Homeಮುಖಪುಟಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಆರೆಸ್ಸೆಸ್‌-ಬಿಜೆಪಿ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

ಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಆರೆಸ್ಸೆಸ್‌-ಬಿಜೆಪಿ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಬಿಜೆಪಿ ಮತ್ತು ಆರ್‌ಎಸ್‌ಎಸ್ ದ್ವೇಷ ಹರಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಎರಡು ದಿನಗಳ ವಿರಾಮದ ಬಳಿಕ ಛತ್ತೀಸ್‌ಗಢದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯನ್ನು ಪುನರಾರಂಭಿಸಿ ಭಾನುವಾರ ಅವರು ಮಾತನಾಡಿದರು.

ಛತ್ತೀಸ್‌ಗಢದ ರಾಯ್‌ಗಢ್‌ನ ಕೆವದಬಾದಿ ಚೌಕ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷವು ಭವಿಷ್ಯದ ಪೀಳಿಗೆಗೆ ದ್ವೇಷ ಮತ್ತು ಹಿಂಸೆ ಅಸ್ತಿತ್ವದಲ್ಲಿಲ್ಲದ ಹಿಂದೂಸ್ಥಾನವನ್ನು ನೀಡಲು ಬಯಸುತ್ತದೆ ಎಂದು ಹೇಳಿದರು.

”ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ದ್ವೇಷ, ಹಿಂಸಾಚಾರ ಹರಡುತ್ತಿದೆ. ಕೆಲವರು ಅವರ ಭಾಷೆಯ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಕೆಲವರು ರಾಜ್ಯಗಳ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಇಂತಹ ಚಿಂತನೆಗಳು ದೇಶವನ್ನು ದುರ್ಬಲಗೊಳಿಸುತ್ತವೆ” ಎಂದರು.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ದ್ವೇಷವನ್ನು ಹರಡುತ್ತಿದೆ. ಆದರೆ, ಈ ದೇಶದ ಡಿಎನ್‌ಎಯಲ್ಲೇ ಪ್ರೀತಿ ಇದೆ. ದೇಶದಲ್ಲಿ, ವಿಭಿನ್ನ ನಂಬಿಕೆ ಮತ್ತು ಆಲೋಚನೆಗಳನ್ನು ಹೊಂದಿರುವ ಜನರು ಪ್ರೀತಿಯಿಂದ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಕಳೆದ ವರ್ಷದ ಮೇ ತಿಂಗಳಿನಿಂದ ನೂರಾರು ಜನರು ಸಾಯುತ್ತಿದ್ದರೂ, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದರೂ, ಇದುವರೆಗೆ ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ರಾಹುಲ್ ವಾಗ್ದಾಳಿ ನಡೆಸಿದರು.

ಈಶಾನ್ಯ ರಾಜ್ಯಗಳಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ಕೇಂದ್ರ ಸರ್ಕಾರಕ್ಕೆ ಅದನ್ನು ನಿಯಂತ್ರಿಸಲು ಆಗುತ್ತಿಲ್ಲ. “ನಾನು ಅಲ್ಲಿಗೆ ಭೇಟಿ ನೀಡಿದ್ದಾಗ ಮೈತೇಯಿ ಸಮುದಾಯದವರು ಕುಕಿ ಭದ್ರತಾ ಸಿಬ್ಬಂದಿಯನ್ನು ಪಡೆಯದಂತೆ ನನ್ನನ್ನು ಕೇಳಿದ್ದರು. ಅದೇ ರೀತಿ ಕುಕಿಗಳು ಮೈತೇಯಿಗಳ ಕುರಿತು ಮಾತನಾಡಿದ್ದರು ಎಂದರು.

ತನ್ನ ಯಾತ್ರಾ ವಾಹನದ ಮೇಲೆ ಹತ್ತಿದೆ ಮಕ್ಕಳಿಗೆ ಸಿಹಿ ಹಂಚಿದ ರಾಹುಲ್ ಗಾಂಧಿ, ಒಬ್ಬ ಹುಡುಗಿಯತ್ರ ನ್ಯಾಯ ಬೇಕಾ, ಅನ್ಯಾಯ ಬೇಕಾ? ಎಂದು ಕೇಳಿದರು. ಅದಕ್ಕೆ ನ್ಯಾಯ ಎಂದು ಉತ್ತರ ಬಾಲಕಿ, ತಾನು ಭಾರತವನ್ನು ತುಂಬಾ ಪ್ರೀತಿಸುವ ಕಾರಣ, ತನಗೆ “ಮೊಹಬ್ಬತ್ ಕಾ ಹಿಂದೂಸ್ತಾನ್” ಬೇಕು ಎಂದು ರಾಹುಲ್ ಗಾಂಧಿಗೆ ಹೇಳಿದಳು.

ಸಶಸ್ತ್ರ ಪಡೆಗಳಲ್ಲಿ ಅಲ್ಪಾವಧಿಗೆ ಸೈನಿಕರನ್ನು ನೇಮಿಸಿಕೊಳ್ಳುವ ಅಗ್ನಿವೀರ್ ಪ್ರಕ್ರಿಯೆಯನ್ನು ಟೀಕಿಸಿದ ಗಾಂಧಿ, 1.50 ಲಕ್ಷ ಯುವಕರಿಗೆ ನ್ಯಾಯ ಸಿಗುವುದನ್ನು ತಮ್ಮ ಪಕ್ಷ ಖಚಿತಪಡಿಸುತ್ತದೆ ಎಂದು ಎಂದರು.

“ಎಲ್ಲಾ ರಕ್ಷಣಾ ಗುತ್ತಿಗೆಗಳನ್ನು (ಕೈಗಾರಿಕೋದ್ಯಮಿ ಗೌತಮ್) ಅದಾನಿಗೆ ನೀಡಲಾಗುತ್ತಿದೆ. ನಾನು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದಾಗ, ನನ್ನ ಸದಸ್ಯತ್ವವನ್ನು ರದ್ದುಗೊಳಿಸಲಾಯಿತು ಮತ್ತು ನನ್ನ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಕೇಳಲಾಯಿತು. ಜನರ ಹೃದಯದಲ್ಲಿ ವಾಸಿಸುತ್ತಿರುವ ನನಗೆ ಮನೆಯ ಅಗತ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಭಾಷಣದ ಸಮಯದಲ್ಲಿ ಜನ ಸಮೂಹಕ್ಕೆ ತಮ್ಮ ಮೊಬೈಲ್ ಫೋನ್ ತೋರಿಸಿದ ರಾಹುಲ್ ಗಾಂಧಿ, “ಇದನ್ನು ಚೀನಾದಲ್ಲಿ ತಯಾರಿಸಲಾಗಿದೆ. ಅಂಬಾನಿಯಂತಹ ಜನರು ಭಾರತದಲ್ಲಿ ಮಾರಾಟ ಮಾಡುತ್ತಿದ್ದಾರೆ. ಚೀನೀಯರು ಮತ್ತು ಅಂಬಾನಿ ಇಂತಹ ಫೋನ್‌ಗಳಿಂದ ಹಣ ಗಳಿಸುತ್ತಿದ್ದಾರೆ. ಈ ಫೋನ್ ಛತ್ತೀಸ್‌ಗಢದಲ್ಲಿ ಉತ್ಪಾದನೆಯಾಗಬೇಕೆಂದು ನಾನು ಬಯಸುತ್ತೇನೆ” ಎಂದರು.

ಇದನ್ನೂ ಓದಿ : ಕೇರಳದ 3 ರಾಜಕೀಯ ಕೊಲೆಗಳ ಸ್ಟೋರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...