Homeಮುಖಪುಟಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

ಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

"ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಲಾಗಿತ್ತು"

- Advertisement -
- Advertisement -

ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಿಕೊಂಡು ಶಾಸಕರು, ಸಂಸದರನ್ನು ಹನಿಟ್ರ್ಯಾಪ್ ಮಾಡಲಾಗಿತ್ತು. ಇದು 2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು ಎಂದು ಶಿವಸೇನೆ (ಯುಬಿಟಿ) ಮಂಗಳವಾರ ಆರೋಪಿಸಿದೆ.

ಕೇಂದ್ರ ಸಂಸ್ಥೆಗಳ ಒತ್ತಡದಿಂದಾಗಿ ಅವಿಭಜಿತ ಶಿವಸೇನೆ ಮತ್ತು ಎನ್‌ಸಿಪಿಯ ಕೆಲವು ಶಾಸಕರು ನಿಷ್ಠೆಯನ್ನು ಬದಲಾಯಿಸಿದರು ಎಂದು ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯ ಹೇಳಿದೆ.

ಕನಿಷ್ಠ 18 ಶಾಸಕರು ಮತ್ತು ನಾಲ್ವರು ಸಂಸದರನ್ನು ‘ಹನಿಟ್ರ್ಯಾಪ್’ ಮಾಡಲಾಗಿತ್ತು. ಅವರು ತಮ್ಮ ಇಮೇಜ್ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಕೈ ಜೋಡಿಸಿದರು ಎಂದಿದೆ.

ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಅವರು ಸಂಸದರು ಮತ್ತು ಶಾಸಕರನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ್ದು, ಮಾಜಿ ವಿರೋಧ ಪಕ್ಷದ ನಾಯಕರಾದ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾಮ್ನಾ ಒತ್ತಾಯಿಸಿದೆ.

“ಇಸ್ರೇಲ್‌ ಮೂಲದ ಗುಪ್ತ ಕ್ಯಾಮರಾಗಳು ಮತ್ತು ಪೆಗಾಸಸ್ ತರಹದ ವ್ಯವಸ್ಥೆಯನ್ನು (ಕಣ್ಗಾವಲುಗಾಗಿ) ಪೂರ್ಣ ಪ್ರಮಾಣದಲ್ಲಿ ಬಳಸಲಾಯಿತು. ಈ (ಹನಿ) ಟ್ರ್ಯಾಪಿಂಗ್‌ನಿಂದಾಗಿ ಎಂವಿಎ ಸರ್ಕಾರ ಪತನಗೊಂಡಿತು ಎಂಬುದು ಈಗ ಸ್ಪಷ್ಟವಾಗಿದೆ” ಎಂದು ತಿಳಿಸಿದೆ.

ಬಿಜೆಪಿಯಲ್ಲಿ ಹನಿಟ್ರ್ಯಾಪ್ ಮಾಡುವ ವ್ಯವಸ್ಥೆ ಇತ್ತು ಮತ್ತು ಪೊಲೀಸರು ಕೂಡ ವಿರೋಧ ಪಕ್ಷದವರ ಮೇಲೆ ಕಣ್ಗಾವಲು ಇಟ್ಟಿದ್ದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನಾ ಸಂಸದರು ಮತ್ತು ಶಾಸಕರನ್ನು ಒಳಗೊಂಡ ಹನಿಟ್ರ್ಯಾಪಿಂಗ್‌ನ ಪುರಾವೆಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಏಕನಾಥ್ ಶಿಂಧೆ ಅವರಿಗೆ ಹಸ್ತಾಂತರಿಸಿದಾಗ, ಅವರು ಸೂರತ್, ಗುವಾಹಟಿ ಮತ್ತು ನಂತರ ಗೋವಾಕ್ಕೆ ಪ್ರಯಾಣ ಬೆಳೆಸಿದರು. ‘ಇದೊಂದು ರೀತಿಯ ಸಸ್ಪೆನ್ಸ್ ಥ್ರಿಲ್ಲರ್’ ಎಂದಿದೆ.

ಶಿಂಧೆ ಅವರಿಗೆ ಆರಂಭದಲ್ಲಿ ಸಂಖ್ಯಾ ಬಲದ ಕೊರತೆಯಿತ್ತು. ಆ ಸಮಯದಲ್ಲಿ ಅವರಿಗೆ ಕೇವಲ ಒಂಬತ್ತು ಅಥವಾ ಹತ್ತು ಶಾಸಕರ ಬೆಂಬಲವಿತ್ತು. ಆದಾಗ್ಯೂ, ಗೃಹ ಇಲಾಖೆಯ ಜನರು ಮತ್ತು ಅಂದಿನ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಸಂಸದರು ಮತ್ತು ಶಾಸಕರನ್ನು ಬ್ಲಾಕ್‌ಮೇಲ್ ಮಾಡಿದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನೆಯ ಸಚಿವರಾದ ಸಂಜಯ್ ಶಿರ್ಸಾತ್, ಯೋಗೇಶ್ ಕದಮ್ ಮತ್ತು ದಾದಾ ಭೂಸೆ ಮತ್ತು ಅವರ ಎನ್‌ಸಿಪಿ ಸಹೋದ್ಯೋಗಿ ಮಾಣಿಕ್ ಕೊಕಟೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಸಂಪಾದಕೀಯದಲ್ಲಿ ಆಗ್ರಹಿಸಲಾಗಿದೆ.

ಕೆಲವು ಸಚಿವರು ಹನಿಟ್ರ್ಯಾಪ್ ಹನಿಟ್ರ್ಯಾಪ್‌ಗೆ ಸಿಲುಕಿದ್ದು,ಅವರು ಕೂಡ ಸಂಪುಟದಿಂದ ಹೋಗಬೇಕಾಗುತ್ತದೆ ಎಂದಿದೆ.

ಕೆಲವು ಸಚಿವರ ನಡವಳಿಕೆಯು ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ಪುನರ್‌ರಚನೆ ನಡೆಯುವುದನ್ನು ಸೂಚಿಸುತ್ತದೆ ಎಂದು ಸಾಮ್ನಾ ಹೇಳಿದೆ.

ಎಸ್‌ಪಿ ಸಂಸದೆ ಇಕ್ರಾ ಹಸನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕರ್ಣಿ ಸೇನಾ ನಾಯಕ ಯೋಗೇಂದ್ರ ರಾಣಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...