Homeಮುಖಪುಟಅಧಿಕಾರಕ್ಕಾಗಿ BJP-RSSನವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ: ರಾಹುಲ್ ವಾಗ್ದಾಳಿ

ಅಧಿಕಾರಕ್ಕಾಗಿ BJP-RSSನವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ: ರಾಹುಲ್ ವಾಗ್ದಾಳಿ

- Advertisement -
- Advertisement -

ಮಣಿಪುರದ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯ ವಿವಾದ ಮುಂದುವರೆದಿದ್ದು, ಮಾಜಿ ಸಂಸದ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಅಧಿಕಾರಕ್ಕಾಗಿ ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನು ಸುಡುತ್ತಾರೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ಮಾತನಾಡಿರುವ ತಮ್ಮ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು, ”ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರವನ್ನು ಬಯಸುತ್ತದೆ ಮತ್ತು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅಧಿಕಾರಕ್ಕಾಗಿ, ಅವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ. ಅವರು ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸುವುದಿಲ್ಲ” ಎಂದಿದ್ದಾರೆ.

”ನೀವು ಭಾರತವನ್ನು ಪ್ರೀತಿಸುತ್ತಿದ್ದರೆ, ದೇಶದ ಯಾವುದೇ ಭಾಗದಲ್ಲಿ ಯಾವುದೇ ಹಿಂಸಾಚಾರ ಸಂಭವಿಸಿದಾಗ ಅದು ನಿಮಗೆ ನೋವುಂಟು ಮಾಡುತ್ತದೆ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ” ಎಂದು ರಾಹುಲ್ ಗುಡುಗಿದ್ದಾರೆ.

ಪ್ರತಿಪಕ್ಷಗಳ ಒಕ್ಕೂಟ INDIA ಹೆಸರಿನ ವಿರುದ್ಧ ಪ್ರಧಾನಿ ಮೋದಿ ಟೀಕಿಸಿದ್ದರು. ”ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ, ಇಂಡಿಯನ್ ಮುಜಾಹಿದ್ದೀನ್‌ನಂತಹ ಸಂಘಟನೆಗಳ ಹೆಸರಿನಲ್ಲೂ ಇಂಡಿಯಾ ಎನ್ನುವ ಪದವಿದೆ. ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗುವುದಿಲ್ಲ. ದೇಶದ ಹೆಸರನ್ನು ಬಳಸುವುದರಿಂದ ಜನರನ್ನು ದಾರಿ ತಪ್ಪಿಸಲಾಗುವುದಿಲ್ಲ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, ”ಮಿಸ್ಟರ್ ಮೋದಿ, ನೀವು ಏನು ಬೇಕಾದರೂ ನಮಗೆ ಕರೆಯಿರಿ. ನಾವು ಭಾರತ. ನಾವು ಮಣಿಪುರವನ್ನು ಗುಣಪಡಿಸಲು ಪ್ರಯತ್ನ ಮಾಡುತ್ತೇವೆ. ಪ್ರತಿ ಮಹಿಳೆ ಮತ್ತು ಮಗುವಿನ ಕಣ್ಣೀರು ಒರೆಸುತ್ತೇವೆ. ನಾವು ಮಣಿಪುರದ ಎಲ್ಲಾ ಜನರಿಗೆ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರುವುದಕ್ಕಾಗಿ ಹೋರಾಡುತ್ತೇವೆ. ನಾವು ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಂಸತ್ತಿನ ಮುಂಗಾರು ಅಧಿವೇಶನ ಕಳೆದ ಗುರುವಾರ ಆರಂಭಗೊಂಡಿದ್ದು, ಮಣಿಪುರ ಕುರಿತು ವಿಸ್ತೃತ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿವೆ. ಕೇಂದ್ರವು ಚರ್ಚೆಗೆ ಸಿದ್ಧವಾಗಿದೆ ಎಂದು ಹೇಳಿದೆ ಆದರೆ ಮಣಿಪುರ ಚರ್ಚೆಗಾಗಿ ಎಲ್ಲಾ ವ್ಯವಹಾರಗಳನ್ನು ಸ್ಥಗಿತಗೊಳಿಸಬೇಕೆಂದು ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ಒತ್ತಾಯಿಸಿದ್ದರಿಂದ ಬಿಕ್ಕಟ್ಟು ಮುಂದುವರೆಯಿತು. ಈ ವಿಷಯದ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರದ ನಿಲುವನ್ನು ಮುಂದಿಡಲು ಸಿದ್ಧ ಎಂದು ಹೇಳಿದರು, ಆದರೆ ಪ್ರತಿಪಕ್ಷಗಳು ಪ್ರಧಾನಿಯವರ ಹೇಳಿಕೆಯ ಬೇಡಿಕೆಯಿಂದ ಮಣಿಯಲಿಲ್ಲ.

ಇದನ್ನೂ ಓದಿ: ‘ಮಿಸ್ಟರ್ ಮೋದಿ, ಏನು ಬೇಕಾದರೂ ಕರೆಯಿರಿ, ಮಣಿಪುರದಲ್ಲಿ ಶಾಂತಿಯನ್ನು ಮರುನಿರ್ಮಾಣ ಮಾಡುತ್ತೇವೆ’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...