ಮಧ್ಯಪ್ರದೇಶದ ಬಿಜೆಪಿ, ಆರ್ಎಸ್ಎಸ್ ಮುಖಂಡನೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ. ತಂದೆ ಮಗಳ ಸಂಬಂಧಕ್ಕೆ ಮಸಿ ಬಳಿದಿರುವ ಆರೋಪಿಯ ಕೃತ್ಯವನ್ನು ಕಾಂಗ್ರೆಸ್ ಖಂಡಿಸಿದೆ.
ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸೆದ್ದು, ಸಂಬಂಧಗಳಿಗೆ ಮಸಿ ಬಳಿದಿರುವ ಈತ ರಾಕ್ಷಸರಿಗಿಂತ ಕಡೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಮಧ್ಯಪ್ರದೇಶದ ಪೊವಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ವಾರಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆರೋಪಿಯನ್ನು ಬಿಜೆಪಿ, ಆರ್ಎಸ್ಎಸ್ ಮುಖಂಡ ಸತೀಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ತಂದೆಯೇ ತನ್ನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದನ್ನು ಪ್ರತಿಭಟಿಸಿದ 17 ವರ್ಷದ ಅಪ್ರಾಪ್ತ ಬಾಲಕಿ, ಕಷ್ಟಪಟ್ಟು ಪೊಲೀಸ್ ಠಾಣೆ ತಲುಪಿ ಅಲ್ಲಿ ತನ್ನ ತಂದೆಯ ದುಷ್ಕೃತ್ಯಗಳನ್ನು ವಿವರಿಸಿದ್ದಾಳೆ ಎಂದು ಹೇಳಲಾಗುತ್ತಿದೆ. ಬಾಲಕಿಯ ದೂರಿನ ಮೇರೆಗೆ ಪೊಲೀಸರು ಸಂಬಂಧಪಟ್ಟ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್ ಪಾಸ್ವಾನ್ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್!
ಎಫ್ಐಆರ್ ದಾಖಲಾದ ಬಳಿಕ, ಆರೋಪಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಬಿಜೆಪಿ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಸೇರಿದಂತೆ ಇತರ ಹಿರಿಯ ಬಿಜೆಪಿ ನಾಯಕರೊಂದಿಗಿನ ಆರೋಪಿಯ ಚಿತ್ರಗಳು ವೈರಲ್ ಆಗುತ್ತಿವೆ.
बीजेपी-आरएसएस का घिनौना चेहरा,
–बीजेपी नेता ने अपनी ही बेटी से दुष्कर्म किया;प्रदेश के पन्ना में आरएसएस और बीजेपी का घिनौना रूप सामने आया है। आरएसएस कार्यकर्ता और बीजेपी नेता सतीश मिश्रा ने अपनी ही बेटी का दुष्कर्म किया।
शिवराज जी,
ये तो राक्षस से भी ज़्यादा हो गया। pic.twitter.com/FkN3tG5U0H— MP Congress (@INCMP) June 25, 2021
ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿ, ‘ಬಿಜೆಪಿ,ಆರ್ಎಸ್ಎಸ್ನ ಅಸಹ್ಯಕರ ಮುಖ ಇದು. ಬಿಜೆಪಿ ಮುಖಂಡರು ತಮ್ಮ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆರ್ಎಸ್ಎಸ್ ಮತ್ತು ಬಿಜೆಪಿಯ ಕೆಟ್ಟ ರೂಪ ರಾಜ್ಯದ ಪನ್ನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರ್ಎಸ್ಎಸ್ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡ ಸತೀಶ್ ಮಿಶ್ರಾ ತಮ್ಮ ಸ್ವಂತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಜೀ, ಈ ಮನುಷ್ಯ ರಾಕ್ಷಸನಿಗಿಂತ ಕಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
’ಮುದ್ವಾಯಿ ಗ್ರಾಮದ 17 ವರ್ಷದ ಬಾಲಕಿಯೊಬ್ಬಳು ತನ್ನ ತಂದೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊವಾಯ್ ಠಾಣೆಗೆ ದೂರು ನೀಡಿದ್ದಾರೆ. ಪೊವಾಯ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡು, ಅಪ್ರಾಪ್ತ ಬಾಲಕಿಗೆ ಭದ್ರತೆ ಒದಗಿಸಿದ್ದಾರೆ. ಜೊತೆಗೆ, ಶೀಘ್ರವೇ ಕ್ರಮ ಕೈಗೊಂಡು, ಪನ್ನಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ಅವರ ನೇತೃತ್ವದಲ್ಲಿ ತಂಡವನ್ನು ರಚಿಸುವ ಮೂಲಕ, ಅಮಾನವೀಯ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ ಸತೀಶ್ ಮಿಶ್ರಾ ಅವರನ್ನು ಮುದ್ವಾರಿ ಬಳಿ ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!