Homeಮುಖಪುಟಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು...

ಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -
ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯಾತ್ರೆ ಅಸ್ಸಾಂನ ಶಿವಸಾಗರಕ್ಕೆ ತಲುಪಿದೆ. ನಾಗಾಲ್ಯಾಂಡ್‌ನಿಂದ ಶಿವಸಾಗರ್‌ನ ಹಲುವತಿಂಗ್‌ ಮೂಲಕ ಅಸ್ಸಾಂಗೆ ಭಾರತ್‌ ಜೋಡೋ ನ್ಯಾಯ ಯಾತ್ರೆ ಪ್ರವೇಶಿಸಿದೆ. ಇಂದು ಮುಂಜಾನೆ ನಾಗಾಲ್ಯಾಂಡ್‌ನ ತುಲಿಯಿಂದ ಬಸ್‌ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ, ಬೆಳಿಗ್ಗೆ ಸುಮಾರು 9.45ರ ವೇಳೆಗೆ ಅಸ್ಸಾಂ ಪ್ರವೇಶಿಸಿದ್ದರು.

ಹಲುವತಿಂಗ್‌ನಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರನ್ನು ರಾಜ್ಯಕ್ಕೆ ಬರಮಾಡಿಕೊಂಡಿದ್ದಾರೆ. ಅಸ್ಸಾಂನಲ್ಲಿ ತ್ರಿವರ್ಣ ಧ್ವಜವನ್ನು ಹಸ್ತಾಂತರ ಕಾರ್ಯಕ್ರಮವು ರಾಜ್ಯದಲ್ಲಿ ಯಾತ್ರೆ ಆರಂಭಕ್ಕೆ ಮೊದಲು ನಡೆದಿದೆ.

ಅಸ್ಸಾಂನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಹುಶಃ ಭಾರತದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂ ಸರಕಾರ, ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ಬಿಜೆಪಿ-ಆರೆಸ್ಸೆಸ್‌ ದೇಶ ಮತ್ತು ರಾಜ್ಯಗಳಲ್ಲಿ ಅನ್ಯಾಯ ಮಾಡುತ್ತಿದೆ. ಆರ್ಥಿಕ ಅನ್ಯಾಯ, ಸಾಮಾಜಿಕ ಅನ್ಯಾಯ ಅಥವಾ ರಾಜಕೀಯ ಅನ್ಯಾಯವಾಗುತ್ತಿದೆ. ಮಣಿಪುರದಲ್ಲಿ ಅಂತರ್ಯುದ್ಧದ ವಾತಾವರಣವಿದ್ದು, ಇಲ್ಲಿಯವರೆಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿಲ್ಲ. ನಾಗಾಲ್ಯಾಂಡ್‌ನಲ್ಲಿ 9 ವರ್ಷಗಳ ಹಿಂದೆ ಮೋದಿ ದೊಡ್ಡ ಭರವಸೆಗಳನ್ನು ಕೊಟ್ಟಿದ್ದರು. ಅವರು ನಾಗಾ ಒಪ್ಪಂದದ ಬಗ್ಗೆ ಭರವಸೆ ನೀಡಿದ್ದರು. ಆ ಒಪ್ಪಂದ ಈಗ ಏನಾಗಿದೆ ಎಂದು ನಾಗಾಲ್ಯಾಂಡ್‌ನ ಜನರು ಇಂದು ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಅಸ್ಸಾಂನಲ್ಲೂ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಬಹುಶಃ ಭಾರತದ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂನ ಸರಕಾರವಾಗಿದೆ. ನಮಗೆ ನಾಗಾಲ್ಯಾಂಡ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಮತ್ತು ಅಸ್ಸಾಂನಲ್ಲೂ ನಾವು ಅದೇ ರೀತಿ ಬೆಂಬಲ ಪಡೆಯುತ್ತೇನೆ ಎಂದು ನಾನು ಭಾವಿಸುತ್ತೇನೆ. ನಾವು ಅಸ್ಸಾಂನ ಇತಿಹಾಸವನ್ನು ಮತ್ತೆ ಪುನರಾವರ್ತಿಸುತ್ತಿದ್ದೇವೆ, ಶಂಕರ್ ದೇವ್ ಜಿ ನಿಮಗೆ ದಾರಿ ತೋರಿಸಿದ್ದಾರೆ, ಎಲ್ಲರನ್ನೂ ಒಗ್ಗೂಡಿಸಲು ಕೆಲಸ ಮಾಡಿದ್ದಾರೆ. ಅದೇ ರೀತಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಯಾಣವು ಅಸ್ಸಾಂನ ಜನರಿಗೆ ಉತ್ಸಾಹ ಮತ್ತು ಧೈರ್ಯದ ಪ್ರಯಾಣವಾಗಿದೆ ಏಕೆಂದರೆ ಇಲ್ಲಿನ ಜನರು ತೊಂದರೆಗೀಡಾಗಿದ್ದಾರೆ. ಜನರು ರಾಹುಲ್ ಗಾಂಧಿ ಇಲ್ಲಿಗೆ ಯಾವಾಗ ಬರುತ್ತಾರೆ ಎಂದು ಕಾಯುತ್ತಿದ್ದಾರೆ. ಇದು ಐತಿಹಾಸಿಕ ಪ್ರಯಾಣವಾಗಿದೆ. ನಮ್ಮ ಪಕ್ಷವು ಭಾರತದ ಸಂವಿಧಾನವನ್ನು ನಂಬುತ್ತದೆ. ಇಂದು
ಬಿಜೆಪಿಯು ಶಂಕರಾಚಾರ್ಯರಿಗಿಂತ ಹೆಚ್ಚು ಜ್ಞಾನಿ ಎಂದು ಹೇಳುತ್ತಿದೆ. ಅವರಲ್ಲಿ ಅಹಂಕಾರ ತುಂಬಿದೆ ಎಂದು ಇದೇ ವೇಳೆ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.
ನಮಗೆ ನ್ಯಾಯದ ಹಕ್ಕು ಸಿಗುವವರೆಗೂ ಯಾತ್ರೆ ಮುಂದುವರಿಯಲಿದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಭಾರತ ಜೋಡೋ ನ್ಯಾಯ ಯಾತ್ರೆಯ ಐದನೇ ದಿನವಾದ ಇಂದು ದೇಶದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಸಾರ್ವಜನಿಕರು ಈ ‘ನ್ಯಾಯ ಯಾತ್ರೆ’ಯಲ್ಲಿ ನಮ್ಮೊಂದಿಗೆ ಒಗ್ಗಟ್ಟಾಗಿ ಮುನ್ನಡೆಯುತ್ತಿದ್ದಾರೆ. ಈ ಯಾತ್ರೆಯು ನಮಗೆ ನ್ಯಾಯದ ಹಕ್ಕು ಸಿಗುವವರೆಗೆ ಮುಂದುವರಿಯುತ್ತದೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಮಣಿಪುರದ ತೌಬಲ್‌ನಿಂದ ಪ್ರಾರಂಭವಾಯಿತು. ಬಳಿಕ ನಾಗಾಲ್ಯಾಂಡ್‌ ಮೂಲಕ ಇಂದು ಅಸ್ಸಾಂಗೆ ತಲುಪಿದೆ. ಯಾತ್ರೆಯು 67 ದಿನಗಳಲ್ಲಿ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದ್ದು 110 ಜಿಲ್ಲೆಗಳಲ್ಲಿ ಸಂಚರಿಸಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...