Homeಮುಖಪುಟಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

ಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

"ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಲಾಗಿತ್ತು"

- Advertisement -
- Advertisement -

ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಿಕೊಂಡು ಶಾಸಕರು, ಸಂಸದರನ್ನು ಹನಿಟ್ರ್ಯಾಪ್ ಮಾಡಲಾಗಿತ್ತು. ಇದು 2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು ಎಂದು ಶಿವಸೇನೆ (ಯುಬಿಟಿ) ಮಂಗಳವಾರ ಆರೋಪಿಸಿದೆ.

ಕೇಂದ್ರ ಸಂಸ್ಥೆಗಳ ಒತ್ತಡದಿಂದಾಗಿ ಅವಿಭಜಿತ ಶಿವಸೇನೆ ಮತ್ತು ಎನ್‌ಸಿಪಿಯ ಕೆಲವು ಶಾಸಕರು ನಿಷ್ಠೆಯನ್ನು ಬದಲಾಯಿಸಿದರು ಎಂದು ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯ ಹೇಳಿದೆ.

ಕನಿಷ್ಠ 18 ಶಾಸಕರು ಮತ್ತು ನಾಲ್ವರು ಸಂಸದರನ್ನು ‘ಹನಿಟ್ರ್ಯಾಪ್’ ಮಾಡಲಾಗಿತ್ತು. ಅವರು ತಮ್ಮ ಇಮೇಜ್ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಕೈ ಜೋಡಿಸಿದರು ಎಂದಿದೆ.

ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಅವರು ಸಂಸದರು ಮತ್ತು ಶಾಸಕರನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ್ದು, ಮಾಜಿ ವಿರೋಧ ಪಕ್ಷದ ನಾಯಕರಾದ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾಮ್ನಾ ಒತ್ತಾಯಿಸಿದೆ.

“ಇಸ್ರೇಲ್‌ ಮೂಲದ ಗುಪ್ತ ಕ್ಯಾಮರಾಗಳು ಮತ್ತು ಪೆಗಾಸಸ್ ತರಹದ ವ್ಯವಸ್ಥೆಯನ್ನು (ಕಣ್ಗಾವಲುಗಾಗಿ) ಪೂರ್ಣ ಪ್ರಮಾಣದಲ್ಲಿ ಬಳಸಲಾಯಿತು. ಈ (ಹನಿ) ಟ್ರ್ಯಾಪಿಂಗ್‌ನಿಂದಾಗಿ ಎಂವಿಎ ಸರ್ಕಾರ ಪತನಗೊಂಡಿತು ಎಂಬುದು ಈಗ ಸ್ಪಷ್ಟವಾಗಿದೆ” ಎಂದು ತಿಳಿಸಿದೆ.

ಬಿಜೆಪಿಯಲ್ಲಿ ಹನಿಟ್ರ್ಯಾಪ್ ಮಾಡುವ ವ್ಯವಸ್ಥೆ ಇತ್ತು ಮತ್ತು ಪೊಲೀಸರು ಕೂಡ ವಿರೋಧ ಪಕ್ಷದವರ ಮೇಲೆ ಕಣ್ಗಾವಲು ಇಟ್ಟಿದ್ದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನಾ ಸಂಸದರು ಮತ್ತು ಶಾಸಕರನ್ನು ಒಳಗೊಂಡ ಹನಿಟ್ರ್ಯಾಪಿಂಗ್‌ನ ಪುರಾವೆಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಏಕನಾಥ್ ಶಿಂಧೆ ಅವರಿಗೆ ಹಸ್ತಾಂತರಿಸಿದಾಗ, ಅವರು ಸೂರತ್, ಗುವಾಹಟಿ ಮತ್ತು ನಂತರ ಗೋವಾಕ್ಕೆ ಪ್ರಯಾಣ ಬೆಳೆಸಿದರು. ‘ಇದೊಂದು ರೀತಿಯ ಸಸ್ಪೆನ್ಸ್ ಥ್ರಿಲ್ಲರ್’ ಎಂದಿದೆ.

ಶಿಂಧೆ ಅವರಿಗೆ ಆರಂಭದಲ್ಲಿ ಸಂಖ್ಯಾ ಬಲದ ಕೊರತೆಯಿತ್ತು. ಆ ಸಮಯದಲ್ಲಿ ಅವರಿಗೆ ಕೇವಲ ಒಂಬತ್ತು ಅಥವಾ ಹತ್ತು ಶಾಸಕರ ಬೆಂಬಲವಿತ್ತು. ಆದಾಗ್ಯೂ, ಗೃಹ ಇಲಾಖೆಯ ಜನರು ಮತ್ತು ಅಂದಿನ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಸಂಸದರು ಮತ್ತು ಶಾಸಕರನ್ನು ಬ್ಲಾಕ್‌ಮೇಲ್ ಮಾಡಿದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನೆಯ ಸಚಿವರಾದ ಸಂಜಯ್ ಶಿರ್ಸಾತ್, ಯೋಗೇಶ್ ಕದಮ್ ಮತ್ತು ದಾದಾ ಭೂಸೆ ಮತ್ತು ಅವರ ಎನ್‌ಸಿಪಿ ಸಹೋದ್ಯೋಗಿ ಮಾಣಿಕ್ ಕೊಕಟೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಸಂಪಾದಕೀಯದಲ್ಲಿ ಆಗ್ರಹಿಸಲಾಗಿದೆ.

ಕೆಲವು ಸಚಿವರು ಹನಿಟ್ರ್ಯಾಪ್ ಹನಿಟ್ರ್ಯಾಪ್‌ಗೆ ಸಿಲುಕಿದ್ದು,ಅವರು ಕೂಡ ಸಂಪುಟದಿಂದ ಹೋಗಬೇಕಾಗುತ್ತದೆ ಎಂದಿದೆ.

ಕೆಲವು ಸಚಿವರ ನಡವಳಿಕೆಯು ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ಪುನರ್‌ರಚನೆ ನಡೆಯುವುದನ್ನು ಸೂಚಿಸುತ್ತದೆ ಎಂದು ಸಾಮ್ನಾ ಹೇಳಿದೆ.

ಎಸ್‌ಪಿ ಸಂಸದೆ ಇಕ್ರಾ ಹಸನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕರ್ಣಿ ಸೇನಾ ನಾಯಕ ಯೋಗೇಂದ್ರ ರಾಣಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...