Homeಮುಖಪುಟಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಪ್ರತಿನಿಧಿಸುತ್ತಿರುವ ಕಲ್ಯಾಣ್-ಡೊಂಬಿವಲಿ ಲೋಕಸಭಾ ಕ್ಷೇತ್ರದ ವಿಚಾರವು ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯಲ್ಲಿ ಬಿಕ್ಕಟ್ಟು ತಂದೊಡ್ಡಿದೆ.

ಶುಕ್ರವಾರ ಸಂಜೆ ಶ್ರೀಕಾಂತ್ ಶಿಂಧೆ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, “ಒಂದು ವೇಳೆ ಕ್ಷುಲ್ಲಕ ವಿಚಾರವಾಗಿ, ಕಲ್ಯಾಣ್ ಡೊಂಬಿವಲಿ ಕ್ಷೇತ್ರವನ್ನು ಪಡೆಯುವ ಬಗ್ಗೆ ಬಿಜೆಪಿ ಕಟಿಬದ್ಧವಾಗಿದ್ದರೆ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಹೇಳಿದ್ದಾರೆ.

“ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪೋಸ್ಟಿಂಗ್ ವಿಚಾರವನ್ನು ಬಿಜೆಪಿ ಮತ್ತು ಅದರ ಕಾರ್ಯಕರ್ತರು ದೊಡ್ಡದು ಮಾಡಬಾರದು. ಇದು ಸಣ್ಣ ವಿಚಾರ. ನಾವು ದೊಡ್ಡ ಗುರಿಗಾಗಿ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಭಾರತದ ಪ್ರಧಾನಿಯನ್ನಾಗಿ ಮಾಡಬೇಕು” ಎಂದು ಡಾ.ಶ್ರೀಕಾಂತ್ ಶಿಂಧೆ ತಿಳಿಸಿದ್ದಾರೆ.

ಡೊಂಬಿವಿಲಿಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ದಿವಾದಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅವರು ಹಲವು ಯೋಜನೆಗಳನ್ನು ಉದ್ಘಾಟಿಸಿದ ಒಂದು ದಿನದ ನಂತರ ಬಿಜೆಪಿ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ ನಡುವೆ ಬಿಕ್ಕಟ್ಟುಗಳು ಮುನ್ನೆಲೆಗೆ ಬಂದಿವೆ.

ಜಾಹೀರಾತು ಫಲಕಗಳು, ಪೋಸ್ಟರ್‌ಗಳಲ್ಲಿ ಶಿವಸೇನೆ ಉದ್ದೇಶಪೂರ್ವಕವಾಗಿ ದೇವೇಂದ್ರ ಫಡ್ನಾವೀಸ್‌ ಅವರ ಭಾವಚಿತ್ರವನ್ನು ಕೈಬಿಟ್ಟಿರುವುದಕ್ಕೆ ಕೋಪಗೊಂಡ ಕಲ್ಯಾಣ್-ಡೊಂಬಿವಿಲಿ ಘಟಕದ ಬಿಜೆಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

ಶಿವಸೇನೆ ಸಂಸದ ಶ್ರೀಕಾಂತ್‌ ಶಿಂಧೆಯವರ ನಿಕಟವರ್ತಿ ಎನಿಸಿರುವ ಮಾನ್ಪಾಡ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಬಾಗ್ಡೆ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಮುಖಂಡರು ನಿರ್ಣಯ ಅಂಗೀಕರಿಸಿದ್ದಾರೆ.

ಬಿಜೆಪಿಯ ಡೊಂಬಿವಿಲಿ ಪೂರ್ವ ಮಂಡಲದ ಅಧ್ಯಕ್ಷ ನಂದು ಜೋಶಿ ವಿರುದ್ಧ ದಾಖಲಾದ ದೌರ್ಜನ್ಯ ಪ್ರಕರಣವೇ ಈ ಬಿಕ್ಕಟ್ಟಿಗೆ ಕಾರಣ ಎನ್ನಲಾಗುತ್ತಿದೆ. ಜೋಶಿಯವರನ್ನು ರಾಜಕೀಯವಾಗಿ ಮುಗಿಸಲು ಶಿವಸೇನೆ ಯತ್ನಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಜೋಶಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸುರೇಶ್ ಬಾಗ್ಡೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ದೂರಿದ್ದಾರೆ.

“ಕಳೆದ ಒಂಬತ್ತು ವರ್ಷಗಳಿಂದ ಕಲ್ಯಾಣ ಡೊಂಬಿವಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ, ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದೇನೆ. ಜನರು ಹೆಚ್ಚಿನ ಮತ ಹಾಕಿದ್ದಾರೆ” ಎಂದು ಶ್ರೀಕಾಂತ್‌ ಶಿಂಧೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

“ಬಿಜೆಪಿ ಉತ್ತಮ ಅಭ್ಯರ್ಥಿ ಹೊಂದಿದ್ದರೆ, ರಾಜೀನಾಮೆ ನೀಡಲು ಸಿದ್ಧ. ಆದರೆ ಬಿಜೆಪಿ ಸಣ್ಣ ವಿಷಯವನ್ನು ದೊಡ್ಡದು ಮಾಡಿ ಶಿವಸೇನೆ-ಬಿಜೆಪಿ ಮೈತ್ರಿಯಲ್ಲಿ ಗೊಂದಲ ಸೃಷ್ಟಿಸಬಾರದು” ಎಂದು ಶಿಂಧೆ ಮನವಿ ಮಾಡಿದ್ದಾರೆ.

ಇದು ಆರೆಸ್ಸೆಸ್-ಬಿಜೆಪಿ ಪ್ರಾಬಲ್ಯದ ಕ್ಷೇತ್ರವಾಗಿದೆ. ಆದ್ದರಿಂದ ಬಿಜೆಪಿಯವರು ಈ ಲೋಕಸಭಾ ಸ್ಥಾನವನ್ನು ಮರಳಿ ಪಡೆಯಬೇಕು ಎಂದು ಬಯಸುತ್ತಿದ್ದಾರೆ.

ಕಲ್ಯಾಣ್-ಡೊಂಬಿವಲಿ ಕ್ಷೇತ್ರದ ಜವಾಬ್ದಾರಿಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ವಹಿಸಲಾಗಿದ್ದು, ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ಶಾಸಕ ರವೀಂದ್ರ ಚವಾಣ್ ಅವರು ಈ ಸ್ಥಾನದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...