Homeಕರ್ನಾಟಕ'ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು,...

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

- Advertisement -
- Advertisement -

“ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ, ದೇಶದಲ್ಲಿ ಏನಾದರು ಒಂದು ಕೆಟ್ಟದ್ದು ನಡೆಯುತ್ತದೆ” ಎಂದು ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಇತ್ತೀಚೆಗೆ ರಾಹುಲ್ ಗಾಂಧಿ ಅಮೆರಿಕದ ಬೋಸ್ಟನ್ ನಗರಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದನ್ನು ಉದ್ದೇಶಿಸಿ ಬಿಜೆಪಿ ಈ ಪೋಸ್ಟ್ ಹಾಕಿದೆ.

ಆದರೆ, ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಬಂದಾಗ ದೇಶದಲ್ಲಿ ಕೆಟ್ಟದ್ದು ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿ ಇವತ್ತು ಬೆಳಿಗ್ಗೆಯಷ್ಟೇ ಸೌದಿಯಿಂದ ಬಂದಿರಲ್ಲ, ಈ ಬಗ್ಗೆ ಏನು ಹೇಳುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗೆ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಪಹಲ್ಗಾಮ್‌ನಲ್ಲಿ ದಾಳಿ ನಡೆದ ಹಿನ್ನೆಲೆ, ಯಾತ್ರೆ ಮೊಟಕುಗೊಳಿಸಿ ಇಂದು ಬೆಳಿಗ್ಗೆ ಅವರು ಭಾರತಕ್ಕೆ ಆಗಮಿಸಿದ್ದಾರೆ. ಸೌದಿಯಲ್ಲಿ ಅಲ್ಲಿನ ಉನ್ನತಧಿಕಾರಿಗಳನ್ನು ಮೋದಿ ಭೇಟಿಯಾಗಿದ್ದಾರೆ.

ಈ ಕುರಿತ ಫೋಟೋಗಳನ್ನು ಹಂಚಿಕೊಂಡಿರುವ ಎಕ್ಸ್‌ ಬಳಕೆದಾರರೊಬ್ಬರು “ಇವರಿಗೂ ನಿಮ್ಮ ಪೋಸ್ಟ್ ಅನ್ವಯಿಸುತ್ತಾ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

“ಭದ್ರತಾ ವೈಫಲ್ಯಕ್ಕೆ ಅಧಿಕಾರದಲ್ಲಿರುವವರನ್ನು ದೂಷಿಸುವ ಬದಲು, ನೀವು ಬೇರೆ ಯಾರನ್ನೋ ದೂಷಿಸುತ್ತಿದ್ದೀರಿ. ಹೊಣೆ ಹೊತ್ತುಕೊಳ್ಳುವುದಕ್ಕಿಂತ ರಾಹುಲ್ ಗಾಂಧಿಯನ್ನು ದೂಷಿಸುವುದು ಭಯೋತ್ಪಾದನೆಗಿಂತ ಕೆಟ್ಟದ್ದು” ಎಂದು ಮತ್ತೊಬ್ಬರು ಹೇಳಿದ್ದಾರೆ.

“ಮೋದಿ ಕೂಡ ಹೊರ ದೇಶಕ್ಕೆ ಹೋಗಿದ್ದರು. ಮೋದಿ ಇಸ್ಲಾಮಿಕ್ ದೇಶಕ್ಕೆ ಹೋಗಿದ್ದರು, ಕಾರಣ ಏನಿರಬಹುದು? ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಎಂದು ಅನೇಕರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.”

 

 

 

 

 

“ಮಣಿಪುರ ಹೊತ್ತಿ ಉರಿಯಿತು, ಬಂಗಾಳದಲ್ಲಿ ಗಲಭೆ ಆಯಿತು, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಆಯಿತು. ನಿಮ್ಮ ಪ್ರಧಾನಿ ಎಲ್ಲಿದ್ದಾರೆ. ಒಂದೆಡೆ ಅವರು ಶೇಖ್ ಸಲ್ಮಾನ್ ಜೊತೆ ಮೈತ್ರಿಕೊಂಡರೆ, ಮತ್ತೊಂದೆಡೆ ಮುಸ್ಲಿಮರನ್ನು ವಿಷಯವನ್ನು ತಿರುಗಿಸಲು ಮುಸ್ಲಿಮರನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

 

 

 

 

 

 

 

 

 

 

 

 

“ರಾಹುಲ್ ಗಾಂಧಿ ಮತ್ತು ನೆಹರೂ ವಂಶಸ್ಥರನ್ನು ದೂಷಿಸುವುದನ್ನು ನಿಲ್ಲಿಸಿ. ನೀವು ಮತ್ತು ನಿಮ್ಮ ನೇತಾರರು ಏನು ಮಾಡುತ್ತಿದ್ದೀರಿ ???? ನಿಮಗೆ ನಿಜವಾಗಿಯೂ ನಾಯಕರಿದ್ದಾರೆಯೇ ?? ಉಚಿತ ಕೊಡುಗೆಗಳು, ಯೋಜನೆಗಳು, ಮೀಸಲಾತಿಗಳನ್ನು ವಿತರಿಸುವ, ತೆರಿಗೆಗಳ ಹೆಸರಿನಲ್ಲಿ ನಮ್ಮ ಹಣವನ್ನು ಕಸಿದುಕೊಳ್ಳುವ ನೇತಾರರು ಮಾತ್ರ. ಮೋದಿ ರಾಜೀನಾಮೆ ನೀಡಬೇಕೆಂದು ಕೇಳಿ. ನಮಗೆ ಯೋಗಿ ಜೀ ಪ್ರಧಾನಿಯಾಗಬೇಕು” ಎಂದು ಇನ್ನೊಬ್ಬರು ಎಕ್ಸ್‌ ಬಳಕೆದಾರರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಾನು ರಾಹುಲ್ ಗಾಂಧಿಗೆ ಮತ ಹಾಕಿಲ್ಲ. ನಾನು ಮೋದಿ ಜಿಗೆ ಮತ ಹಾಕಿದ್ದೇನೆ. ಅವರು ಏನು ಮಾಡುತ್ತಿದ್ದಾರೆ? ಅವರು ಯಾಕೆ ಇಷ್ಟೊಂದು ಶಕ್ತಿಹೀನ ಮತ್ತು ಭಯಭೀತರಾಗಿದ್ದಾರೆ? ಅವರು ಹಿಂದೂಗಳ ಜೀವನದ ಬಗ್ಗೆ ಏಕೆ ತಲೆಕೆಡಿಸಿಕೊಳ್ಳುತ್ತಿಲ್ಲ? ಅವರನ್ನು ರಾಜೀನಾಮೆ ನೀಡಿ ಯೋಗಿ ಜಿ ಅಧಿಕಾರ ವಹಿಸಿಕೊಳ್ಳಲಿ. ಪ್ರಧಾನಿಯಾಗಿದ್ದಾಗಲೂ ಇನ್ನೊಬ್ಬರನ್ನು ದೂರುವುದು ಎಷ್ಟು ಸರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...