Homeಮುಖಪುಟಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕಾರಣ ಶುರು: ಬಿಜೆಪಿಯು ಶಾಸಕರನ್ನು ಕೊಳ್ಳಲು ಪ್ರಯತ್ನಿಸುತ್ತಿದೆ- ಶಿವಸೇನೆ ಆರೋಪ

ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕಾರಣ ಶುರು: ಬಿಜೆಪಿಯು ಶಾಸಕರನ್ನು ಕೊಳ್ಳಲು ಪ್ರಯತ್ನಿಸುತ್ತಿದೆ- ಶಿವಸೇನೆ ಆರೋಪ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಇನ್ನೂ ಕಗ್ಗಟಾಂಗಿದದ್ದು ಮಿತ್ರ ಪಕ್ಷಗಾಳಗಿದ್ದ ಬಿಜೆಪಿ-ಶಿವಸೇನೆ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ. ಸರ್ಕಾರ ರಚನೆಗೆ ಇನ್ನೊಂದು ದಿನ ಮಾತ್ರ ಗಡುವು ಇದ್ದರೂ ಸಹ ಶಿವಸೇನೆ ಮತ್ತೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಬಿಜೆಪಿಯು ಚುನಾಯಿತರಾದ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.

ಹಾಗಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ರೆಸಾರ್ಟ್ ರಾಜಕಾರಣ ಆರಂಭವಾಗಿದೆ. ಬಿಜೆಪಿ ಕುದುರೆ ವ್ಯಾಪಾರ ನಡೆಸಬಹುದೆಂಬ ಭಯದಿಂದ ಶಿವಸೇನೆ ತನ್ನ ಎಲ್ಲಾ 56 ಶಾಸಕರನ್ನು ರೆಸಾರ್ಟ್‌ಗೆ ರವಾನಿಸಿದೆ.

ಈ ನಡುವೆ ಟ್ವೀಟ್ ಮಾಡಿರುವ ಶಿವಸೇನೆ ವಕ್ತಾರ ಸಂಜಯ್ ರಾವತ್, ನಿಮ್ಮ ಕಾಲುಗಳ ಕೆಳಗೆ ಯಾವುದೇ ಭೂಮಿ ಇಲ್ಲ, ಅದು ನೀವು ಇನ್ನೂ ನಂಬದ ಅದ್ಭುತ – ದುಶ್ಯಂತ್ ಕುಮಾರ್ ಎಂದು ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದಿಂದ ಮುಖ್ಯಮಂತ್ರಿಗಳಿರಬೇಕೆಂದು ಮಹಾರಾಷ್ಟ್ರದ ಜನರು ಬಯಸುತ್ತಾರೆ. ಆದರೆ ಅದಕ್ಕೆ ಅವಕಾಶ ನೀಡದಿರಲು ಬಿಜೆಪಿಯು ತನ್ನ “ಹಣದ ಶಕ್ತಿಯನ್ನು” ಬಳಸುತ್ತಿದೆ ಎಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ.

“ಹಿಂದಿನ ಸರ್ಕಾರವು ಹಣದ ಶಕ್ತಿಯೊಂದಿಗೆ ಹೊಸ ಸರ್ಕಾರವನ್ನು ರಚಿಸಲು ಪ್ರಯತ್ನಿಸುತ್ತಿದೆ. ಆದರೆ ರೈತರಿಗೆ ಯಾರೂ ಸಹಾಯ ಮಾಡಿಲ್ಲವಾದ್ದರಿಂದ ರೈತರು ಸೇನಾದಿಂದ ಸಿಎಂ ಬಯಸುತ್ತಾರೆ… ಕೆಲವರು ಹೊಸ ಸೇನಾ ಶಾಸಕರನ್ನು ಹಣದ ಶಕ್ತಿಯಿಂದ ಕೊಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಆದರೆ ರಾಜ್ಯದಲ್ಲಿ ಮೌಲ್ಯಗಳಿಲ್ಲದ ರಾಜಕೀಯವನ್ನು ಶಿವಸೇನೆ ಅನುಮತಿಸುವುದಿಲ್ಲ” ಎಂದು ಸಂಪಾದಕೀಯ ಹೇಳಿದೆ.

ಇನ್ನು ಶಿವಸೇನೆಯೊಂದಿಗೆ ಸರ್ಕಾರ ರಚನೆಗೆ ನಮ್ಮ ಬೆಂಬಲವಿಲ್ಲ ಎಂದು ಎನ್‌ಸಿಪಿ ಮುಖಂಡ ಶರಾದ್‌ ಪವಾರ್‌ ಸ್ಪಷ್ಟಪಡಿಸಿದ್ದಾರೆ. ಜನತೆ ನಮಗೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಆದೇಶ ನೀಡಿದೆ. ಅದನ್ನು ಪಾಲಿಸುತ್ತೇವೆ ಎಂದಿದ್ದಾರೆ.

ನವೆಂಬರ್‌ 08ರಂದು ಈ ಸರ್ಕಾರದ ಅವಧಿ ಮುಗಿಯಲಿದ್ದು, ಇನ್ನೊಂದು ದಿನದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಇಲ್ಲವಾದಲ್ಲಿ ರಾಷ್ಟ್ರಪತ್ರಿ ಆಡಳಿತ ಹೇರುವ ನಿರೀಕ್ಷೆಯಿದೆ. ಅಷ್ಟರಲ್ಲಿ ಬಿಜೆಪಿ ಶಿವಸೇನೆ ಒಂದಾಗುತ್ತಾರ ಇಲ್ಲವಾ ಎಂಬುದು ಇನ್ನೊಂದೆ ದಿನದಲ್ಲಿ ತಿಳಿಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...