕೆಯನ್ನು ಉಲ್ಲೇಖಿಸಿದ ಅವರು, “ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 60 ರೂ. ಇತ್ತು. ಆದರೆ ಈಗ ಅದು ಲೀಟರ್‌ಗೆ 107 ರೂ.ಗೆ ಏರಿಕೆಯಾಗಿದೆ. 400 ರೂಪಾಯಿ ಬೆಲೆಯ ಎಲ್‌ಪಿಜಿ ಸಿಲಿಂಡರ್ ಈಗ 1,000 ರೂಪಾಯಿಗಿಂತ ಹೆಚ್ಚಿದೆ” ಎಂದು ಟೀಕಿಸಿದ್ದಾರೆ.

“ಸಾಮಾನ್ಯ ಜನರ ಜೇಬಿನಿಂದ ಹಣ ತೆಗೆದು ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ, ಈಗ ದೇಶದಲ್ಲಿ ಎರಡು ವಿಭಾಗಗಳಿವೆ. ಒಂದು ವಿಭಾಗದಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿಗಳು ಇದ್ದಾರೆ. ಮತ್ತೊಂದು ವಿಭಾಗದಲ್ಲಿ ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿ ಮಾಲೀಕರು ಇದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಜನರು ಈ ಪರಿಸ್ಥಿತಿಯನ್ನು ಬಯಸುವುದಿಲ್ಲ. ಅವರು ನ್ಯಾಯವನ್ನು ಬಯಸುತ್ತಾರೆ. ಅವರಿಗೆ ನ್ಯಾಯವನ್ನು ದೊರಕಿಸುವುದು ಭಾರತ್ ಜೋಡೋ ಯಾತ್ರೆಯ ಮುಖ್ಯ ಗುರಿಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...