Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ-ಆರೆಸ್ಸೆಸ್‌ನಿಂದ ಅಸ್ಸಾಂನ ಭಾಷೆ, ಸಂಸ್ಕೃತಿ ಅಳಿಸಲು ಯತ್ನ; ರಾಹುಲ್‌ ಗಾಂಧಿ...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ-ಆರೆಸ್ಸೆಸ್‌ನಿಂದ ಅಸ್ಸಾಂನ ಭಾಷೆ, ಸಂಸ್ಕೃತಿ ಅಳಿಸಲು ಯತ್ನ; ರಾಹುಲ್‌ ಗಾಂಧಿ ವಾಗ್ಧಾಳಿ

- Advertisement -
- Advertisement -

ಅಸ್ಸಾಂ ಸರಕಾರದ ತೀವ್ರ ಜಟಾಪಟಿಯ ನಡುವೆ ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯಯಾತ್ರೆ ಮುಂದುವರಿದಿದ್ದು, ಬಿಲಾಸ್ಪರಾ ಧುಬ್ರಿಗೆ ಯಾತ್ರೆ ತಲುಪಿದೆ. ಧುಭ್ರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಲಿದ್ದಾರೆ.

ಇದಕ್ಕೂ ಮೊದಲು ಬಾರ್ಪೇಟಾ ಜಿಲ್ಲೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅಸ್ಸಾಂ ಸಿಎಂ ದೇಶದ ಅತಿಭ್ರಷ್ಟ ಸಿಎಂ ಎಂದು ಪುನರುಚ್ಚರಿಸಿದ್ದಾರೆ. ಹಿಮಾಂತ ಬಿಸ್ವ ಶರ್ಮಾಗೆ ಕೇಸ್ ಹಾಕುವ ಮೂಲಕ ನನ್ನನ್ನು ಬೆದರಿಸಬಹುದು ಎಂಬ ಆಲೋಚನೆ ಹೇಗೆ ಬಂದಿದೆಯೋ ಗೊತ್ತಿಲ್ಲ. ಅವರು ಎಷ್ಟು ಸಾಧ್ಯವೋ ಅಷ್ಟು ಕೇಸ್‌ ದಾಖಲಿಸಲಿ, ಇನ್ನೂ 25 ಕೇಸ್ ದಾಖಲು ಮಾಡಿ, ಬಿಜೆಪಿ-ಆರೆಸ್ಸೆಸ್‌ಗೆ ನನ್ನನ್ನು ಬೆದರಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ-ಆರೆಸ್ಸೆಸ್‌ ಅಸ್ಸಾಂನ ಭಾಷೆ, ಸಂಸ್ಕೃತಿಯನ್ನು ಅಳಿಸಲು ಯತ್ನಸುತ್ತಿದೆ, ಅವರು ಅಸ್ಸಾಂನ್ನು ನಾಗ್ಪುರದಿಂದ ನಡೆಸಲು ಬಯಸುತ್ತಾರೆ, ಆದರೆ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ, ಅಸ್ಸಾಂನ್ನು ಅಸ್ಸಾಂನಿಂದ ಮಾತ್ರವೇ ನಡೆಸಲಾಗುವುದು, ಅವರು 24 ಗಂಟೆಯೂ ಭಯ ಮತ್ತು ದ್ವೇಷವನ್ನು ಹರಡುತ್ತಾರೆ, ಅಸ್ಸಾಂನಲ್ಲಿ ಭಯ ಮತ್ತು ದ್ವೇಷ ಹರಡಿ ನಿಮ್ಮ ಭೂಮಿಯನ್ನು ಕದಿಯುತ್ತಾರೆ. ನಿಮ್ಮ ಬಳಿ ವೀಳ್ಯದೆಲೆ ಇದ್ದರೂ ಸುಪಾರಿ ದಂಧೆ ಇವರದ್ದೇ. ಅವರು ನಿಮ್ಮ ಜೇಬು ಲೂಟಿ ಮಾಡುತ್ತಾರೆ, ಇದು ಅವರ ಕೆಲಸ. ಅವರು ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.

ಅವರು ದ್ವೇಷವನ್ನು ಹರಡುತ್ತಾರೆ, ನೀವು ಬೇರೆಡೆ ನೋಡಿದಾಗ ಅವರು ನಿಮ್ಮ ಪಾಕೆಟ್‌ನ್ನು ಲೂಟಿ ಮಾಡುತ್ತಾರೆ. ನೀವು ಮಾದ್ಯಮ ಅಥವಾ ಟಿವಿ ನೋಡಿದಾಗ, ಮುಖ್ಯಮಂತ್ರಿ ಟಿವಿ ಹಿಂದೆ ಇರುತ್ತಾರೆ. ಮಾಧ್ಯಮಗಳು ನಿಮಗೆ ಏನೇ ಹೇಳಿದರೂ ಅಸ್ಸಾಂ ಸಿಎಂ ಅವರಿಗೆ ತಿಳಿಸಿದ್ದನ್ನೇ ಹೇಳಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಅಧಿಕಾರ ಅಮಿತ್ ಶಾ ಕೈಯಲ್ಲಿದೆ. ಹಿಮಂತ ಬಿಸ್ವಾ ಶರ್ಮಾ ಅಮಿತ್ ಶಾ ವಿರುದ್ಧ ಏನಾದರೂ ಹೇಳುವ ಧೈರ್ಯ ಮಾಡಿದರೆ, ಅವರನ್ನು ಎರಡು ನಿಮಿಷಗಳಲ್ಲಿ ಪಕ್ಷದಿಂದ ಹೊರಹಾಕಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಇದಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಪಕ್ಷದ ಇತರ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಹಿಂಸಾಚಾರ, ಪ್ರಚೋದನೆ, ಹಲ್ಲೆ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ,  ಹಿಂಸಾಚಾರ, ಪ್ರಚೋದನೆ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. PDPP ಕಾಯಿದೆಯ 120(B)143/147/188/283/353/ 332/333/427 IPC R/W ಸೆಕ್ಷನ್ 3 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆ ಜ.14ರಂದು ಮಣಿಪುರದಿಂದ ಪ್ರಾರಂಭವಾಗಿತ್ತು. ಇದೀಗ ಯಾತ್ರೆಯ ಅಸ್ಸಾಂನಲ್ಲಿ ಮುಂದುವರಿಯುತ್ತಿದೆ. ಜನವರಿ 25ರವರೆಗೆ ಅಸ್ಸಾಂನಲ್ಲಿ ಯಾತ್ರೆ ಮುಂದುವರಿಯಲಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...