Homeಮುಖಪುಟಬಿಜೆಪಿಯು ಹತಾಶೆ, ಬೂಟಾಟಿಕೆಗಳ ಎಲ್ಲಾ ಮಿತಿಗಳನ್ನು ದಾಟಿದಂತಿದೆ; ನಡ್ಡಾ ವಿರುದ್ಧ ಖರ್ಗೆ ದೂರು

ಬಿಜೆಪಿಯು ಹತಾಶೆ, ಬೂಟಾಟಿಕೆಗಳ ಎಲ್ಲಾ ಮಿತಿಗಳನ್ನು ದಾಟಿದಂತಿದೆ; ನಡ್ಡಾ ವಿರುದ್ಧ ಖರ್ಗೆ ದೂರು

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ, ಬಿಜೆಪಿ ಚಂಡೀಗಢ ಅಧ್ಯಕ್ಷ ಅರುಣ್‌ ಸೂದ್‌ ವಿರುದ್ಧ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಮತ್ತು ಬಯೋಟೆಕ್ನಾಲಜಿ ಸಚಿವ ಪ್ರಿಯಾಂಕ್‌ ಖರ್ಗೆ ಸೋಮವಾರ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪ್ರೀಯಾಂಕ್ ಖರ್ಗೆ ಅವರು ಸೋಮವಾರ ದೂರು ನೀಡಿದ ಬಳಿಕ ಮಾತನಾಡಿರುವ ವಿಡಿಯೋ ಹಂಚಿಕೊಂಡಿರುವ ಜೈರಾಮ್ ರಮೇಶ್ ಅವರು, ”ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಐಟಿ ಸೆಲ್‌ ಹೊಸ ದಾಳಿ ನಡೆಸಿರುವುದನ್ನು ನೋಡಿದರೆ, ಅವರು ಈಗ ಹತಾಶೆ ಮತ್ತು ಬೂಟಾಟಿಕೆಗಳ ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅದರಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ INC ಕ್ರಿಮಿನಲ್ ದೂರನ್ನು ದಾಖಲಿಸಿದೆ. ಕಾನೂನಿನ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುವ ಕ್ರಮಕ್ಕೆ ನಾವು ಮುಂದಾಗಿದ್ದೇವೆ. ಅವರು ಎಷ್ಟೇ ದೊಡ್ಡವರು ಅಥವಾ “ಪ್ರಭಾವಿ” ಎಂದು ಭಾವಿಸಿದರೂ, ಅವರು ಹರಡುವ ಸುಳ್ಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ ಬಳಿಕ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ”ದೀರ್ಘಕಾಲದಿಂದ ಬಿಜೆಪಿಯ ಐಟಿ ಹ್ಯಾಂಡಲ್‌ಗಳು ಕೋಮು ಸೌಹಾರ್ದತೆ ಹಾಳುಮಾಡುವ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಆದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ, ಬಿಜೆಪಿ ಚಂಡೀಗಢ ಅಧ್ಯಕ್ಷ ಅರುಣ್‌ ಸೂದ್‌ ವಿರುದ್ಧ ದೂರು ನೀಡಿದ್ದೇವೆ. ಮುಂದೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಲಿದ್ದೇವೆ. ಇಂದು ನಾವು ದೂರು ದಾಖಲಿಸಿದ್ದೇನೆ, ಅದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ?: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಏನಿದು ದೂರು?

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧದ ದುರುದ್ದೇಶಪೂರಿತ ಪೋಸ್ಟ್‌ಗಳು, ವಿಶೇಷವಾಗಿ ಕಾಂಗ್ರೆಸ್ ನಾಯಕರ ಭಾಷಣಗಳನ್ನು ತಿರುಚಿದ ಆನಿಮೇಟೆಡ್ ವೀಡಿಯೊಗಳನ್ನು ಪ್ರಸಾರ ಮಾಡುತ್ತಿರುವುದರ ವಿರುದ್ಧ ಪ್ರಿಯಾಂಕ್‌ ಖರ್ಗೆ ದೂರ ದಾಖಲಿಸಿದ್ದಾರೆ.

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ ಅವರು ಶೇರ್‌ ಮಾಡಿರುವ ವಿಡಿಯೋದಲ್ಲಿ, ಫೇಕ್‌ 3ಡಿ ಅನಿಮೇಟೆಡ್‌ ವಿಡಿಯೋ ಇದ್ದು, ಅದರಲ್ಲಿ ರಾಹುಲ್‌ ಗಾಂಧಿ ಅವರನ್ನು ದುರುದ್ದೇಶ ಪೂರಿತವಾಗಿ ಟಾರ್ಗೆಟ್‌ ಮಾಡಲಾಗಿದೆ. ಈ ವಿಡಿಯೋವನ್ನು ಬಿಜೆಪಿಯ ಪ್ರಮುಖ ನಾಯಕರಾದ ಜೆ.ಪಿ.ನಡ್ಡಾ ಮತ್ತು ಅರುಣ್‌ ಸೂದ್‌ ಅನುಮೋದಿಸಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

”ಈ ವಿಡಿಯೋವನ್ನು 2023ರ ಜೂನ್‌ 17ರಂದು ಅಮಿತ್‌ ಮಾಳವೀಯ ಅವರ ಟ್ವಿಟರ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಪಕ್ಷದ ಪ್ರತಿಷ್ಠೆಗೆ ಕಳಂಕ ತರುವ ಸ್ಪಷ್ಟ ಮತ್ತು ದುರುದ್ದೇಶಪೂರಿತ ಉದ್ದೇಶದಿಂದ ಇದನ್ನು ಪ್ರಸಾರ ಮಾಡಲಾಗಿದೆ. ಕೋಮು ವೈಷಮ್ಯವನ್ನು ಪ್ರಚೋದಿಸಲು ಮತ್ತು ಪಕ್ಷ, ಅದರ ನಾಯಕರ ವ್ಯಕ್ತಿತ್ವವನ್ನು ತಪ್ಪಾಗಿ ನಿರೂಪಿಸುವ ಉದ್ದೇಶವೂ ಇದರಲ್ಲಿ ಅಡಗಿದೆ” ಎಂದು ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

”ಈ ವಿಡಿಯೋದಲ್ಲಿ ಕಾಂಗ್ರೆಸ್ ಮತ್ತು ಅದರ ನಾಯಕರನ್ನು ದೇಶವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಈ ವಿಡಿಯೋದಲ್ಲಿ ರಾಹುಲ್ ಗಾಂಧಿ ಭಾಷಣದ ಸುಳ್ಳು ನಿರೂಪಣೆಗಳನ್ನು ಪ್ರಚಾರ ಮಾಡಲಾಗಿದೆ” ಎಂದು ಸಚಿವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

”ವೀಡಿಯೊದ ಆತಂಕಕಾರಿ ಅಂಶವೆಂದರೆ, ಇಸ್ಲಾಮಿಕ್ ನಂಬಿಕೆಯ ಜನರೊಂದಿಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವುದನ್ನು ತಪ್ಪಾಗಿ ನಿರೂಪಿಸಲಾಗಿದೆ. ಇದು ನಿಸ್ಸಂದೇಹವಾಗಿ ವಿವಿಧ ಧರ್ಮಗಳ ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತದೆ. ಕೋಮು ವೈಷಮ್ಯವನ್ನು ಪ್ರಚಾರ ಮಾಡುತ್ತದೆ” ಎಂದು ಸಚಿವರು ಹೇಳಿದರು.

ಮಾಳವಿಯಾ ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ವೀಡಿಯೊವನ್ನು ಜೂನ್ 17ರಂದು ಹಂಚಿಕೊಂಡಿದ್ದು, ”ರಾಹುಲ್ ಗಾಂಧಿ ಅಪಾಯಕಾರಿ ಮತ್ತು ಕಪಟ ನಾಟಕ ಮಾಡುತ್ತಿದ್ದಾರೆ..” ಎಂಬ ಬರೆದಿದ್ದಾರೆ. ಮಾಳವಿಯಾ ಅವರು ಮಾರನೇ ದಿನ ಅದೇ ವೀಡಿಯೊವನ್ನು ಹಿಂದಿ ಉಪಶೀರ್ಷಿಕೆಗಳೊಂದಿಗೆ ರೀಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಸಂವಹನ ವಿಭಾಗದ ಕರ್ನಾಟಕ ಘಟಕದ ಮುಖ್ಯಸ್ಥರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ”ಈ ಮೂವರು ನಾಯಕರು, ಎರಡು ಕೋಮುಳ ನಡುವೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ. ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...