Homeಕರ್ನಾಟಕಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ - ಮಂದಿರಗಳಿಗೆ ದುರುಪಯೋಗ!

ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

- Advertisement -
- Advertisement -

ಬಿಜೆಪಿ ಆಡಳಿತದ ಅವಧಿಯಲ್ಲಿ, 2020 ರಿಂದ 2023 ರ ನಡುವೆ ನೀರಾವರಿ ಕಾಮಗಾರಿಗಳಿಗಾಗಿ ಸ್ಥಾಪಿಸಲಾಗಿರುವ ಕರ್ನಾಟಕ ನೀರಾವಾರಿ ನಿಗಮ ಲಿಮಿಟೆಡ್ (KNNL)ನ ಸುಮಾರು 300 ಕೋಟಿ ರೂ. ಗಳನ್ನು ಬೇರೆ ಉದ್ದೇಶಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ಬುಧವಾರ ವರದಿ ಮಾಡಿದೆ. KNNL ಹಣವನ್ನು ಸಮುದಾಯ ಭವನಗಳು, ಮಠಗಳು ಮತ್ತು ಬೆರಳೆಣಿಕೆಯಷ್ಟು ಶಾದಿ ಮಹಲ್‌ಗಳನ್ನು ನಿರ್ಮಿಸಲು ಖರ್ಚು ಮಾಡಲಾಗಿದೆ ಎಂದು ವರದಿ ಹೇಳಿದೆ. ಬಿಜೆಪಿ ಅವಧಿಯಲ್ಲಿ

ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಕೋರಿಕೆಯ ಆಧಾರದ ಮೇಲೆ ಈ ಹಣವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ವರದಿ ಉಲ್ಲೇಖಿಸಲಾಗಿದೆ. ಬಿಜೆಪಿ ಸರ್ಕಾರದ ಈ ನೀತಿಯಿಂದ ಕಳೆದ ಒಂದು ವರ್ಷದಲ್ಲಿ ಕೆಎನ್‌ಎನ್‌ಎಲ್‌ನಲ್ಲಿ ನಗದು ಕೊರತೆಯಾಗಿದ್ದು, ಕಾಲುವೆಗಳ ದುರಸ್ತಿಯಂತಹ ನಿರ್ಣಾಯಕ ಕೆಲಸಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿ ಉಲ್ಲೇಖಿಸಿದೆ. ಬಿಜೆಪಿ ಅವಧಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುತ್ತಿಗೆದಾರರಿಗೆ ಪಾವತಿ ಮಾಡಬೇಕಾಗಿರುವ ಬಾಕಿ 6,000 ಕೋಟಿ ರೂ.ಗಳಷ್ಟು ಇವೆ. 2 ಕೋಟಿ ರೂ.ಗಳ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಲವು ತಿಂಗಳು ಕಾಯಿಸಿ ನಂತರ 8 ಲಕ್ಷ ರೂ. ನೀಡಲಾಗಿದೆ. ಶಿವಮೊಗ್ಗ ಒಂದೆ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಹಲವು ಯೋಜನೆಗಳಿಗೆ ಸುಮಾರು 2 ಸಾವಿರ ಕೋಟಿ ರೂ.ಗಳ ಅಗತ್ಯವಿದೆ” ಎಂದು KNNL ಅಧಿಕಾರಿಗಳು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ. ಬಿಜೆಪಿ ಅವಧಿಯಲ್ಲಿ

ಆಗಿನ ಶಿಕಾರಿಪುರ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಮನವಿ ಮೇರೆಗೆ ಈ ಹಣವನ್ನು ನೀರಾವರಿಯೇತರ ಕಾಮಗಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ದಾಖಲೆಗಳು ತೋರಿಸುತ್ತವೆ ಎಂದು ವರದಿ ಉಲ್ಲೇಖಿಸಿದೆ.

KNNL ಮಂಡಳಿಯು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿದ್ದು, ತುಂಗಾ ಮೇಲ್ದಂಡೆ ಯೋಜನೆಯ ಜಲಾನಯನ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನೆಪದಲ್ಲಿ ಮಂಡಳಿಯು ಸಮುದಾಯ ಭವನ ಹಾಗೂ ಮಠಗಳ ನವೀಕರಣಕ್ಕೆ ಸುಮಾರು 300 ಕೋಟಿ ರೂ. ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

KNNL ಹಣದಲ್ಲಿ ಬಸವತತ್ವ ಮಂದಿರ, ರಾಘವೇಂದ್ರ ಸ್ವಾಮಿ ದೇವಸ್ಥಾನ, ಸದ್ಗುರು ಸೇವಾ ಟ್ರಸ್ಟ್, ಬಸವೇಶ್ವರ ದೇವಸ್ಥಾನ, ಕಾಲಭೈರವೇಶ್ವರ ದೇವಸ್ಥಾನ, ನಂದಿಗುಡಿ ಬೃಹನ್ಮಠ, ತರಳಬಾಳು ಮಠ ಸೇರಿದಂತೆ ಧಾರ್ಮಿಕ ಸಭಾಂಗಣಗಳು ಮತ್ತು ಸಮುದಾಯ ಭವನಗಳ ನಿರ್ಮಾಣಕ್ಕೆ ಬಳಸಲಾಗಿದೆ ಎಂದು ಅದು ಹೇಳಿದೆ.

ಈ ಹಣದಲ್ಲಿ ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬೆರಳೆಣಿಕೆಯಷ್ಟು ಕಾಮಗಾರಿಗಳನ್ನು ಮಾಡಲಾಗಿದ್ದು, ಉಳಿದೆಲ್ಲ ಕಾಮಗಾರಿಗಳನ್ನು ಶಿವಮೊಗ್ಗದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಬ್ರಾಹ್ಮಣರು, ಬಿಲ್ಲವರು, ವಿಶ್ವಕರ್ಮ, ವಾಲ್ಮೀಕಿ ಮತ್ತು ಇತರ ಸಮುದಾಯಗಳ ಕೆಲವು ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ಉಳಿದವು ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿ ಬಳಸಲಾಗಿವೆ.

ಇದನ್ನೂ ಓದಿ: ‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...