Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ-ಆರೆಸ್ಸೆಸ್‌ನಿಂದ ಅಸ್ಸಾಂನ ಭಾಷೆ, ಸಂಸ್ಕೃತಿ ಅಳಿಸಲು ಯತ್ನ; ರಾಹುಲ್‌ ಗಾಂಧಿ...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ-ಆರೆಸ್ಸೆಸ್‌ನಿಂದ ಅಸ್ಸಾಂನ ಭಾಷೆ, ಸಂಸ್ಕೃತಿ ಅಳಿಸಲು ಯತ್ನ; ರಾಹುಲ್‌ ಗಾಂಧಿ ವಾಗ್ಧಾಳಿ

- Advertisement -
- Advertisement -

ಅಸ್ಸಾಂ ಸರಕಾರದ ತೀವ್ರ ಜಟಾಪಟಿಯ ನಡುವೆ ಅಸ್ಸಾಂನಲ್ಲಿ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯಯಾತ್ರೆ ಮುಂದುವರಿದಿದ್ದು, ಬಿಲಾಸ್ಪರಾ ಧುಬ್ರಿಗೆ ಯಾತ್ರೆ ತಲುಪಿದೆ. ಧುಭ್ರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಲಿದ್ದಾರೆ.

ಇದಕ್ಕೂ ಮೊದಲು ಬಾರ್ಪೇಟಾ ಜಿಲ್ಲೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅಸ್ಸಾಂ ಸಿಎಂ ದೇಶದ ಅತಿಭ್ರಷ್ಟ ಸಿಎಂ ಎಂದು ಪುನರುಚ್ಚರಿಸಿದ್ದಾರೆ. ಹಿಮಾಂತ ಬಿಸ್ವ ಶರ್ಮಾಗೆ ಕೇಸ್ ಹಾಕುವ ಮೂಲಕ ನನ್ನನ್ನು ಬೆದರಿಸಬಹುದು ಎಂಬ ಆಲೋಚನೆ ಹೇಗೆ ಬಂದಿದೆಯೋ ಗೊತ್ತಿಲ್ಲ. ಅವರು ಎಷ್ಟು ಸಾಧ್ಯವೋ ಅಷ್ಟು ಕೇಸ್‌ ದಾಖಲಿಸಲಿ, ಇನ್ನೂ 25 ಕೇಸ್ ದಾಖಲು ಮಾಡಿ, ಬಿಜೆಪಿ-ಆರೆಸ್ಸೆಸ್‌ಗೆ ನನ್ನನ್ನು ಬೆದರಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ-ಆರೆಸ್ಸೆಸ್‌ ಅಸ್ಸಾಂನ ಭಾಷೆ, ಸಂಸ್ಕೃತಿಯನ್ನು ಅಳಿಸಲು ಯತ್ನಸುತ್ತಿದೆ, ಅವರು ಅಸ್ಸಾಂನ್ನು ನಾಗ್ಪುರದಿಂದ ನಡೆಸಲು ಬಯಸುತ್ತಾರೆ, ಆದರೆ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ, ಅಸ್ಸಾಂನ್ನು ಅಸ್ಸಾಂನಿಂದ ಮಾತ್ರವೇ ನಡೆಸಲಾಗುವುದು, ಅವರು 24 ಗಂಟೆಯೂ ಭಯ ಮತ್ತು ದ್ವೇಷವನ್ನು ಹರಡುತ್ತಾರೆ, ಅಸ್ಸಾಂನಲ್ಲಿ ಭಯ ಮತ್ತು ದ್ವೇಷ ಹರಡಿ ನಿಮ್ಮ ಭೂಮಿಯನ್ನು ಕದಿಯುತ್ತಾರೆ. ನಿಮ್ಮ ಬಳಿ ವೀಳ್ಯದೆಲೆ ಇದ್ದರೂ ಸುಪಾರಿ ದಂಧೆ ಇವರದ್ದೇ. ಅವರು ನಿಮ್ಮ ಜೇಬು ಲೂಟಿ ಮಾಡುತ್ತಾರೆ, ಇದು ಅವರ ಕೆಲಸ. ಅವರು ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.

ಅವರು ದ್ವೇಷವನ್ನು ಹರಡುತ್ತಾರೆ, ನೀವು ಬೇರೆಡೆ ನೋಡಿದಾಗ ಅವರು ನಿಮ್ಮ ಪಾಕೆಟ್‌ನ್ನು ಲೂಟಿ ಮಾಡುತ್ತಾರೆ. ನೀವು ಮಾದ್ಯಮ ಅಥವಾ ಟಿವಿ ನೋಡಿದಾಗ, ಮುಖ್ಯಮಂತ್ರಿ ಟಿವಿ ಹಿಂದೆ ಇರುತ್ತಾರೆ. ಮಾಧ್ಯಮಗಳು ನಿಮಗೆ ಏನೇ ಹೇಳಿದರೂ ಅಸ್ಸಾಂ ಸಿಎಂ ಅವರಿಗೆ ತಿಳಿಸಿದ್ದನ್ನೇ ಹೇಳಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಅಧಿಕಾರ ಅಮಿತ್ ಶಾ ಕೈಯಲ್ಲಿದೆ. ಹಿಮಂತ ಬಿಸ್ವಾ ಶರ್ಮಾ ಅಮಿತ್ ಶಾ ವಿರುದ್ಧ ಏನಾದರೂ ಹೇಳುವ ಧೈರ್ಯ ಮಾಡಿದರೆ, ಅವರನ್ನು ಎರಡು ನಿಮಿಷಗಳಲ್ಲಿ ಪಕ್ಷದಿಂದ ಹೊರಹಾಕಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಇದಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಪಕ್ಷದ ಇತರ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಹಿಂಸಾಚಾರ, ಪ್ರಚೋದನೆ, ಹಲ್ಲೆ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ,  ಹಿಂಸಾಚಾರ, ಪ್ರಚೋದನೆ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. PDPP ಕಾಯಿದೆಯ 120(B)143/147/188/283/353/ 332/333/427 IPC R/W ಸೆಕ್ಷನ್ 3 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆ ಜ.14ರಂದು ಮಣಿಪುರದಿಂದ ಪ್ರಾರಂಭವಾಗಿತ್ತು. ಇದೀಗ ಯಾತ್ರೆಯ ಅಸ್ಸಾಂನಲ್ಲಿ ಮುಂದುವರಿಯುತ್ತಿದೆ. ಜನವರಿ 25ರವರೆಗೆ ಅಸ್ಸಾಂನಲ್ಲಿ ಯಾತ್ರೆ ಮುಂದುವರಿಯಲಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...