Homeಮುಖಪುಟಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಪ್ರತಿನಿಧಿಸುತ್ತಿರುವ ಕಲ್ಯಾಣ್-ಡೊಂಬಿವಲಿ ಲೋಕಸಭಾ ಕ್ಷೇತ್ರದ ವಿಚಾರವು ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯಲ್ಲಿ ಬಿಕ್ಕಟ್ಟು ತಂದೊಡ್ಡಿದೆ.

ಶುಕ್ರವಾರ ಸಂಜೆ ಶ್ರೀಕಾಂತ್ ಶಿಂಧೆ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, “ಒಂದು ವೇಳೆ ಕ್ಷುಲ್ಲಕ ವಿಚಾರವಾಗಿ, ಕಲ್ಯಾಣ್ ಡೊಂಬಿವಲಿ ಕ್ಷೇತ್ರವನ್ನು ಪಡೆಯುವ ಬಗ್ಗೆ ಬಿಜೆಪಿ ಕಟಿಬದ್ಧವಾಗಿದ್ದರೆ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಹೇಳಿದ್ದಾರೆ.

“ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪೋಸ್ಟಿಂಗ್ ವಿಚಾರವನ್ನು ಬಿಜೆಪಿ ಮತ್ತು ಅದರ ಕಾರ್ಯಕರ್ತರು ದೊಡ್ಡದು ಮಾಡಬಾರದು. ಇದು ಸಣ್ಣ ವಿಚಾರ. ನಾವು ದೊಡ್ಡ ಗುರಿಗಾಗಿ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಭಾರತದ ಪ್ರಧಾನಿಯನ್ನಾಗಿ ಮಾಡಬೇಕು” ಎಂದು ಡಾ.ಶ್ರೀಕಾಂತ್ ಶಿಂಧೆ ತಿಳಿಸಿದ್ದಾರೆ.

ಡೊಂಬಿವಿಲಿಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ದಿವಾದಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅವರು ಹಲವು ಯೋಜನೆಗಳನ್ನು ಉದ್ಘಾಟಿಸಿದ ಒಂದು ದಿನದ ನಂತರ ಬಿಜೆಪಿ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ ನಡುವೆ ಬಿಕ್ಕಟ್ಟುಗಳು ಮುನ್ನೆಲೆಗೆ ಬಂದಿವೆ.

ಜಾಹೀರಾತು ಫಲಕಗಳು, ಪೋಸ್ಟರ್‌ಗಳಲ್ಲಿ ಶಿವಸೇನೆ ಉದ್ದೇಶಪೂರ್ವಕವಾಗಿ ದೇವೇಂದ್ರ ಫಡ್ನಾವೀಸ್‌ ಅವರ ಭಾವಚಿತ್ರವನ್ನು ಕೈಬಿಟ್ಟಿರುವುದಕ್ಕೆ ಕೋಪಗೊಂಡ ಕಲ್ಯಾಣ್-ಡೊಂಬಿವಿಲಿ ಘಟಕದ ಬಿಜೆಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

ಶಿವಸೇನೆ ಸಂಸದ ಶ್ರೀಕಾಂತ್‌ ಶಿಂಧೆಯವರ ನಿಕಟವರ್ತಿ ಎನಿಸಿರುವ ಮಾನ್ಪಾಡ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಬಾಗ್ಡೆ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಮುಖಂಡರು ನಿರ್ಣಯ ಅಂಗೀಕರಿಸಿದ್ದಾರೆ.

ಬಿಜೆಪಿಯ ಡೊಂಬಿವಿಲಿ ಪೂರ್ವ ಮಂಡಲದ ಅಧ್ಯಕ್ಷ ನಂದು ಜೋಶಿ ವಿರುದ್ಧ ದಾಖಲಾದ ದೌರ್ಜನ್ಯ ಪ್ರಕರಣವೇ ಈ ಬಿಕ್ಕಟ್ಟಿಗೆ ಕಾರಣ ಎನ್ನಲಾಗುತ್ತಿದೆ. ಜೋಶಿಯವರನ್ನು ರಾಜಕೀಯವಾಗಿ ಮುಗಿಸಲು ಶಿವಸೇನೆ ಯತ್ನಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಜೋಶಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸುರೇಶ್ ಬಾಗ್ಡೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ದೂರಿದ್ದಾರೆ.

“ಕಳೆದ ಒಂಬತ್ತು ವರ್ಷಗಳಿಂದ ಕಲ್ಯಾಣ ಡೊಂಬಿವಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ, ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದೇನೆ. ಜನರು ಹೆಚ್ಚಿನ ಮತ ಹಾಕಿದ್ದಾರೆ” ಎಂದು ಶ್ರೀಕಾಂತ್‌ ಶಿಂಧೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

“ಬಿಜೆಪಿ ಉತ್ತಮ ಅಭ್ಯರ್ಥಿ ಹೊಂದಿದ್ದರೆ, ರಾಜೀನಾಮೆ ನೀಡಲು ಸಿದ್ಧ. ಆದರೆ ಬಿಜೆಪಿ ಸಣ್ಣ ವಿಷಯವನ್ನು ದೊಡ್ಡದು ಮಾಡಿ ಶಿವಸೇನೆ-ಬಿಜೆಪಿ ಮೈತ್ರಿಯಲ್ಲಿ ಗೊಂದಲ ಸೃಷ್ಟಿಸಬಾರದು” ಎಂದು ಶಿಂಧೆ ಮನವಿ ಮಾಡಿದ್ದಾರೆ.

ಇದು ಆರೆಸ್ಸೆಸ್-ಬಿಜೆಪಿ ಪ್ರಾಬಲ್ಯದ ಕ್ಷೇತ್ರವಾಗಿದೆ. ಆದ್ದರಿಂದ ಬಿಜೆಪಿಯವರು ಈ ಲೋಕಸಭಾ ಸ್ಥಾನವನ್ನು ಮರಳಿ ಪಡೆಯಬೇಕು ಎಂದು ಬಯಸುತ್ತಿದ್ದಾರೆ.

ಕಲ್ಯಾಣ್-ಡೊಂಬಿವಲಿ ಕ್ಷೇತ್ರದ ಜವಾಬ್ದಾರಿಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ವಹಿಸಲಾಗಿದ್ದು, ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ಶಾಸಕ ರವೀಂದ್ರ ಚವಾಣ್ ಅವರು ಈ ಸ್ಥಾನದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....