Homeಮುಖಪುಟಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

’ಮಹಾಘಟಬಂಧನ್’ ಮೈತ್ರಿ ಗೆದ್ದರೆ 10 ಲಕ್ಷ ಸರ್ಕಾರಿ ಉದ್ಯೋಗಗಳು ನೀಡುತ್ತೇವೆ ಎಂದಿದ್ದ ಪ್ರತಿಪಕ್ಷಗಳನ್ನು BJP ಮಿತ್ರಪಕ್ಷದ ನಾಯಕ ನಿತೀಶ್ ಕುಮಾರ್‌ ಅಪಹಾಸ್ಯ ಮಾಡಿದ್ದರು, ಇದೀಗ BJP 19 ಲಕ್ಷ ಉದ್ಯೋಗ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ

- Advertisement -
- Advertisement -

ಮುಂದಿನ ವಾರದಿಂದ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ತನ್ನ ಪ್ರಣಾಳಿಕೆಯಲ್ಲಿ 19 ಲಕ್ಷ ಉದ್ಯೋಗಗಳು ಸೇರಿದಂತೆ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಜೊತೆಗೆ ಮುಂದಿನ ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷ ಒತ್ತಿ ಹೇಳಿದೆ.

ಪ್ರತಿಪಕ್ಷ ನಾಯಕ ತೇಜಶ್ವಿ ಯಾದವ್ ತಮ್ಮ ”ಮಹಾಘಟಬಂಧನ್” ಮೈತ್ರಿಯೂ ಗೆದ್ದರೆ “10 ಲಕ್ಷ ಸರ್ಕಾರಿ ಉದ್ಯೋಗಗಳು” ನೀಡುತ್ತೇವೆ ಎಂಬ ಭರವಸೆ ನೀಡಿದ್ದರು. ಇದನ್ನು ಅಪಹಾಸ್ಯ ಮಾಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್, “ತೇಜಸ್ವಿ ಯಾದವ್ ಮುಗ್ದನಾಗಿದ್ದು ಆಡಳಿತದಲ್ಲಿ ಅನುಭವಿಲ್ಲ,‌‌ 10 ಲಕ್ಷ ಉದ್ಯೋಗಗಳಿಗೆ ಹೇಗೆ ಹಣ ಸಂಗ್ರಹಿಸುತ್ತಾರೆ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಆದರೆ ಇದೀಗ ಪ್ರತಿಪಕ್ಷಗಳನ್ನು ಮೀರಿಸಿರುವ ಬಿಜೆಪಿ 19 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತೇವೆ ಎಂದಿದೆ. ಅಷ್ಟು ಮಾತ್ರವಲ್ಲದೆ ಇನ್ನೂ ಆವಿಷ್ಕಾರ ಮಾಡದ ಕೊರೊನಾ ಲಸಿಕೆಯನ್ನು ಉಚಿತ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಬಿಹಾರ ಚುನಾವಣಾ ಕಣದಲ್ಲಿ ’ಉದ್ಯೋಗ’ ಕೇಂದ್ರ ಬಿಂದು ಆಗಿದ್ದು, ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ತಮ್ಮ ಪಕ್ಷವಾದ ರಾಷ್ಟ್ರೀಯ ಜನತಾದಳ(ಆರ್‌ಜೆಡಿ)ದ ರ್‍ಯಾಲಿಗಳಲ್ಲಿ ಉ‌ದ್ಯೋಗದ ವಿಚಾರಗಳನ್ನಿಟ್ಟು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ಸರ್ಕಾರವನ್ನು ತರಾಟೆಗೆ ಪಡೆಯುತ್ತಿದ್ದಾರೆ.

ಪ್ರಣಾಳಿಕೆಯಲ್ಲಿ ಪಟ್ಟಿ ಮಾಡಲಾದ 19 ಲಕ್ಷ ಉದ್ಯೋಗಗಳ ಬಗ್ಗೆ ಮಾತನಾಡಿದ ಬಿಹಾರದ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್, “3 ಲಕ್ಷ ಶಿಕ್ಷಕರು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಒಂದು ಲಕ್ಷ ಸೇರಿದಂತೆ ಒಟ್ಟು ನಾಲ್ಕು ಲಕ್ಷ ಉದ್ಯೋಗ ಮಾತ್ರ ಸರ್ಕಾರಿ ವಲಯದಲ್ಲಿ. ಉಳಿದ ಉದ್ಯೋಗಗಳು ಬಿಹಾರದಲ್ಲಿ ಸ್ಥಾಪಿಸುವ ಐಟಿ ಕೇಂದ್ರದಲ್ಲಿ ಹಾಗೂ ಕೃಷಿ ಕೇಂದ್ರಗಳಲ್ಲಿ ಸೃಷ್ಟಿಸುತ್ತೇವೆ” ಎಂದು ಹೇಳಿದ್ದಾರೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಚುನಾವಣೆಯ ಫಲಿತಾಂಶ ನವೆಂಬರ್ 10 ರಂದು ಪ್ರಕಟವಾಗುತ್ತದೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...