Homeಮುಖಪುಟಅಧಿಕಾರಕ್ಕಾಗಿ BJP-RSSನವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ: ರಾಹುಲ್ ವಾಗ್ದಾಳಿ

ಅಧಿಕಾರಕ್ಕಾಗಿ BJP-RSSನವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ: ರಾಹುಲ್ ವಾಗ್ದಾಳಿ

- Advertisement -
- Advertisement -

ಮಣಿಪುರದ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯ ವಿವಾದ ಮುಂದುವರೆದಿದ್ದು, ಮಾಜಿ ಸಂಸದ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಅಧಿಕಾರಕ್ಕಾಗಿ ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನು ಸುಡುತ್ತಾರೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ಮಾತನಾಡಿರುವ ತಮ್ಮ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು, ”ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರವನ್ನು ಬಯಸುತ್ತದೆ ಮತ್ತು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅಧಿಕಾರಕ್ಕಾಗಿ, ಅವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ. ಅವರು ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸುವುದಿಲ್ಲ” ಎಂದಿದ್ದಾರೆ.

”ನೀವು ಭಾರತವನ್ನು ಪ್ರೀತಿಸುತ್ತಿದ್ದರೆ, ದೇಶದ ಯಾವುದೇ ಭಾಗದಲ್ಲಿ ಯಾವುದೇ ಹಿಂಸಾಚಾರ ಸಂಭವಿಸಿದಾಗ ಅದು ನಿಮಗೆ ನೋವುಂಟು ಮಾಡುತ್ತದೆ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ” ಎಂದು ರಾಹುಲ್ ಗುಡುಗಿದ್ದಾರೆ.

ಪ್ರತಿಪಕ್ಷಗಳ ಒಕ್ಕೂಟ INDIA ಹೆಸರಿನ ವಿರುದ್ಧ ಪ್ರಧಾನಿ ಮೋದಿ ಟೀಕಿಸಿದ್ದರು. ”ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ, ಇಂಡಿಯನ್ ಮುಜಾಹಿದ್ದೀನ್‌ನಂತಹ ಸಂಘಟನೆಗಳ ಹೆಸರಿನಲ್ಲೂ ಇಂಡಿಯಾ ಎನ್ನುವ ಪದವಿದೆ. ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗುವುದಿಲ್ಲ. ದೇಶದ ಹೆಸರನ್ನು ಬಳಸುವುದರಿಂದ ಜನರನ್ನು ದಾರಿ ತಪ್ಪಿಸಲಾಗುವುದಿಲ್ಲ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, ”ಮಿಸ್ಟರ್ ಮೋದಿ, ನೀವು ಏನು ಬೇಕಾದರೂ ನಮಗೆ ಕರೆಯಿರಿ. ನಾವು ಭಾರತ. ನಾವು ಮಣಿಪುರವನ್ನು ಗುಣಪಡಿಸಲು ಪ್ರಯತ್ನ ಮಾಡುತ್ತೇವೆ. ಪ್ರತಿ ಮಹಿಳೆ ಮತ್ತು ಮಗುವಿನ ಕಣ್ಣೀರು ಒರೆಸುತ್ತೇವೆ. ನಾವು ಮಣಿಪುರದ ಎಲ್ಲಾ ಜನರಿಗೆ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರುವುದಕ್ಕಾಗಿ ಹೋರಾಡುತ್ತೇವೆ. ನಾವು ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ” ಎಂದು ಟ್ವೀಟ್ ಮಾಡಿದ್ದರು.

ಸಂಸತ್ತಿನ ಮುಂಗಾರು ಅಧಿವೇಶನ ಕಳೆದ ಗುರುವಾರ ಆರಂಭಗೊಂಡಿದ್ದು, ಮಣಿಪುರ ಕುರಿತು ವಿಸ್ತೃತ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿವೆ. ಕೇಂದ್ರವು ಚರ್ಚೆಗೆ ಸಿದ್ಧವಾಗಿದೆ ಎಂದು ಹೇಳಿದೆ ಆದರೆ ಮಣಿಪುರ ಚರ್ಚೆಗಾಗಿ ಎಲ್ಲಾ ವ್ಯವಹಾರಗಳನ್ನು ಸ್ಥಗಿತಗೊಳಿಸಬೇಕೆಂದು ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ಒತ್ತಾಯಿಸಿದ್ದರಿಂದ ಬಿಕ್ಕಟ್ಟು ಮುಂದುವರೆಯಿತು. ಈ ವಿಷಯದ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರದ ನಿಲುವನ್ನು ಮುಂದಿಡಲು ಸಿದ್ಧ ಎಂದು ಹೇಳಿದರು, ಆದರೆ ಪ್ರತಿಪಕ್ಷಗಳು ಪ್ರಧಾನಿಯವರ ಹೇಳಿಕೆಯ ಬೇಡಿಕೆಯಿಂದ ಮಣಿಯಲಿಲ್ಲ.

ಇದನ್ನೂ ಓದಿ: ‘ಮಿಸ್ಟರ್ ಮೋದಿ, ಏನು ಬೇಕಾದರೂ ಕರೆಯಿರಿ, ಮಣಿಪುರದಲ್ಲಿ ಶಾಂತಿಯನ್ನು ಮರುನಿರ್ಮಾಣ ಮಾಡುತ್ತೇವೆ’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...