Homeಮುಖಪುಟಪುದುಚೇರಿಯಲ್ಲಿ ಸರ್ಕಾರ ರಚಿಸಲ್ಲ ಎಂದ ಬಿಜೆಪಿ: ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ?

ಪುದುಚೇರಿಯಲ್ಲಿ ಸರ್ಕಾರ ರಚಿಸಲ್ಲ ಎಂದ ಬಿಜೆಪಿ: ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ?

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸರ್ಕಾರ ಪತನಗೊಂಡಿದೆ. ಆದರೆ ಸರ್ಕಾರ ರಚಿಸಲು ಬಿಜೆಪಿ ಒಪ್ಪದ ಕಾರಣಕ್ಕೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ.

ವಿಧಾನಸಭೆಯಲ್ಲಿ ವಿಶ್ವಾಸ ಮತ ಕಳೆದುಕೊಂಡ ನಂತರ ಮುಖ್ಯಮಂತ್ರಿ ವಿ ನಾರಾಯಣಸಾಮಿ ಇಂದು (ಫೆ. 22) ರಾಜೀನಾಮೆಯನ್ನು ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರ್‌ರಾಜನ್ ಅವರಿಗೆ ನೀಡಿದರು.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿ ಸಾಮಿನಾಥನ್, “ನಾವು ಈ ಹಂತದಲ್ಲಿ ಸರ್ಕಾರವನ್ನು ರಚಿಸಲು ಪ್ರಯತ್ನಿಸುವುದಿಲ್ಲ. ಮುಂಬರುವ ಚುನಾವಣೆಗಳಲ್ಲಿ ಜನರ ಆಶೀರ್ವಾದ ಮತ್ತು ಮೋದಿಯವರ ನಾಯಕತ್ವದೊಂದಿಗೆ, ಎನ್‌ಡಿಎ ಮೈತ್ರಿಯ ಭಾಗವಾಗಿರುವ ಎಐಎಡಿಎಂಕೆ ಜೊತೆ ಸರ್ಕಾರ ರಚಿಸಲಿದ್ದೇವೆ. ಇದು ಪುದುಚೇರಿಯ ಜನರಿಗೆ ಉಜ್ವಲ ಭವಿಷ್ಯವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ – ಮುಖ್ಯಮಂತ್ರಿ ರಾಜೀನಾಮೆ

ಈ ಸರ್ಕಾರದ ಪತನದೊಂದಿಗೆ ಕೇಂದ್ರಾಡಳಿತ ಪ್ರದೇಶದ ಇತಿಹಾಸದಲ್ಲಿ ಕೆಟ್ಟ ಅಧ್ಯಾಯ ಕೊನೆಗೊಂಡಿದೆ ಎಂದು ಬಿಜೆಪಿ ಬಣ್ಣಿಸಿದೆ.

“ಕಳೆದ ಐದು ವರ್ಷಗಳಲ್ಲಿ ಕೇಂದ್ರಾಡಳಿತದ ಹಣಕಾಸನ್ನು ಲೂಟಿ ಮಾಡಲಾಗಿದೆ. ಉದ್ಯೋಗಗಳು, ಪಡಿತರ, ಆರೋಗ್ಯ ರಕ್ಷಣೆ, ರಸ್ತೆಗಳು ಮತ್ತು ಶಿಕ್ಷಣಕ್ಕಾಗಿ ಕೇಂದ್ರವು ಕಳುಹಿಸಿದ ಹಣವನ್ನು ದುರುಪಯೋಗಪಡಿಸಲಾಗಿದೆ” ಎಂದು ಸಾಮಿನಾಥನ್ ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರ ಭೇಟಿಯ ಸಮಯದಲ್ಲಿ ಬಡ ಮಹಿಳೆಯರು ಚಂಡಮಾರುತದ ಪರಿಣಾಮದಿಂದ ಬಳಲುತ್ತಿರುವ ಬಗ್ಗೆ ದೂರು ನೀಡಿರುವುದನ್ನು ನೀವು ಕಂಡಿದ್ದೀರಿ. ಭ್ರಷ್ಟಾಚಾರ ಮತ್ತು ಶೋಷಣೆಯ ಸಂಸ್ಕೃತಿಯನ್ನು ಮಾತ್ರ ಕಾಂಗ್ರೆಸ್ ಮತ್ತು ಡಿಎಂಕೆ ನೀಡಿದೆ. ಪುದುಚೇರಿಯ ಜನರು ಮುಂಬರುವ ಚುನಾವಣೆಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 25 ರಂದು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.


ಇದನ್ನೂ ಓದಿ: ‘ಇದೇನಾ ಅಚ್ಚೇ ದಿನ್’- ಮುಂಬೈಯ ಬೀದಿ ಬೀದಿಗಳಲ್ಲಿ ಬ್ಯಾನರ್‌ ಅಳವಡಿಸಿದ ಶಿವಸೇನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...