Homeಮುಖಪುಟಬಿಜೆಪಿ ಆಡಳಿತದ ಯುಪಿ ದಲಿತ ದೌರ್ಜನ್ಯದಲ್ಲಿ ನಂ.1 ಆಗಿದೆ: ಅಖಿಲೇಶ್ ಯಾದವ್

ಬಿಜೆಪಿ ಆಡಳಿತದ ಯುಪಿ ದಲಿತ ದೌರ್ಜನ್ಯದಲ್ಲಿ ನಂ.1 ಆಗಿದೆ: ಅಖಿಲೇಶ್ ಯಾದವ್

- Advertisement -
- Advertisement -

ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶವು ದಲಿತರ ಮೇಲಿನ ದೌರ್ಜನ್ಯದಲ್ಲಿ ದೇಶದಲ್ಲಿಯೇ ನಂಬರ್ ಒನ್ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, ಬಿಜೆಪಿಯಲ್ಲಿರುವ ದಲಿತ ನಾಯಕರಿಗೆ ನಿಜವಾದ ಅಧಿಕಾರವನ್ನು ಬಿಜೆಪಿ ಎಂದಿಗೂ ನೀಡುವುದಿಲ್ಲ, ಈ ಅಧಿಕಾರವನ್ನು ಆಯ್ದ ಕೆಲವರಷ್ಟೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಆಡಳಿತದ

“ಬಿಜೆಪಿ ಸರ್ಕಾರದ ಅಡಿಯಲ್ಲಿ ದಲಿತರ ಮೇಲಿನ ದೌರ್ಜನ್ಯದಲ್ಲಿ ಯುಪಿ ನಂಬರ್ ಒನ್ ಆಗಿದೆ” ಎಂದು ಅಖಿಲೇಶ್ ಹೇಳಿದ್ದು, ರಾಜ್ಯದಲ್ಲಿ ದಲಿತ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಹೇಳಲಾದ ವರದಿಯ ವೀಡಿಯೊ ಕ್ಲಿಪ್ ಅನ್ನು ಕೂಡಾ ಅವರು ಹಂಚಿಕೊಂಡಿದ್ದಾರೆ.

ದಲಿತರ ವಿರುದ್ಧ, ವಿಶೇಷವಾಗಿ ದಲಿತ ಮಹಿಳೆಯರ ವಿರುದ್ಧದ ಹೆಚ್ಚಿನ ಅಪರಾಧಗಳು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಮಹಾರಾಷ್ಟ್ರದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಏಕೆ ನಡೆಯುತ್ತವೆ ಎಂಬುದು ಪ್ರಶ್ನೆಯಾಗಿದೆ ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಮೂಲಭೂತವಾಗಿ ಸರ್ವಾಧಿಕಾರಿಗಳ ಪಕ್ಷವಾಗಿದೆ ಮತ್ತು ಅದರ ಸದಸ್ಯರ ಮನಸ್ಥಿತಿ ಊಳಿಗಮಾನ್ಯದ್ದಾಗಿದೆ. ಇದರಲ್ಲಿ ಬಡವರು, ತಳಮಟ್ಟದಲ್ಲಿರುವವರು, ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಬುಡಕಟ್ಟು ಜನಾಂಗದವರಿಗೆ ಅವಮಾನ ಮತ್ತು ದಬ್ಬಾಳಿಕೆ ಮಾತ್ರ ಇರುತ್ತದೆ” ಎಂದು ಅಖಿಲೇಶ್ ಹೇಳಿದ್ದಾರೆ.

ಬಿಜೆಪಿ ನಾಯಕರು ಸ್ವಾತಂತ್ರ್ಯಪೂರ್ವದ ಮನಸ್ಥಿತಿಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಅವರು ಸಂವಿಧಾನವನ್ನು ಅಂತರ್ಗತವಾಗಿ ವಿರೋಧಿಸುತ್ತಾರೆ ಎಂದು ಅವರು ಆರೋಪಿಸಿದ್ದಾರೆ. “ಪಕ್ಷದ ಸಂಘಟನೆ ಮತ್ತು ಸರ್ಕಾರ ಎರಡರಲ್ಲೂ, ಆಯ್ದ ಕೆಲವರು ಮಾತ್ರ ನಿಜವಾದ ಅಧಿಕಾರವನ್ನು ಹೊಂದಿದ್ದಾರೆ. ಇತರರನ್ನು ಬ್ಯಾನರ್ ಮತ್ತು ಧ್ವಜಗಳನ್ನು ಹೊತ್ತೊಯ್ಯುವಂತಹ ಕೀಳು ಕೆಲಸಗಳಿಗೆ ಇಟ್ಟುಕೊಳ್ಳಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ದಲಿತರು ಮತ್ತು ಇತರ ಹಿಂದುಳಿದ ಜಾತಿಗಳ ಜನರಿಗೆ ಬಿಜೆಪಿಯಲ್ಲಿ ಸಾಂಕೇತಿಕ ಸ್ಥಾನಗಳನ್ನು ಮಾತ್ರ ನೀಡಲಾಗುತ್ತದೆ. ಆದರೆ ಅವರಿಗೆ ನಿಜವಾದ ಅಧಿಕಾರವನ್ನು ಎಂದಿಗೂ ವಹಿಸಲಾಗುವುದಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

“ಚುನಾವಣೆಗಳನ್ನು ಅವರ ಹೆಸರಿನಲ್ಲಿ ಹೋರಾಡಲಾಗುತ್ತದೆ. ಆದರೆ ಅವರಿಗೆ ಮುಖ್ಯಮಂತ್ರಿ ಕುರ್ಚಿ ಅಥವಾ ನಿಜವಾದ ನಾಯಕತ್ವದ ಪಾತ್ರಗಳನ್ನು ನೀಡಲಾಗುವುದಿಲ್ಲ. ಆದ್ದರಿಂದ, ನಮಗೆ ಬಿಜೆಪಿ ಬೇಡ ಎಂದು, ದಲಿತರು ಇಂದು ಹೇಳಬೇಕಿದೆ” ಎಂದು ಅಖಿಲೇಶ್ ಅವರು ದಲಿತ ಸಮುದಾಯವು ಬಿಜೆಪಿಯನ್ನು ತಿರಸ್ಕರಿಸುವಂತೆ ಕರೆ ನೀಡಿದ್ದಾರೆ. ಬಿಜೆಪಿ ಆಡಳಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಂಗ್ರೆಸ್ಸಿನಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿ; ನಿತೀಶ್ ‘ಖುರ್ಚಿ’ಗಾಗಿ ಬಿಜೆಪಿ ಜೊತೆ ಮೈತ್ರಿ; ಖರ್ಗೆ

ಕಾಂಗ್ರೆಸ್ಸಿನಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿ; ನಿತೀಶ್ ‘ಖುರ್ಚಿ’ಗಾಗಿ ಬಿಜೆಪಿ ಜೊತೆ ಮೈತ್ರಿ; ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...