Homeಮುಖಪುಟಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಆರೆಸ್ಸೆಸ್‌-ಬಿಜೆಪಿ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

ಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಆರೆಸ್ಸೆಸ್‌-ಬಿಜೆಪಿ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಬಿಜೆಪಿ ಮತ್ತು ಆರ್‌ಎಸ್‌ಎಸ್ ದ್ವೇಷ ಹರಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಎರಡು ದಿನಗಳ ವಿರಾಮದ ಬಳಿಕ ಛತ್ತೀಸ್‌ಗಢದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯನ್ನು ಪುನರಾರಂಭಿಸಿ ಭಾನುವಾರ ಅವರು ಮಾತನಾಡಿದರು.

ಛತ್ತೀಸ್‌ಗಢದ ರಾಯ್‌ಗಢ್‌ನ ಕೆವದಬಾದಿ ಚೌಕ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷವು ಭವಿಷ್ಯದ ಪೀಳಿಗೆಗೆ ದ್ವೇಷ ಮತ್ತು ಹಿಂಸೆ ಅಸ್ತಿತ್ವದಲ್ಲಿಲ್ಲದ ಹಿಂದೂಸ್ಥಾನವನ್ನು ನೀಡಲು ಬಯಸುತ್ತದೆ ಎಂದು ಹೇಳಿದರು.

”ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ದ್ವೇಷ, ಹಿಂಸಾಚಾರ ಹರಡುತ್ತಿದೆ. ಕೆಲವರು ಅವರ ಭಾಷೆಯ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಕೆಲವರು ರಾಜ್ಯಗಳ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಇಂತಹ ಚಿಂತನೆಗಳು ದೇಶವನ್ನು ದುರ್ಬಲಗೊಳಿಸುತ್ತವೆ” ಎಂದರು.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ದ್ವೇಷವನ್ನು ಹರಡುತ್ತಿದೆ. ಆದರೆ, ಈ ದೇಶದ ಡಿಎನ್‌ಎಯಲ್ಲೇ ಪ್ರೀತಿ ಇದೆ. ದೇಶದಲ್ಲಿ, ವಿಭಿನ್ನ ನಂಬಿಕೆ ಮತ್ತು ಆಲೋಚನೆಗಳನ್ನು ಹೊಂದಿರುವ ಜನರು ಪ್ರೀತಿಯಿಂದ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಕಳೆದ ವರ್ಷದ ಮೇ ತಿಂಗಳಿನಿಂದ ನೂರಾರು ಜನರು ಸಾಯುತ್ತಿದ್ದರೂ, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದರೂ, ಇದುವರೆಗೆ ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ರಾಹುಲ್ ವಾಗ್ದಾಳಿ ನಡೆಸಿದರು.

ಈಶಾನ್ಯ ರಾಜ್ಯಗಳಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ಕೇಂದ್ರ ಸರ್ಕಾರಕ್ಕೆ ಅದನ್ನು ನಿಯಂತ್ರಿಸಲು ಆಗುತ್ತಿಲ್ಲ. “ನಾನು ಅಲ್ಲಿಗೆ ಭೇಟಿ ನೀಡಿದ್ದಾಗ ಮೈತೇಯಿ ಸಮುದಾಯದವರು ಕುಕಿ ಭದ್ರತಾ ಸಿಬ್ಬಂದಿಯನ್ನು ಪಡೆಯದಂತೆ ನನ್ನನ್ನು ಕೇಳಿದ್ದರು. ಅದೇ ರೀತಿ ಕುಕಿಗಳು ಮೈತೇಯಿಗಳ ಕುರಿತು ಮಾತನಾಡಿದ್ದರು ಎಂದರು.

ತನ್ನ ಯಾತ್ರಾ ವಾಹನದ ಮೇಲೆ ಹತ್ತಿದೆ ಮಕ್ಕಳಿಗೆ ಸಿಹಿ ಹಂಚಿದ ರಾಹುಲ್ ಗಾಂಧಿ, ಒಬ್ಬ ಹುಡುಗಿಯತ್ರ ನ್ಯಾಯ ಬೇಕಾ, ಅನ್ಯಾಯ ಬೇಕಾ? ಎಂದು ಕೇಳಿದರು. ಅದಕ್ಕೆ ನ್ಯಾಯ ಎಂದು ಉತ್ತರ ಬಾಲಕಿ, ತಾನು ಭಾರತವನ್ನು ತುಂಬಾ ಪ್ರೀತಿಸುವ ಕಾರಣ, ತನಗೆ “ಮೊಹಬ್ಬತ್ ಕಾ ಹಿಂದೂಸ್ತಾನ್” ಬೇಕು ಎಂದು ರಾಹುಲ್ ಗಾಂಧಿಗೆ ಹೇಳಿದಳು.

ಸಶಸ್ತ್ರ ಪಡೆಗಳಲ್ಲಿ ಅಲ್ಪಾವಧಿಗೆ ಸೈನಿಕರನ್ನು ನೇಮಿಸಿಕೊಳ್ಳುವ ಅಗ್ನಿವೀರ್ ಪ್ರಕ್ರಿಯೆಯನ್ನು ಟೀಕಿಸಿದ ಗಾಂಧಿ, 1.50 ಲಕ್ಷ ಯುವಕರಿಗೆ ನ್ಯಾಯ ಸಿಗುವುದನ್ನು ತಮ್ಮ ಪಕ್ಷ ಖಚಿತಪಡಿಸುತ್ತದೆ ಎಂದು ಎಂದರು.

“ಎಲ್ಲಾ ರಕ್ಷಣಾ ಗುತ್ತಿಗೆಗಳನ್ನು (ಕೈಗಾರಿಕೋದ್ಯಮಿ ಗೌತಮ್) ಅದಾನಿಗೆ ನೀಡಲಾಗುತ್ತಿದೆ. ನಾನು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದಾಗ, ನನ್ನ ಸದಸ್ಯತ್ವವನ್ನು ರದ್ದುಗೊಳಿಸಲಾಯಿತು ಮತ್ತು ನನ್ನ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಕೇಳಲಾಯಿತು. ಜನರ ಹೃದಯದಲ್ಲಿ ವಾಸಿಸುತ್ತಿರುವ ನನಗೆ ಮನೆಯ ಅಗತ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಭಾಷಣದ ಸಮಯದಲ್ಲಿ ಜನ ಸಮೂಹಕ್ಕೆ ತಮ್ಮ ಮೊಬೈಲ್ ಫೋನ್ ತೋರಿಸಿದ ರಾಹುಲ್ ಗಾಂಧಿ, “ಇದನ್ನು ಚೀನಾದಲ್ಲಿ ತಯಾರಿಸಲಾಗಿದೆ. ಅಂಬಾನಿಯಂತಹ ಜನರು ಭಾರತದಲ್ಲಿ ಮಾರಾಟ ಮಾಡುತ್ತಿದ್ದಾರೆ. ಚೀನೀಯರು ಮತ್ತು ಅಂಬಾನಿ ಇಂತಹ ಫೋನ್‌ಗಳಿಂದ ಹಣ ಗಳಿಸುತ್ತಿದ್ದಾರೆ. ಈ ಫೋನ್ ಛತ್ತೀಸ್‌ಗಢದಲ್ಲಿ ಉತ್ಪಾದನೆಯಾಗಬೇಕೆಂದು ನಾನು ಬಯಸುತ್ತೇನೆ” ಎಂದರು.

ಇದನ್ನೂ ಓದಿ : ಕೇರಳದ 3 ರಾಜಕೀಯ ಕೊಲೆಗಳ ಸ್ಟೋರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...