Homeಮುಖಪುಟಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

ಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯನ್ನು “ಸರಕಾರಗಳ ಸರಣಿ ಕೊಲೆಗಾರ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಒಬ್ಬನೇ ಒಬ್ಬ ಶಾಸಕರನ್ನು ಸೆಳೆಯಲು ಬಿಜೆಪಿ ವಿಫಲವಾಗಿದೆ ಎಂಬುದನ್ನು ಸಾಬೀತುಪಡಿಸಲು ವಿಶ್ವಾಸ ಮತ ಯಾಚನೆ ಮಾಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ದೆಹಲಿಯ ಎಎಪಿ ಸರ್ಕಾರ ಸೋಮವಾರ ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ನಡೆಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ಬಿಜೆಪಿಗೆ ಒಬ್ಬೇ ಒಬ್ಬ ಶಾಸಕನನ್ನು ಸೆಳೆಯಲು ಸಾಧ್ಯವಾಗಿಲ್ಲ ಎಂಬುವುದನ್ನು ನಿರೂಪಿಸಲು ನಾನು ವಿಶ್ವಾಸ ಮತಯಾಚನೆ ಮಾಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು “ಆಪರೇಷನ್ ಕಮಲ” ಮತ್ತು ದೆಹಲಿ ಮದ್ಯದ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಂತಹ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿರುವ ಬಗ್ಗೆ ಚರ್ಚಿಸಲು ಎಎಪಿ ಅಧಿವೇಶನವನ್ನು ಕರೆದಿದೆ.

ಸಿಸೋಡಿಯಾ ಅವರು ಬಿಜೆಪಿ ಸೇರಿದರೆ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಪ್ರಸ್ತಾಪಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

ಗುರುವಾರದಂದು ಕೇಜ್ರಿವಾಲ್ ಅವರು ತಮ್ಮ ನಿವಾಸದಲ್ಲಿ ಶಕ್ತಿ ಪ್ರದರ್ಶನ ನಡೆಸಲು ಶಾಸಕರ ಸಭೆಯನ್ನು ಕರೆದಿದ್ದರು. ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಇದರಲ್ಲಿ ಹಾಜರಾಗಿದ್ದರು ಮತ್ತು ಉಳಿದವವರು ಕೂಡಾ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ಎಎಪಿ ತಿಳಿಸಿದೆ.

“ಸಿಬಿಐ ತನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದೆಯಾದರೂ ಸಿಸೋಡಿಯಾ ಅವರ ಮನೆಯಲ್ಲಿ 25 ಪೈಸೆಯೂ ಸಿಗಲಿಲ್ಲ. ಮರುದಿನ ಬಿಜೆಪಿ ನಾಯಕರೊಬ್ಬರು ಮನೀಶ್ ಅವರನ್ನು ಸಂಪರ್ಕಿಸಿ, ನಾವು ನಿಮ್ಮನ್ನು ಮುಖ್ಯಮಂತ್ರಿ ಮಾಡುತ್ತೇವೆ ಮತ್ತು ಎಎಪಿಯಿಂದ ಹೊರಬರಲು ತಲಾ 20 ಕೋಟಿ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಮನೀಶ್ ಅದನ್ನು ತಿರಸ್ಕರಿಸಿದ್ದಾರೆ. ಇದರ ನಂತರ ಬಿಜೆಪಿ ಇತರ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ನನ್ನ ಪ್ರತಿಯೊಬ್ಬ ಶಾಸಕರೂ ವಜ್ರವಾಗಿದ್ದು, ಅವರನ್ನು ಖರೀದಿಸಲು ಸಾಧ್ಯವಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಬಿಜೆಪಿ ತನ್ನ 40 ಶಾಸಕರನ್ನು ಒಡೆಯಲು ಪ್ರಯತ್ನಿಸುತ್ತಿದ್ದು, ಪ್ರತಿಯೊಬ್ಬರಿಗೂ 20 ಕೋಟಿ ನೀಡಲು ಮುಂದಾಗಿದೆ ಎಂದು ಎಎಪಿ ಆರೋಪಿಸಿದೆ. ‘‘ಬಿಜೆಪಿ ಹಲವಾರು ಸರ್ಕಾರಗಳನ್ನು ಕೆಡವಿದೆ ಮತ್ತು ಈಗ ಅವರು ದೆಹಲಿಯತ್ತ ಮುಖ ಮಾಡಿದ್ದಾರೆ. ನಮ್ಮ ದೇಶದಲ್ಲಿ ಸರ್ಕಾರಗಳ ಸರಣಿ ಕೊಲೆಗಾರ ಇದ್ದಾರೆ. ಅದೇ ಮಾದರಿಯಲ್ಲಿ ಇದು ನಡೆದಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

ಇತ್ತೀಚಿನ ವರ್ಷಗಳಲ್ಲಿ ಪ್ರತಿಪಕ್ಷದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ 277 ಶಾಸಕರನ್ನು ಖರೀದಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. “ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ 277 ಶಾಸಕರನ್ನು ಖರೀದಿಸಿದೆ. ಆಪರೇಷನ್ ಕಮಲಕ್ಕೆ ಬಿಜೆಪಿ 5,500 ಕೋಟಿ ರೂ. ಖರ್ಚು ಮಾಡಿದೆ. ದೆಹಲಿಗೆ 800 ಕೋಟಿ ರೂ. ಇಟ್ಟುಕೊಂಡಿದೆ’’ ಎಂದು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...