Homeಮುಖಪುಟಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು...

ಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -
ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯಾತ್ರೆ ಅಸ್ಸಾಂನ ಶಿವಸಾಗರಕ್ಕೆ ತಲುಪಿದೆ. ನಾಗಾಲ್ಯಾಂಡ್‌ನಿಂದ ಶಿವಸಾಗರ್‌ನ ಹಲುವತಿಂಗ್‌ ಮೂಲಕ ಅಸ್ಸಾಂಗೆ ಭಾರತ್‌ ಜೋಡೋ ನ್ಯಾಯ ಯಾತ್ರೆ ಪ್ರವೇಶಿಸಿದೆ. ಇಂದು ಮುಂಜಾನೆ ನಾಗಾಲ್ಯಾಂಡ್‌ನ ತುಲಿಯಿಂದ ಬಸ್‌ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ, ಬೆಳಿಗ್ಗೆ ಸುಮಾರು 9.45ರ ವೇಳೆಗೆ ಅಸ್ಸಾಂ ಪ್ರವೇಶಿಸಿದ್ದರು.

ಹಲುವತಿಂಗ್‌ನಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರನ್ನು ರಾಜ್ಯಕ್ಕೆ ಬರಮಾಡಿಕೊಂಡಿದ್ದಾರೆ. ಅಸ್ಸಾಂನಲ್ಲಿ ತ್ರಿವರ್ಣ ಧ್ವಜವನ್ನು ಹಸ್ತಾಂತರ ಕಾರ್ಯಕ್ರಮವು ರಾಜ್ಯದಲ್ಲಿ ಯಾತ್ರೆ ಆರಂಭಕ್ಕೆ ಮೊದಲು ನಡೆದಿದೆ.

ಅಸ್ಸಾಂನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಹುಶಃ ಭಾರತದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂ ಸರಕಾರ, ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ಬಿಜೆಪಿ-ಆರೆಸ್ಸೆಸ್‌ ದೇಶ ಮತ್ತು ರಾಜ್ಯಗಳಲ್ಲಿ ಅನ್ಯಾಯ ಮಾಡುತ್ತಿದೆ. ಆರ್ಥಿಕ ಅನ್ಯಾಯ, ಸಾಮಾಜಿಕ ಅನ್ಯಾಯ ಅಥವಾ ರಾಜಕೀಯ ಅನ್ಯಾಯವಾಗುತ್ತಿದೆ. ಮಣಿಪುರದಲ್ಲಿ ಅಂತರ್ಯುದ್ಧದ ವಾತಾವರಣವಿದ್ದು, ಇಲ್ಲಿಯವರೆಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿಲ್ಲ. ನಾಗಾಲ್ಯಾಂಡ್‌ನಲ್ಲಿ 9 ವರ್ಷಗಳ ಹಿಂದೆ ಮೋದಿ ದೊಡ್ಡ ಭರವಸೆಗಳನ್ನು ಕೊಟ್ಟಿದ್ದರು. ಅವರು ನಾಗಾ ಒಪ್ಪಂದದ ಬಗ್ಗೆ ಭರವಸೆ ನೀಡಿದ್ದರು. ಆ ಒಪ್ಪಂದ ಈಗ ಏನಾಗಿದೆ ಎಂದು ನಾಗಾಲ್ಯಾಂಡ್‌ನ ಜನರು ಇಂದು ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಅಸ್ಸಾಂನಲ್ಲೂ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಬಹುಶಃ ಭಾರತದ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂನ ಸರಕಾರವಾಗಿದೆ. ನಮಗೆ ನಾಗಾಲ್ಯಾಂಡ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಮತ್ತು ಅಸ್ಸಾಂನಲ್ಲೂ ನಾವು ಅದೇ ರೀತಿ ಬೆಂಬಲ ಪಡೆಯುತ್ತೇನೆ ಎಂದು ನಾನು ಭಾವಿಸುತ್ತೇನೆ. ನಾವು ಅಸ್ಸಾಂನ ಇತಿಹಾಸವನ್ನು ಮತ್ತೆ ಪುನರಾವರ್ತಿಸುತ್ತಿದ್ದೇವೆ, ಶಂಕರ್ ದೇವ್ ಜಿ ನಿಮಗೆ ದಾರಿ ತೋರಿಸಿದ್ದಾರೆ, ಎಲ್ಲರನ್ನೂ ಒಗ್ಗೂಡಿಸಲು ಕೆಲಸ ಮಾಡಿದ್ದಾರೆ. ಅದೇ ರೀತಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಯಾಣವು ಅಸ್ಸಾಂನ ಜನರಿಗೆ ಉತ್ಸಾಹ ಮತ್ತು ಧೈರ್ಯದ ಪ್ರಯಾಣವಾಗಿದೆ ಏಕೆಂದರೆ ಇಲ್ಲಿನ ಜನರು ತೊಂದರೆಗೀಡಾಗಿದ್ದಾರೆ. ಜನರು ರಾಹುಲ್ ಗಾಂಧಿ ಇಲ್ಲಿಗೆ ಯಾವಾಗ ಬರುತ್ತಾರೆ ಎಂದು ಕಾಯುತ್ತಿದ್ದಾರೆ. ಇದು ಐತಿಹಾಸಿಕ ಪ್ರಯಾಣವಾಗಿದೆ. ನಮ್ಮ ಪಕ್ಷವು ಭಾರತದ ಸಂವಿಧಾನವನ್ನು ನಂಬುತ್ತದೆ. ಇಂದು
ಬಿಜೆಪಿಯು ಶಂಕರಾಚಾರ್ಯರಿಗಿಂತ ಹೆಚ್ಚು ಜ್ಞಾನಿ ಎಂದು ಹೇಳುತ್ತಿದೆ. ಅವರಲ್ಲಿ ಅಹಂಕಾರ ತುಂಬಿದೆ ಎಂದು ಇದೇ ವೇಳೆ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.
ನಮಗೆ ನ್ಯಾಯದ ಹಕ್ಕು ಸಿಗುವವರೆಗೂ ಯಾತ್ರೆ ಮುಂದುವರಿಯಲಿದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಭಾರತ ಜೋಡೋ ನ್ಯಾಯ ಯಾತ್ರೆಯ ಐದನೇ ದಿನವಾದ ಇಂದು ದೇಶದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಸಾರ್ವಜನಿಕರು ಈ ‘ನ್ಯಾಯ ಯಾತ್ರೆ’ಯಲ್ಲಿ ನಮ್ಮೊಂದಿಗೆ ಒಗ್ಗಟ್ಟಾಗಿ ಮುನ್ನಡೆಯುತ್ತಿದ್ದಾರೆ. ಈ ಯಾತ್ರೆಯು ನಮಗೆ ನ್ಯಾಯದ ಹಕ್ಕು ಸಿಗುವವರೆಗೆ ಮುಂದುವರಿಯುತ್ತದೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಮಣಿಪುರದ ತೌಬಲ್‌ನಿಂದ ಪ್ರಾರಂಭವಾಯಿತು. ಬಳಿಕ ನಾಗಾಲ್ಯಾಂಡ್‌ ಮೂಲಕ ಇಂದು ಅಸ್ಸಾಂಗೆ ತಲುಪಿದೆ. ಯಾತ್ರೆಯು 67 ದಿನಗಳಲ್ಲಿ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದ್ದು 110 ಜಿಲ್ಲೆಗಳಲ್ಲಿ ಸಂಚರಿಸಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...