Homeಕರ್ನಾಟಕ'ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು,...

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

- Advertisement -
- Advertisement -

“ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ, ದೇಶದಲ್ಲಿ ಏನಾದರು ಒಂದು ಕೆಟ್ಟದ್ದು ನಡೆಯುತ್ತದೆ” ಎಂದು ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಇತ್ತೀಚೆಗೆ ರಾಹುಲ್ ಗಾಂಧಿ ಅಮೆರಿಕದ ಬೋಸ್ಟನ್ ನಗರಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದನ್ನು ಉದ್ದೇಶಿಸಿ ಬಿಜೆಪಿ ಈ ಪೋಸ್ಟ್ ಹಾಕಿದೆ.

ಆದರೆ, ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಬಂದಾಗ ದೇಶದಲ್ಲಿ ಕೆಟ್ಟದ್ದು ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿ ಇವತ್ತು ಬೆಳಿಗ್ಗೆಯಷ್ಟೇ ಸೌದಿಯಿಂದ ಬಂದಿರಲ್ಲ, ಈ ಬಗ್ಗೆ ಏನು ಹೇಳುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗೆ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಪಹಲ್ಗಾಮ್‌ನಲ್ಲಿ ದಾಳಿ ನಡೆದ ಹಿನ್ನೆಲೆ, ಯಾತ್ರೆ ಮೊಟಕುಗೊಳಿಸಿ ಇಂದು ಬೆಳಿಗ್ಗೆ ಅವರು ಭಾರತಕ್ಕೆ ಆಗಮಿಸಿದ್ದಾರೆ. ಸೌದಿಯಲ್ಲಿ ಅಲ್ಲಿನ ಉನ್ನತಧಿಕಾರಿಗಳನ್ನು ಮೋದಿ ಭೇಟಿಯಾಗಿದ್ದಾರೆ.

ಈ ಕುರಿತ ಫೋಟೋಗಳನ್ನು ಹಂಚಿಕೊಂಡಿರುವ ಎಕ್ಸ್‌ ಬಳಕೆದಾರರೊಬ್ಬರು “ಇವರಿಗೂ ನಿಮ್ಮ ಪೋಸ್ಟ್ ಅನ್ವಯಿಸುತ್ತಾ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

“ಭದ್ರತಾ ವೈಫಲ್ಯಕ್ಕೆ ಅಧಿಕಾರದಲ್ಲಿರುವವರನ್ನು ದೂಷಿಸುವ ಬದಲು, ನೀವು ಬೇರೆ ಯಾರನ್ನೋ ದೂಷಿಸುತ್ತಿದ್ದೀರಿ. ಹೊಣೆ ಹೊತ್ತುಕೊಳ್ಳುವುದಕ್ಕಿಂತ ರಾಹುಲ್ ಗಾಂಧಿಯನ್ನು ದೂಷಿಸುವುದು ಭಯೋತ್ಪಾದನೆಗಿಂತ ಕೆಟ್ಟದ್ದು” ಎಂದು ಮತ್ತೊಬ್ಬರು ಹೇಳಿದ್ದಾರೆ.

“ಮೋದಿ ಕೂಡ ಹೊರ ದೇಶಕ್ಕೆ ಹೋಗಿದ್ದರು. ಮೋದಿ ಇಸ್ಲಾಮಿಕ್ ದೇಶಕ್ಕೆ ಹೋಗಿದ್ದರು, ಕಾರಣ ಏನಿರಬಹುದು? ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಎಂದು ಅನೇಕರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.”

 

 

 

 

 

“ಮಣಿಪುರ ಹೊತ್ತಿ ಉರಿಯಿತು, ಬಂಗಾಳದಲ್ಲಿ ಗಲಭೆ ಆಯಿತು, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಆಯಿತು. ನಿಮ್ಮ ಪ್ರಧಾನಿ ಎಲ್ಲಿದ್ದಾರೆ. ಒಂದೆಡೆ ಅವರು ಶೇಖ್ ಸಲ್ಮಾನ್ ಜೊತೆ ಮೈತ್ರಿಕೊಂಡರೆ, ಮತ್ತೊಂದೆಡೆ ಮುಸ್ಲಿಮರನ್ನು ವಿಷಯವನ್ನು ತಿರುಗಿಸಲು ಮುಸ್ಲಿಮರನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

 

 

 

 

 

 

 

 

 

 

 

 

“ರಾಹುಲ್ ಗಾಂಧಿ ಮತ್ತು ನೆಹರೂ ವಂಶಸ್ಥರನ್ನು ದೂಷಿಸುವುದನ್ನು ನಿಲ್ಲಿಸಿ. ನೀವು ಮತ್ತು ನಿಮ್ಮ ನೇತಾರರು ಏನು ಮಾಡುತ್ತಿದ್ದೀರಿ ???? ನಿಮಗೆ ನಿಜವಾಗಿಯೂ ನಾಯಕರಿದ್ದಾರೆಯೇ ?? ಉಚಿತ ಕೊಡುಗೆಗಳು, ಯೋಜನೆಗಳು, ಮೀಸಲಾತಿಗಳನ್ನು ವಿತರಿಸುವ, ತೆರಿಗೆಗಳ ಹೆಸರಿನಲ್ಲಿ ನಮ್ಮ ಹಣವನ್ನು ಕಸಿದುಕೊಳ್ಳುವ ನೇತಾರರು ಮಾತ್ರ. ಮೋದಿ ರಾಜೀನಾಮೆ ನೀಡಬೇಕೆಂದು ಕೇಳಿ. ನಮಗೆ ಯೋಗಿ ಜೀ ಪ್ರಧಾನಿಯಾಗಬೇಕು” ಎಂದು ಇನ್ನೊಬ್ಬರು ಎಕ್ಸ್‌ ಬಳಕೆದಾರರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಾನು ರಾಹುಲ್ ಗಾಂಧಿಗೆ ಮತ ಹಾಕಿಲ್ಲ. ನಾನು ಮೋದಿ ಜಿಗೆ ಮತ ಹಾಕಿದ್ದೇನೆ. ಅವರು ಏನು ಮಾಡುತ್ತಿದ್ದಾರೆ? ಅವರು ಯಾಕೆ ಇಷ್ಟೊಂದು ಶಕ್ತಿಹೀನ ಮತ್ತು ಭಯಭೀತರಾಗಿದ್ದಾರೆ? ಅವರು ಹಿಂದೂಗಳ ಜೀವನದ ಬಗ್ಗೆ ಏಕೆ ತಲೆಕೆಡಿಸಿಕೊಳ್ಳುತ್ತಿಲ್ಲ? ಅವರನ್ನು ರಾಜೀನಾಮೆ ನೀಡಿ ಯೋಗಿ ಜಿ ಅಧಿಕಾರ ವಹಿಸಿಕೊಳ್ಳಲಿ. ಪ್ರಧಾನಿಯಾಗಿದ್ದಾಗಲೂ ಇನ್ನೊಬ್ಬರನ್ನು ದೂರುವುದು ಎಷ್ಟು ಸರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...