Homeಮುಖಪುಟಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್ ರಾಮನು ನಡೆಸಿದ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಮಹಾತ್ಮ ಗಾಂಧಿಯವರು ಬಳಸಿದ ‘ಹೇ ರಾಮ್’ ಎಂಬ ನುಡಿಗಟ್ಟು ‘ಜೀವನದ ಮಾರ್ಗ’ವನ್ನು ಸೂಚಿಸುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಮಧ್ಯಪ್ರದೇಶದ ಮೂಲಕ ಹಾದು ಹೋಗುತ್ತಿರುವ ಭಾರತ್ ಜೋಡೋ ಪಾದಯಾತ್ರೆಯು ಶುಕ್ರವಾರ ಸಂಜೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ವಿರಾಮ ಪಡೆಯಿತು. “ಮಧ್ಯಪ್ರದೇಶದಲ್ಲಿ ಯಾತ್ರೆಯ ವೇಳೆ ನನ್ನನ್ನು ಭೇಟಿಯಾಗಲು ಬಂದಿದ್ದ ಅರ್ಚಕರೊಬ್ಬರು ಗಾಂಧೀಜಿಯವರು ಆಗಾಗ ಬಳಸುತ್ತಿದ್ದ ‘ಹೇ ರಾಮ್’ ಪದದ ಅರ್ಥವನ್ನು ಹೇಳಿದರು. ಹೇ ರಾಮ್ ಒಂದು ಜೀವನ ವಿಧಾನ. ಇದು ಇಡೀ ಜಗತ್ತಿಗೆ ಪ್ರೀತಿ, ಭ್ರಾತೃತ್ವ, ಗೌರವ ಮತ್ತು ತಪಸ್ಸಿನ ಅರ್ಥವನ್ನು ಕಲಿಸಿತು” ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

“ಅದೇ ರೀತಿ, ‘ಜೈ ಸಿಯಾ ರಾಮ್’ ಎಂದರೆ ಸೀತೆ ಮತ್ತು ರಾಮರು ಒಬ್ಬರೇ. ಶ್ರೀರಾಮನು ಸೀತೆಯ ಗೌರವಕ್ಕಾಗಿ ಹೋರಾಡಿದನು” ಎಂದು ಅವರು ತಿಳಿಸಿದ್ದಾರೆ.

“ಜೈ ಶ್ರೀರಾಮ್ ಎಂದರೆ ಭಗವಾನ್ ರಾಮನನ್ನು ಸ್ತುತಿಸುವುದಾಗಿದೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್‌ ರಾಮನಂತೆ ತಮ್ಮ ಜೀವನವನ್ನು ನಡೆಸುತ್ತಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಭಗವಾನ್ ರಾಮನ ಅಸ್ತಿತ್ವವನ್ನು ಎಂದಿಗೂ ನಂಬದವರು ಈಗ ಅವನನ್ನು ನಿಂದಿಸಲು ‘ರಾವಣನನ್ನು ಕರೆತಂದಿದ್ದಾರೆ’” ಎಂದು ಮೋದಿ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದ್ದರು. “ಎಲ್ಲಾ ಚುನಾವಣೆಗಳಲ್ಲಿಯೂ ತಮ್ಮ ಮುಖವನ್ನು ನೋಡಿಕೊಂಡು ಮತ ಚಲಾಯಿಸುವಂತೆ ಪ್ರಧಾನಿ ಕೇಳುತ್ತಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. “ನೀವು ರಾವಣನಂತೆ 100 ತಲೆ ಹೊಂದಿದ್ದೀರಾ?” ಎಂದು ಖರ್ಗೆ ಪ್ರಶ್ನಿಸಿದ್ದರು.

ಇದೇ ವೇಳೆ, ಕೇಂದ್ರ ಹಾಗೂ ಮಧ್ಯಪ್ರದೇಶದ ಬಿಜೆಪಿ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ರಾಹುಲ್ ಗಾಂಧಿ, “ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ ಮತ್ತು 50 ಸಾವಿರದಿಂದ ಒಂದು ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದೆ ಸತಾಯಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಪಾಲಕರು ತಮ್ಮ ಮಗನನ್ನು ಇಂಜಿನಿಯರ್ ಮಾಡಲು ಶೈಕ್ಷಣಿಕ ಸಾಲವನ್ನು ತೆಗೆದುಕೊಳ್ಳುತ್ತಾರೆ, ಆದರೆ ಪದವಿ ಪಡೆದ ನಂತರ, ಯುವ ಇಂಜಿನಿಯರ್‌ಗಳು ಉದ್ಯೋಗದ ಕೊರತೆಯಿಂದಾಗಿ ಕಾರ್ಮಿಕರಾಗಿ ದುಡಿಯುತ್ತಾರೆ” ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

“ಚಿಕ್ಕಪುಟ್ಟ ಅಂಗಡಿಗಳು, ಗೃಹ ಸಂಬಂಧಿ ಕೆಲಸಗಳು ದೊಡ್ಡ ಉದ್ಯೋಗ ಮೂಲವಾಗಿವೆ. ಆದರೆ ಇವುಗಳನ್ನು ಅವಲಂಬಿಸಿರುವವರು ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ನಿಂದ ತೀವ್ರವಾಗಿ ಹೊಡೆತ ತಿಂದಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಉದ್ಯೋಗದ ಮತ್ತೊಂದು ಪ್ರಮುಖ ಮೂಲವೆಂದರೆ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್‌ಯು). ಆದರೆ ಅವುಗಳನ್ನು ಸಹ ಮುಚ್ಚಲಾಗುತ್ತಿದೆ. ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಸಹ ಖಾಸಗೀಕರಣಗೊಳಿಸಲಾಗುತ್ತಿದೆ, ಹೀಗಾಗಿ ಎಲ್ಲಾ ಉದ್ಯೋಗಾವಕಾಶಗಳನ್ನು ಕೊನೆಗೊಳಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ.ಬಂಗಾಳ: ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂರು ಸಾವು

ಬೆಲೆ ಏರಿಕೆಯನ್ನು ಉಲ್ಲೇಖಿಸಿದ ಅವರು, “ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 60 ರೂ. ಇತ್ತು. ಆದರೆ ಈಗ ಅದು ಲೀಟರ್‌ಗೆ 107 ರೂ.ಗೆ ಏರಿಕೆಯಾಗಿದೆ. 400 ರೂಪಾಯಿ ಬೆಲೆಯ ಎಲ್‌ಪಿಜಿ ಸಿಲಿಂಡರ್ ಈಗ 1,000 ರೂಪಾಯಿಗಿಂತ ಹೆಚ್ಚಿದೆ” ಎಂದು ಟೀಕಿಸಿದ್ದಾರೆ.

“ಸಾಮಾನ್ಯ ಜನರ ಜೇಬಿನಿಂದ ಹಣ ತೆಗೆದು ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ, ಈಗ ದೇಶದಲ್ಲಿ ಎರಡು ವಿಭಾಗಗಳಿವೆ. ಒಂದು ವಿಭಾಗದಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿಗಳು ಇದ್ದಾರೆ. ಮತ್ತೊಂದು ವಿಭಾಗದಲ್ಲಿ ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿ ಮಾಲೀಕರು ಇದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಜನರು ಈ ಪರಿಸ್ಥಿತಿಯನ್ನು ಬಯಸುವುದಿಲ್ಲ. ಅವರು ನ್ಯಾಯವನ್ನು ಬಯಸುತ್ತಾರೆ. ಅವರಿಗೆ ನ್ಯಾಯವನ್ನು ದೊರಕಿಸುವುದು ಭಾರತ್ ಜೋಡೋ ಯಾತ್ರೆಯ ಮುಖ್ಯ ಗುರಿಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....