Homeಕರ್ನಾಟಕ'ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು,...

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

- Advertisement -
- Advertisement -

“ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ, ದೇಶದಲ್ಲಿ ಏನಾದರು ಒಂದು ಕೆಟ್ಟದ್ದು ನಡೆಯುತ್ತದೆ” ಎಂದು ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಇತ್ತೀಚೆಗೆ ರಾಹುಲ್ ಗಾಂಧಿ ಅಮೆರಿಕದ ಬೋಸ್ಟನ್ ನಗರಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದನ್ನು ಉದ್ದೇಶಿಸಿ ಬಿಜೆಪಿ ಈ ಪೋಸ್ಟ್ ಹಾಕಿದೆ.

ಆದರೆ, ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಬಂದಾಗ ದೇಶದಲ್ಲಿ ಕೆಟ್ಟದ್ದು ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿ ಇವತ್ತು ಬೆಳಿಗ್ಗೆಯಷ್ಟೇ ಸೌದಿಯಿಂದ ಬಂದಿರಲ್ಲ, ಈ ಬಗ್ಗೆ ಏನು ಹೇಳುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗೆ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಪಹಲ್ಗಾಮ್‌ನಲ್ಲಿ ದಾಳಿ ನಡೆದ ಹಿನ್ನೆಲೆ, ಯಾತ್ರೆ ಮೊಟಕುಗೊಳಿಸಿ ಇಂದು ಬೆಳಿಗ್ಗೆ ಅವರು ಭಾರತಕ್ಕೆ ಆಗಮಿಸಿದ್ದಾರೆ. ಸೌದಿಯಲ್ಲಿ ಅಲ್ಲಿನ ಉನ್ನತಧಿಕಾರಿಗಳನ್ನು ಮೋದಿ ಭೇಟಿಯಾಗಿದ್ದಾರೆ.

ಈ ಕುರಿತ ಫೋಟೋಗಳನ್ನು ಹಂಚಿಕೊಂಡಿರುವ ಎಕ್ಸ್‌ ಬಳಕೆದಾರರೊಬ್ಬರು “ಇವರಿಗೂ ನಿಮ್ಮ ಪೋಸ್ಟ್ ಅನ್ವಯಿಸುತ್ತಾ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

“ಭದ್ರತಾ ವೈಫಲ್ಯಕ್ಕೆ ಅಧಿಕಾರದಲ್ಲಿರುವವರನ್ನು ದೂಷಿಸುವ ಬದಲು, ನೀವು ಬೇರೆ ಯಾರನ್ನೋ ದೂಷಿಸುತ್ತಿದ್ದೀರಿ. ಹೊಣೆ ಹೊತ್ತುಕೊಳ್ಳುವುದಕ್ಕಿಂತ ರಾಹುಲ್ ಗಾಂಧಿಯನ್ನು ದೂಷಿಸುವುದು ಭಯೋತ್ಪಾದನೆಗಿಂತ ಕೆಟ್ಟದ್ದು” ಎಂದು ಮತ್ತೊಬ್ಬರು ಹೇಳಿದ್ದಾರೆ.

“ಮೋದಿ ಕೂಡ ಹೊರ ದೇಶಕ್ಕೆ ಹೋಗಿದ್ದರು. ಮೋದಿ ಇಸ್ಲಾಮಿಕ್ ದೇಶಕ್ಕೆ ಹೋಗಿದ್ದರು, ಕಾರಣ ಏನಿರಬಹುದು? ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಎಂದು ಅನೇಕರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.”

 

 

 

 

 

“ಮಣಿಪುರ ಹೊತ್ತಿ ಉರಿಯಿತು, ಬಂಗಾಳದಲ್ಲಿ ಗಲಭೆ ಆಯಿತು, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಆಯಿತು. ನಿಮ್ಮ ಪ್ರಧಾನಿ ಎಲ್ಲಿದ್ದಾರೆ. ಒಂದೆಡೆ ಅವರು ಶೇಖ್ ಸಲ್ಮಾನ್ ಜೊತೆ ಮೈತ್ರಿಕೊಂಡರೆ, ಮತ್ತೊಂದೆಡೆ ಮುಸ್ಲಿಮರನ್ನು ವಿಷಯವನ್ನು ತಿರುಗಿಸಲು ಮುಸ್ಲಿಮರನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

 

 

 

 

 

 

 

 

 

 

 

 

“ರಾಹುಲ್ ಗಾಂಧಿ ಮತ್ತು ನೆಹರೂ ವಂಶಸ್ಥರನ್ನು ದೂಷಿಸುವುದನ್ನು ನಿಲ್ಲಿಸಿ. ನೀವು ಮತ್ತು ನಿಮ್ಮ ನೇತಾರರು ಏನು ಮಾಡುತ್ತಿದ್ದೀರಿ ???? ನಿಮಗೆ ನಿಜವಾಗಿಯೂ ನಾಯಕರಿದ್ದಾರೆಯೇ ?? ಉಚಿತ ಕೊಡುಗೆಗಳು, ಯೋಜನೆಗಳು, ಮೀಸಲಾತಿಗಳನ್ನು ವಿತರಿಸುವ, ತೆರಿಗೆಗಳ ಹೆಸರಿನಲ್ಲಿ ನಮ್ಮ ಹಣವನ್ನು ಕಸಿದುಕೊಳ್ಳುವ ನೇತಾರರು ಮಾತ್ರ. ಮೋದಿ ರಾಜೀನಾಮೆ ನೀಡಬೇಕೆಂದು ಕೇಳಿ. ನಮಗೆ ಯೋಗಿ ಜೀ ಪ್ರಧಾನಿಯಾಗಬೇಕು” ಎಂದು ಇನ್ನೊಬ್ಬರು ಎಕ್ಸ್‌ ಬಳಕೆದಾರರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಾನು ರಾಹುಲ್ ಗಾಂಧಿಗೆ ಮತ ಹಾಕಿಲ್ಲ. ನಾನು ಮೋದಿ ಜಿಗೆ ಮತ ಹಾಕಿದ್ದೇನೆ. ಅವರು ಏನು ಮಾಡುತ್ತಿದ್ದಾರೆ? ಅವರು ಯಾಕೆ ಇಷ್ಟೊಂದು ಶಕ್ತಿಹೀನ ಮತ್ತು ಭಯಭೀತರಾಗಿದ್ದಾರೆ? ಅವರು ಹಿಂದೂಗಳ ಜೀವನದ ಬಗ್ಗೆ ಏಕೆ ತಲೆಕೆಡಿಸಿಕೊಳ್ಳುತ್ತಿಲ್ಲ? ಅವರನ್ನು ರಾಜೀನಾಮೆ ನೀಡಿ ಯೋಗಿ ಜಿ ಅಧಿಕಾರ ವಹಿಸಿಕೊಳ್ಳಲಿ. ಪ್ರಧಾನಿಯಾಗಿದ್ದಾಗಲೂ ಇನ್ನೊಬ್ಬರನ್ನು ದೂರುವುದು ಎಷ್ಟು ಸರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...