Homeಕರ್ನಾಟಕಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ - ಮಂದಿರಗಳಿಗೆ ದುರುಪಯೋಗ!

ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

- Advertisement -
- Advertisement -

ಬಿಜೆಪಿ ಆಡಳಿತದ ಅವಧಿಯಲ್ಲಿ, 2020 ರಿಂದ 2023 ರ ನಡುವೆ ನೀರಾವರಿ ಕಾಮಗಾರಿಗಳಿಗಾಗಿ ಸ್ಥಾಪಿಸಲಾಗಿರುವ ಕರ್ನಾಟಕ ನೀರಾವಾರಿ ನಿಗಮ ಲಿಮಿಟೆಡ್ (KNNL)ನ ಸುಮಾರು 300 ಕೋಟಿ ರೂ. ಗಳನ್ನು ಬೇರೆ ಉದ್ದೇಶಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ಬುಧವಾರ ವರದಿ ಮಾಡಿದೆ. KNNL ಹಣವನ್ನು ಸಮುದಾಯ ಭವನಗಳು, ಮಠಗಳು ಮತ್ತು ಬೆರಳೆಣಿಕೆಯಷ್ಟು ಶಾದಿ ಮಹಲ್‌ಗಳನ್ನು ನಿರ್ಮಿಸಲು ಖರ್ಚು ಮಾಡಲಾಗಿದೆ ಎಂದು ವರದಿ ಹೇಳಿದೆ. ಬಿಜೆಪಿ ಅವಧಿಯಲ್ಲಿ

ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಕೋರಿಕೆಯ ಆಧಾರದ ಮೇಲೆ ಈ ಹಣವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ವರದಿ ಉಲ್ಲೇಖಿಸಲಾಗಿದೆ. ಬಿಜೆಪಿ ಸರ್ಕಾರದ ಈ ನೀತಿಯಿಂದ ಕಳೆದ ಒಂದು ವರ್ಷದಲ್ಲಿ ಕೆಎನ್‌ಎನ್‌ಎಲ್‌ನಲ್ಲಿ ನಗದು ಕೊರತೆಯಾಗಿದ್ದು, ಕಾಲುವೆಗಳ ದುರಸ್ತಿಯಂತಹ ನಿರ್ಣಾಯಕ ಕೆಲಸಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿ ಉಲ್ಲೇಖಿಸಿದೆ. ಬಿಜೆಪಿ ಅವಧಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುತ್ತಿಗೆದಾರರಿಗೆ ಪಾವತಿ ಮಾಡಬೇಕಾಗಿರುವ ಬಾಕಿ 6,000 ಕೋಟಿ ರೂ.ಗಳಷ್ಟು ಇವೆ. 2 ಕೋಟಿ ರೂ.ಗಳ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಲವು ತಿಂಗಳು ಕಾಯಿಸಿ ನಂತರ 8 ಲಕ್ಷ ರೂ. ನೀಡಲಾಗಿದೆ. ಶಿವಮೊಗ್ಗ ಒಂದೆ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಹಲವು ಯೋಜನೆಗಳಿಗೆ ಸುಮಾರು 2 ಸಾವಿರ ಕೋಟಿ ರೂ.ಗಳ ಅಗತ್ಯವಿದೆ” ಎಂದು KNNL ಅಧಿಕಾರಿಗಳು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ. ಬಿಜೆಪಿ ಅವಧಿಯಲ್ಲಿ

ಆಗಿನ ಶಿಕಾರಿಪುರ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಮನವಿ ಮೇರೆಗೆ ಈ ಹಣವನ್ನು ನೀರಾವರಿಯೇತರ ಕಾಮಗಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ದಾಖಲೆಗಳು ತೋರಿಸುತ್ತವೆ ಎಂದು ವರದಿ ಉಲ್ಲೇಖಿಸಿದೆ.

KNNL ಮಂಡಳಿಯು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿದ್ದು, ತುಂಗಾ ಮೇಲ್ದಂಡೆ ಯೋಜನೆಯ ಜಲಾನಯನ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನೆಪದಲ್ಲಿ ಮಂಡಳಿಯು ಸಮುದಾಯ ಭವನ ಹಾಗೂ ಮಠಗಳ ನವೀಕರಣಕ್ಕೆ ಸುಮಾರು 300 ಕೋಟಿ ರೂ. ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

KNNL ಹಣದಲ್ಲಿ ಬಸವತತ್ವ ಮಂದಿರ, ರಾಘವೇಂದ್ರ ಸ್ವಾಮಿ ದೇವಸ್ಥಾನ, ಸದ್ಗುರು ಸೇವಾ ಟ್ರಸ್ಟ್, ಬಸವೇಶ್ವರ ದೇವಸ್ಥಾನ, ಕಾಲಭೈರವೇಶ್ವರ ದೇವಸ್ಥಾನ, ನಂದಿಗುಡಿ ಬೃಹನ್ಮಠ, ತರಳಬಾಳು ಮಠ ಸೇರಿದಂತೆ ಧಾರ್ಮಿಕ ಸಭಾಂಗಣಗಳು ಮತ್ತು ಸಮುದಾಯ ಭವನಗಳ ನಿರ್ಮಾಣಕ್ಕೆ ಬಳಸಲಾಗಿದೆ ಎಂದು ಅದು ಹೇಳಿದೆ.

ಈ ಹಣದಲ್ಲಿ ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬೆರಳೆಣಿಕೆಯಷ್ಟು ಕಾಮಗಾರಿಗಳನ್ನು ಮಾಡಲಾಗಿದ್ದು, ಉಳಿದೆಲ್ಲ ಕಾಮಗಾರಿಗಳನ್ನು ಶಿವಮೊಗ್ಗದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಬ್ರಾಹ್ಮಣರು, ಬಿಲ್ಲವರು, ವಿಶ್ವಕರ್ಮ, ವಾಲ್ಮೀಕಿ ಮತ್ತು ಇತರ ಸಮುದಾಯಗಳ ಕೆಲವು ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ಉಳಿದವು ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿ ಬಳಸಲಾಗಿವೆ.

ಇದನ್ನೂ ಓದಿ: ‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...