Homeಮುಖಪುಟಬಿಜೆಪಿಯು ಹತಾಶೆ, ಬೂಟಾಟಿಕೆಗಳ ಎಲ್ಲಾ ಮಿತಿಗಳನ್ನು ದಾಟಿದಂತಿದೆ; ನಡ್ಡಾ ವಿರುದ್ಧ ಖರ್ಗೆ ದೂರು

ಬಿಜೆಪಿಯು ಹತಾಶೆ, ಬೂಟಾಟಿಕೆಗಳ ಎಲ್ಲಾ ಮಿತಿಗಳನ್ನು ದಾಟಿದಂತಿದೆ; ನಡ್ಡಾ ವಿರುದ್ಧ ಖರ್ಗೆ ದೂರು

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ, ಬಿಜೆಪಿ ಚಂಡೀಗಢ ಅಧ್ಯಕ್ಷ ಅರುಣ್‌ ಸೂದ್‌ ವಿರುದ್ಧ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಮತ್ತು ಬಯೋಟೆಕ್ನಾಲಜಿ ಸಚಿವ ಪ್ರಿಯಾಂಕ್‌ ಖರ್ಗೆ ಸೋಮವಾರ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪ್ರೀಯಾಂಕ್ ಖರ್ಗೆ ಅವರು ಸೋಮವಾರ ದೂರು ನೀಡಿದ ಬಳಿಕ ಮಾತನಾಡಿರುವ ವಿಡಿಯೋ ಹಂಚಿಕೊಂಡಿರುವ ಜೈರಾಮ್ ರಮೇಶ್ ಅವರು, ”ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಐಟಿ ಸೆಲ್‌ ಹೊಸ ದಾಳಿ ನಡೆಸಿರುವುದನ್ನು ನೋಡಿದರೆ, ಅವರು ಈಗ ಹತಾಶೆ ಮತ್ತು ಬೂಟಾಟಿಕೆಗಳ ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅದರಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ INC ಕ್ರಿಮಿನಲ್ ದೂರನ್ನು ದಾಖಲಿಸಿದೆ. ಕಾನೂನಿನ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸುವ ಕ್ರಮಕ್ಕೆ ನಾವು ಮುಂದಾಗಿದ್ದೇವೆ. ಅವರು ಎಷ್ಟೇ ದೊಡ್ಡವರು ಅಥವಾ “ಪ್ರಭಾವಿ” ಎಂದು ಭಾವಿಸಿದರೂ, ಅವರು ಹರಡುವ ಸುಳ್ಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ ಬಳಿಕ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ”ದೀರ್ಘಕಾಲದಿಂದ ಬಿಜೆಪಿಯ ಐಟಿ ಹ್ಯಾಂಡಲ್‌ಗಳು ಕೋಮು ಸೌಹಾರ್ದತೆ ಹಾಳುಮಾಡುವ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಆದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ, ಬಿಜೆಪಿ ಚಂಡೀಗಢ ಅಧ್ಯಕ್ಷ ಅರುಣ್‌ ಸೂದ್‌ ವಿರುದ್ಧ ದೂರು ನೀಡಿದ್ದೇವೆ. ಮುಂದೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಲಿದ್ದೇವೆ. ಇಂದು ನಾವು ದೂರು ದಾಖಲಿಸಿದ್ದೇನೆ, ಅದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ?: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಏನಿದು ದೂರು?

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧದ ದುರುದ್ದೇಶಪೂರಿತ ಪೋಸ್ಟ್‌ಗಳು, ವಿಶೇಷವಾಗಿ ಕಾಂಗ್ರೆಸ್ ನಾಯಕರ ಭಾಷಣಗಳನ್ನು ತಿರುಚಿದ ಆನಿಮೇಟೆಡ್ ವೀಡಿಯೊಗಳನ್ನು ಪ್ರಸಾರ ಮಾಡುತ್ತಿರುವುದರ ವಿರುದ್ಧ ಪ್ರಿಯಾಂಕ್‌ ಖರ್ಗೆ ದೂರ ದಾಖಲಿಸಿದ್ದಾರೆ.

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ ಅವರು ಶೇರ್‌ ಮಾಡಿರುವ ವಿಡಿಯೋದಲ್ಲಿ, ಫೇಕ್‌ 3ಡಿ ಅನಿಮೇಟೆಡ್‌ ವಿಡಿಯೋ ಇದ್ದು, ಅದರಲ್ಲಿ ರಾಹುಲ್‌ ಗಾಂಧಿ ಅವರನ್ನು ದುರುದ್ದೇಶ ಪೂರಿತವಾಗಿ ಟಾರ್ಗೆಟ್‌ ಮಾಡಲಾಗಿದೆ. ಈ ವಿಡಿಯೋವನ್ನು ಬಿಜೆಪಿಯ ಪ್ರಮುಖ ನಾಯಕರಾದ ಜೆ.ಪಿ.ನಡ್ಡಾ ಮತ್ತು ಅರುಣ್‌ ಸೂದ್‌ ಅನುಮೋದಿಸಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

”ಈ ವಿಡಿಯೋವನ್ನು 2023ರ ಜೂನ್‌ 17ರಂದು ಅಮಿತ್‌ ಮಾಳವೀಯ ಅವರ ಟ್ವಿಟರ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಪಕ್ಷದ ಪ್ರತಿಷ್ಠೆಗೆ ಕಳಂಕ ತರುವ ಸ್ಪಷ್ಟ ಮತ್ತು ದುರುದ್ದೇಶಪೂರಿತ ಉದ್ದೇಶದಿಂದ ಇದನ್ನು ಪ್ರಸಾರ ಮಾಡಲಾಗಿದೆ. ಕೋಮು ವೈಷಮ್ಯವನ್ನು ಪ್ರಚೋದಿಸಲು ಮತ್ತು ಪಕ್ಷ, ಅದರ ನಾಯಕರ ವ್ಯಕ್ತಿತ್ವವನ್ನು ತಪ್ಪಾಗಿ ನಿರೂಪಿಸುವ ಉದ್ದೇಶವೂ ಇದರಲ್ಲಿ ಅಡಗಿದೆ” ಎಂದು ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

”ಈ ವಿಡಿಯೋದಲ್ಲಿ ಕಾಂಗ್ರೆಸ್ ಮತ್ತು ಅದರ ನಾಯಕರನ್ನು ದೇಶವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಈ ವಿಡಿಯೋದಲ್ಲಿ ರಾಹುಲ್ ಗಾಂಧಿ ಭಾಷಣದ ಸುಳ್ಳು ನಿರೂಪಣೆಗಳನ್ನು ಪ್ರಚಾರ ಮಾಡಲಾಗಿದೆ” ಎಂದು ಸಚಿವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

”ವೀಡಿಯೊದ ಆತಂಕಕಾರಿ ಅಂಶವೆಂದರೆ, ಇಸ್ಲಾಮಿಕ್ ನಂಬಿಕೆಯ ಜನರೊಂದಿಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವುದನ್ನು ತಪ್ಪಾಗಿ ನಿರೂಪಿಸಲಾಗಿದೆ. ಇದು ನಿಸ್ಸಂದೇಹವಾಗಿ ವಿವಿಧ ಧರ್ಮಗಳ ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತದೆ. ಕೋಮು ವೈಷಮ್ಯವನ್ನು ಪ್ರಚಾರ ಮಾಡುತ್ತದೆ” ಎಂದು ಸಚಿವರು ಹೇಳಿದರು.

ಮಾಳವಿಯಾ ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ವೀಡಿಯೊವನ್ನು ಜೂನ್ 17ರಂದು ಹಂಚಿಕೊಂಡಿದ್ದು, ”ರಾಹುಲ್ ಗಾಂಧಿ ಅಪಾಯಕಾರಿ ಮತ್ತು ಕಪಟ ನಾಟಕ ಮಾಡುತ್ತಿದ್ದಾರೆ..” ಎಂಬ ಬರೆದಿದ್ದಾರೆ. ಮಾಳವಿಯಾ ಅವರು ಮಾರನೇ ದಿನ ಅದೇ ವೀಡಿಯೊವನ್ನು ಹಿಂದಿ ಉಪಶೀರ್ಷಿಕೆಗಳೊಂದಿಗೆ ರೀಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಸಂವಹನ ವಿಭಾಗದ ಕರ್ನಾಟಕ ಘಟಕದ ಮುಖ್ಯಸ್ಥರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ”ಈ ಮೂವರು ನಾಯಕರು, ಎರಡು ಕೋಮುಳ ನಡುವೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ. ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...