Homeಮುಖಪುಟಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು...

ಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -
ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯಾತ್ರೆ ಅಸ್ಸಾಂನ ಶಿವಸಾಗರಕ್ಕೆ ತಲುಪಿದೆ. ನಾಗಾಲ್ಯಾಂಡ್‌ನಿಂದ ಶಿವಸಾಗರ್‌ನ ಹಲುವತಿಂಗ್‌ ಮೂಲಕ ಅಸ್ಸಾಂಗೆ ಭಾರತ್‌ ಜೋಡೋ ನ್ಯಾಯ ಯಾತ್ರೆ ಪ್ರವೇಶಿಸಿದೆ. ಇಂದು ಮುಂಜಾನೆ ನಾಗಾಲ್ಯಾಂಡ್‌ನ ತುಲಿಯಿಂದ ಬಸ್‌ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ, ಬೆಳಿಗ್ಗೆ ಸುಮಾರು 9.45ರ ವೇಳೆಗೆ ಅಸ್ಸಾಂ ಪ್ರವೇಶಿಸಿದ್ದರು.

ಹಲುವತಿಂಗ್‌ನಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರನ್ನು ರಾಜ್ಯಕ್ಕೆ ಬರಮಾಡಿಕೊಂಡಿದ್ದಾರೆ. ಅಸ್ಸಾಂನಲ್ಲಿ ತ್ರಿವರ್ಣ ಧ್ವಜವನ್ನು ಹಸ್ತಾಂತರ ಕಾರ್ಯಕ್ರಮವು ರಾಜ್ಯದಲ್ಲಿ ಯಾತ್ರೆ ಆರಂಭಕ್ಕೆ ಮೊದಲು ನಡೆದಿದೆ.

ಅಸ್ಸಾಂನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಹುಶಃ ಭಾರತದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂ ಸರಕಾರ, ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ಬಿಜೆಪಿ-ಆರೆಸ್ಸೆಸ್‌ ದೇಶ ಮತ್ತು ರಾಜ್ಯಗಳಲ್ಲಿ ಅನ್ಯಾಯ ಮಾಡುತ್ತಿದೆ. ಆರ್ಥಿಕ ಅನ್ಯಾಯ, ಸಾಮಾಜಿಕ ಅನ್ಯಾಯ ಅಥವಾ ರಾಜಕೀಯ ಅನ್ಯಾಯವಾಗುತ್ತಿದೆ. ಮಣಿಪುರದಲ್ಲಿ ಅಂತರ್ಯುದ್ಧದ ವಾತಾವರಣವಿದ್ದು, ಇಲ್ಲಿಯವರೆಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿಲ್ಲ. ನಾಗಾಲ್ಯಾಂಡ್‌ನಲ್ಲಿ 9 ವರ್ಷಗಳ ಹಿಂದೆ ಮೋದಿ ದೊಡ್ಡ ಭರವಸೆಗಳನ್ನು ಕೊಟ್ಟಿದ್ದರು. ಅವರು ನಾಗಾ ಒಪ್ಪಂದದ ಬಗ್ಗೆ ಭರವಸೆ ನೀಡಿದ್ದರು. ಆ ಒಪ್ಪಂದ ಈಗ ಏನಾಗಿದೆ ಎಂದು ನಾಗಾಲ್ಯಾಂಡ್‌ನ ಜನರು ಇಂದು ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಅಸ್ಸಾಂನಲ್ಲೂ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಬಹುಶಃ ಭಾರತದ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂನ ಸರಕಾರವಾಗಿದೆ. ನಮಗೆ ನಾಗಾಲ್ಯಾಂಡ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಮತ್ತು ಅಸ್ಸಾಂನಲ್ಲೂ ನಾವು ಅದೇ ರೀತಿ ಬೆಂಬಲ ಪಡೆಯುತ್ತೇನೆ ಎಂದು ನಾನು ಭಾವಿಸುತ್ತೇನೆ. ನಾವು ಅಸ್ಸಾಂನ ಇತಿಹಾಸವನ್ನು ಮತ್ತೆ ಪುನರಾವರ್ತಿಸುತ್ತಿದ್ದೇವೆ, ಶಂಕರ್ ದೇವ್ ಜಿ ನಿಮಗೆ ದಾರಿ ತೋರಿಸಿದ್ದಾರೆ, ಎಲ್ಲರನ್ನೂ ಒಗ್ಗೂಡಿಸಲು ಕೆಲಸ ಮಾಡಿದ್ದಾರೆ. ಅದೇ ರೀತಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಯಾಣವು ಅಸ್ಸಾಂನ ಜನರಿಗೆ ಉತ್ಸಾಹ ಮತ್ತು ಧೈರ್ಯದ ಪ್ರಯಾಣವಾಗಿದೆ ಏಕೆಂದರೆ ಇಲ್ಲಿನ ಜನರು ತೊಂದರೆಗೀಡಾಗಿದ್ದಾರೆ. ಜನರು ರಾಹುಲ್ ಗಾಂಧಿ ಇಲ್ಲಿಗೆ ಯಾವಾಗ ಬರುತ್ತಾರೆ ಎಂದು ಕಾಯುತ್ತಿದ್ದಾರೆ. ಇದು ಐತಿಹಾಸಿಕ ಪ್ರಯಾಣವಾಗಿದೆ. ನಮ್ಮ ಪಕ್ಷವು ಭಾರತದ ಸಂವಿಧಾನವನ್ನು ನಂಬುತ್ತದೆ. ಇಂದು
ಬಿಜೆಪಿಯು ಶಂಕರಾಚಾರ್ಯರಿಗಿಂತ ಹೆಚ್ಚು ಜ್ಞಾನಿ ಎಂದು ಹೇಳುತ್ತಿದೆ. ಅವರಲ್ಲಿ ಅಹಂಕಾರ ತುಂಬಿದೆ ಎಂದು ಇದೇ ವೇಳೆ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.
ನಮಗೆ ನ್ಯಾಯದ ಹಕ್ಕು ಸಿಗುವವರೆಗೂ ಯಾತ್ರೆ ಮುಂದುವರಿಯಲಿದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಭಾರತ ಜೋಡೋ ನ್ಯಾಯ ಯಾತ್ರೆಯ ಐದನೇ ದಿನವಾದ ಇಂದು ದೇಶದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಸಾರ್ವಜನಿಕರು ಈ ‘ನ್ಯಾಯ ಯಾತ್ರೆ’ಯಲ್ಲಿ ನಮ್ಮೊಂದಿಗೆ ಒಗ್ಗಟ್ಟಾಗಿ ಮುನ್ನಡೆಯುತ್ತಿದ್ದಾರೆ. ಈ ಯಾತ್ರೆಯು ನಮಗೆ ನ್ಯಾಯದ ಹಕ್ಕು ಸಿಗುವವರೆಗೆ ಮುಂದುವರಿಯುತ್ತದೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಮಣಿಪುರದ ತೌಬಲ್‌ನಿಂದ ಪ್ರಾರಂಭವಾಯಿತು. ಬಳಿಕ ನಾಗಾಲ್ಯಾಂಡ್‌ ಮೂಲಕ ಇಂದು ಅಸ್ಸಾಂಗೆ ತಲುಪಿದೆ. ಯಾತ್ರೆಯು 67 ದಿನಗಳಲ್ಲಿ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದ್ದು 110 ಜಿಲ್ಲೆಗಳಲ್ಲಿ ಸಂಚರಿಸಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....