Homeಫ್ಯಾಕ್ಟ್‌ಚೆಕ್ಪಾಕಿಸ್ತಾನ ಪರ ಘೋಷಣೆ ಆರೋಪ: ಖಾಸಗಿ ಎಫ್‌ಎಸ್‌ಎಲ್‌ ವರದಿ ಹರಿಬಿಟ್ಟ ಬಿಜೆಪಿ

ಪಾಕಿಸ್ತಾನ ಪರ ಘೋಷಣೆ ಆರೋಪ: ಖಾಸಗಿ ಎಫ್‌ಎಸ್‌ಎಲ್‌ ವರದಿ ಹರಿಬಿಟ್ಟ ಬಿಜೆಪಿ

ಸರ್ಕಾರದ ಅಧಿಕೃತ ಎಫ್‌ಎಸ್‌ಎಲ್‌ ವರದಿ ಬಿಡುಗಡೆಯಾಗುವ ಮುನ್ನವೇ, ಬಲಪಂಥೀಯವಾದಿಯೊಬ್ಬರು ನೀಡಿರುವ ವರದಿಯನ್ನು ಬಿಜೆಪಿ ನಾಯಕರು ಹಂಚಿಕೊಂಡಿಕೊಂಡಿದ್ದಾರೆ.

- Advertisement -
- Advertisement -

ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆಯ ವೇಳೆ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಘೋಷಣೆ ಕೂಗಿರುವ ಆಡಿಯೋ ರೆಕಾರ್ಡ್‌ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆ (ಎಫ್‌ಎಸ್‌ಎಲ್‌)ಗೆ ಸರ್ಕಾರ ಕಳುಹಿಸಿಕೊಟ್ಟಿದೆ. ಈ ನಡುವೆ ಬಿಜೆಪಿ ಮತ್ತು ಅದರ ನಾಯಕರು ಖಾಸಗಿ ಎಫ್ಎಸ್‌ಎಲ್‌ ವರದಿಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಖಾಸಗಿ ಎಫ್‌ಎಸ್‌ಎಲ್‌ ವರದಿಯನ್ನು ಹಂಚಿಕೊಂಡಿದ್ದು, “ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ, ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುವುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಝಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಝಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ ಎಫ್‌ಎಸ್‌ಎಲ್‌ ವರದಿಯಲ್ಲಿ ಬಟಾ ಬಯಲಾಗಿದೆ. ರಾಷ್ಟ್ರ ವಿರೋಧಿ ಧೋರಣೆಯ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು” ಎಂದು ಬರೆದುಕೊಳ್ಳಲಾಗಿದೆ.

“ಬಿಜೆಪಿ ರಾಜ್ಯಾಧ್ಯಕ್ಷರ ಬಿವೈ ವಿಜಯೇಂದ್ರ ಕೂಡ ಖಾಸಗಿ ಎಫ್‌ಎಸ್‌ಎಲ್‌ ವರದಿಯನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಮಾನ್ಯ ಸಿದ್ದರಾಮ್ಯನವರೇ ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ. ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯ ತೋರುತ್ತಾರೆ. ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ? ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ” ಎಂದಿದ್ದಾರೆ.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವತಂತ್ರ್ಯ ದೊರೆತ ವಾತಾವರಣ ನಿರ್ಮಾಣವಾಗಿದೆ. ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ.’ಬೆಂದ ಮನೆಯಲ್ಲಿ ಗಳ ಇರಿಯುವ’ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ. ವಿಧಾನ ಸೌಧದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೇಳಿ ಬಂದರೆ ನಾವು ಕೈಕಟ್ಟಿ ಕೂರಬೇಕೇ? ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ. ಖಾಸಗಿ ಎಫ್‌ಎಸ್‌ಎಲ್‌ ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ. ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ. ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಕೂಡ ಎಕ್ಸ್‌ನಲ್ಲಿ ವರದಿ ಹಂಚಿಕೊಂಡಿದ್ದು, “ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಸತ್ಯ ಎಂದು ಖಾಸಗಿ ವರದಿಯೊಂದು ಧೃಢ ಪಡಿಸಿದೆ. ಎಫ್‌ಎಸ್‌ಎಲ್‌ ವರದಿಯಲ್ಲೂ ಇದು ಖಚಿತವಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಗೊಂದಲಕ್ಕೆಲ್ಲಾ ಒಂದು ಶಾಶ್ವತ ತೆರೆ ಎಳೆಯಬೇಕಾದರೆ ಸರ್ಕಾರ ಎಫ್‌ಎಸ್‌ಎಲ್‌ ವರದಿಯನ್ನು ತಕ್ಷಣ ಬಹಿರಂಗಪಡಿಸಬೇಕು. ಆದರೆ ವರದಿ ಬಹಿರಂಗಪಡಿಸಲು ಹಿಂದೆ ಮುಂದೆ ನೋಡುತ್ತಿರುವ ಸಿಎಂ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿಗೂಢ ನಡೆ ನೋಡುತ್ತಿದ್ದರೆ, ಕಾಂಗ್ರೆಸ್ ಸರ್ಕಾರ ಏನನ್ನೂ ಮುಚ್ಚಿಡಲು, ಯಾರನ್ನೋ ರಕ್ಷಿಸಲು, ಯಾವುದೋ ಒತ್ತಡದಲ್ಲಿ ಇರುವಂತೆ ಕಾಣಿಸುತ್ತಿದೆ” ಎಂದಿದ್ದಾರೆ.

“ಸಿಎಂ ಸಿದ್ದರಾಮಯ್ಯನವರೇ, ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ತಾವು ಸತ್ಯವನ್ನ ತುಳಿದರೆ ಅದು ನಿಮಗೆ ಶೋಭೆ ತರುವುದಿಲ್ಲ. ದೇಶಕ್ಕಿಂತ ತಮಗೆ ಪಕ್ಷವೇ ಹೆಚ್ಚಾಗಿ ಹೋಯಿತೇ? ರಾಷ್ಟ್ರದ ಹಿತಾಸಕ್ತಿಗಿಂತ ವೋಟು ಬ್ಯಾಂಕ್ ರಾಜಕಾರಣವೇ ದೊಡ್ಡದಾಯಿತೇ? ಮೊದಲು ದೇಶ ಉಳಿದರೆ, ದೇಶ ಸುರಕ್ಷಿತವಾಗಿದ್ದರೆ ನಂತರ ನಿಮ್ಮ ಪಕ್ಷ, ವೋಟು, ಅಧಿಕಾರ ಎಲ್ಲಾ ಇರಲು ಸಾಧ್ಯ. ತಮಗೆ ಕಿಂಚಿತ್ತಾದರೂ ದೇಶಪ್ರೇಮವಿದ್ದರೆ ಈ ಕೂಡಲೇ ಎಫ್‌ಎಸ್‌ಎಲ್‌ ವರದಿ ಬಹಿರಂಗ ಮಾಡಿ ದೇಶದ ಜನತೆಗೆ ಕ್ಷಮೆ ಕೇಳಿ” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ನಾಯಕರು ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್‌, ಸರ್ಕಾರದ ಅಧಿಕೃತ ಎಫ್‌ಎಸ್‌ಎಲ್‌ ವರದಿ ಇನ್ನೂ ಬಿಡುಗಡೆಯಾಗಿಲ್ಲ. ಎಫ್‌ಎಸ್‌ಎಲ್‌ ವರದಿಯಲ್ಲಿ ತಿಳಿಯಬೇಕಾದ ಅಂಶ ವಿಡಿಯೋ ಅಸಲಿಯೋ ನಕಲಿಯೋ ಎನ್ನುವುದಕ್ಕಿಂತ ವಿಡಿಯೋದಲ್ಲಿ ಘೋಷಣೆ ಕೂಗಿದ್ದು ಪಾಕಿಸ್ತಾನ ಅಥವಾ ನಾಸಿರ್ ಸಾಬ್ ಎನ್ನುವುದು. ಯಾವುದೊ ನಕಲಿ ವರದಿಯನ್ನು ಸೃಷ್ಟಿ ಮಾಡಿದ ಬಿಜೆಪಿ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಹೊರಟಿದೆ. ಸುಳ್ಳುಗಳ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿರುವ ಬಿಜೆಪಿ” ಎಂದು ಬರೆದುಕೊಂಡಿದೆ.

ಮತ್ತೊಂದು ಪೋಸ್ಟ್ ಮಾಡಿರುವ ಕಾಂಗ್ರೆಸ್‌, “ಬಿಜೆಪಿಯ ಫೇಕ್ ಫ್ಯಾಕ್ಟರಿಯಲ್ಲಿ ಏನು ಬೇಕಿದ್ದರೂ ತಯಾರಾಗುತ್ತವೆ. ಪಾಕಿಸ್ತಾನ್ ಜಿಂದಾಬಾದ್ ಎನ್ನುವುದೂ ಬಿಜೆಪಿ ಫ್ಯಾಕ್ಟರಿಯಲ್ಲೇ ತಯಾರಾಗುತ್ತವೆ. ಎಫ್‌ಎಸ್‌ಎಲ್‌ ರಿಪೋರ್ಟ್‌ಗಳೂ ಬಿಜೆಪಿಯಲ್ಲೇ ತಯಾರಾಗುತ್ತವೆ. ಸುಳ್ಳು, ನಕಲಿತನವನ್ನು ಹುಟ್ಟಿಸಿದ ಅಪ್ಪ ಅಮ್ಮನೇ ಬಿಜೆಪಿ!. ನಕಲಿ, ಅನಧಿಕೃತ ಎಫ್‌ಎಸ್‌ಎಲ್‌ ವರದಿಯನ್ನು ತಯಾರಿಸಿದಯ ಫೇಕ್ ಫ್ಯಾಕ್ಟರಿಗೆ ಬೀಗ ಜಡಿಯುವುದು ನಮ್ಮ ಸರ್ಕಾರಕ್ಕೆ ತಿಳಿದಿದೆ” ಎಂದಿದೆ.

thesouthfirst.com ನ ಕಾರ್ಯ ನಿರ್ವಾಹಕ ಸಂಪಾದಕಿ ಅನುಶಾ ರವಿ ಸೂದ್ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಸಂವಾದ ಫೌಂಡೇಶನ್‌ ಎಂಬ ಸಂಸ್ಥೆ ಖಾಸಗಿ ಏಜೆನ್ಸಿ ಮೂಲಕ ಮಾಡಿಸಿರುವ ವಿಧಿ ವಿಜ್ಞಾನ ಪರೀಕ್ಷೆಯ ವರದಿ ಇಲ್ಲಿದೆ. ಈ ವರದಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ದೃಢೀಕರಿಸಲಾಗಿದೆ. ಹಲವಾರು ಮಾಧ್ಯಮಗಳು ಇದನ್ನು ಅಧಿಕೃತ “ಎಫ್‌ಎಸ್‌ಎಲ್ ವರದಿ” ಎಂದು ಹಂಚಿಕೊಂಡಿದೆ. ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ವರದಿ ಸ್ಪಷ್ಟವಾಗಿ ಹೇಳಿದೆ. ಅವರು ಈ ತೀರ್ಮಾನಕ್ಕೆ ಹೇಗೆ ಬಂದರು ಎಂಬುವುದು ಇಲ್ಲಿದೆ” ಎಂದು ಬರೆದುಕೊಂಡಿದ್ದು, ಖಾಸಗಿ ವರದಿಯನ್ನು ಹಂಚಿಕೊಂಡಿದ್ದಾರೆ.

ಖಾಸಗಿ ಎಫ್‌ಎಸ್‌ಎಲ್‌ ವರದಿ ಯಾರದ್ದು?

“ಸಂವಾದ ಫೌಂಡೇಷನ್ ಎಂಬ ಖಾಸಗಿ ಸಂಸ್ಥೆಯು clue4evidence ಎಂಬ ಸಂಸ್ಥೆಯ ಮೂಲಕ ಎಫ್‌ಎಸ್‌ಎಲ್‌ ವರದಿ ಪಡೆದಿದೆ. ವರದಿ ನೀಡಿರುವುದು ಫಣೀಂದ್ರ ಬಿ.ಎನ್ ಎಂಬ ವ್ಯಕ್ತಿ. ಇವರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಷಯಗಳನ್ನು ಗಮನಿಸಿದರೆ, ಈತ ಮುಸ್ಲಿಂ ದ್ವೇಷ ಇರುವ ಸಂಘಪರಿವಾರದ ಕಾಲಾಳು ಎಂಬುದು ಸ್ಪಷ್ಟವಾಗುತ್ತದೆ. clue4evidence ಸಂಸ್ಥೆಯ ಮುಖ್ಯಕಚೇರಿ ಬೆಂಗಳೂರಿನ ಡಿಕನ್ ಸನ್ ರಸ್ತೆಯಲ್ಲಿದ್ದು, ಮೈಸೂರು ಮತ್ತು ಕೊಚ್ಚಿನ್ ನಲ್ಲಿ ಕಚೇರಿಗಳನ್ನು ಹೊಂದಿದೆ ಎಂದು ಅದರ ವೆಬ್ ಸೈಟ್ ಹೇಳುತ್ತದೆ. ಖಾಸಗಿಯಾಗಿ ಎಫ್‌ಎಸ್‌ಎಲ್‌ ವರದಿಗಳನ್ನು ಮಾಡುವ ಇದು, ಡಿಎನ್ ಎ ಅನಾಲಿಸಿಸ್ ಮಾಡುವುದಾಗಿಯೂ ಹೇಳಿಕೊಳ್ಳುತ್ತದೆ ಎಂದು kannadaplanet.com ವರದಿ ಮಾಡಿದೆ.

ಫಣೀಂದ್ರ ಬಿ.ಎನ್ ಸಹಿ ಮಾಡಿರುವ ಎಫ್‌ಎಸ್‌ಎಲ್‌ ವರದಿಯಲ್ಲಿ ನಾಸೀರ್‌ ಸಾಬ್‌ ಝಿಂದಾಬಾದ್‌ ಮತ್ತು ಪಾಕಿಸ್ತಾನ್‌ ಝಿಂದಾಬಾದ್‌ ಘೋಷಣೆಗಳ ನಡುವೆ ಪಾಕಿಸ್ತಾನ್‌ ಝಿಂದಾಬಾದ್‌ ಎಂದೇ ಕೂಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆಯಾದರೂ, ಪಾಕಿಸ್ತಾನ್‌ ಝಿಂದಾಬಾದ್‌ ಘೋಷಣೆಯನ್ನೇ ಕೂಗಲಾಗಿದೆ ಎಂದು ಹೇಳಿಲ್ಲ ಎಂದು ತಿಳಿಸಿದೆ.

ವರದಿ ಲಿಂಕ್ ಇಲ್ಲಿದೆ : 

ಗೃಹ ಸಚಿವರು ಹೇಳಿದ್ದೇನು? 

ಖಾಸಗಿ ಸಂಸ್ಥೆಯವರು ನೀಡಿರುವ ಎಫ್​ಎಸ್​ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರದ ಎಫ್​ಎಸ್​ಎಲ್​, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಪಾಕಿಸ್ತಾನ್‌ ಘೋಷಣೆ ಕೂಗಿರುವ ಆರೋಪದ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯ ಸರ್ಕಾರ ಆಪಾದಿತ ಆಡಿಯೋವನ್ನು ಸರ್ಕಾರದ ಅಧಿಕೃತ ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಿದೆ. ಈ ಪರೀಕ್ಷೆಯ ವರದಿ ಬಂದ ಬಳಿಕ ಅಧಿಕೃತ ಎನ್ನಬಹುದು. ಅಲ್ಲದೆ, ಖಾಸಗಿ ವರದಿಯನ್ನು ನೂಡಿ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರಿಲ್ಲ ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...