Homeಮುಖಪುಟಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕಾರಣ ಶುರು: ಬಿಜೆಪಿಯು ಶಾಸಕರನ್ನು ಕೊಳ್ಳಲು ಪ್ರಯತ್ನಿಸುತ್ತಿದೆ- ಶಿವಸೇನೆ ಆರೋಪ

ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕಾರಣ ಶುರು: ಬಿಜೆಪಿಯು ಶಾಸಕರನ್ನು ಕೊಳ್ಳಲು ಪ್ರಯತ್ನಿಸುತ್ತಿದೆ- ಶಿವಸೇನೆ ಆರೋಪ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಇನ್ನೂ ಕಗ್ಗಟಾಂಗಿದದ್ದು ಮಿತ್ರ ಪಕ್ಷಗಾಳಗಿದ್ದ ಬಿಜೆಪಿ-ಶಿವಸೇನೆ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ. ಸರ್ಕಾರ ರಚನೆಗೆ ಇನ್ನೊಂದು ದಿನ ಮಾತ್ರ ಗಡುವು ಇದ್ದರೂ ಸಹ ಶಿವಸೇನೆ ಮತ್ತೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಬಿಜೆಪಿಯು ಚುನಾಯಿತರಾದ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.

ಹಾಗಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ರೆಸಾರ್ಟ್ ರಾಜಕಾರಣ ಆರಂಭವಾಗಿದೆ. ಬಿಜೆಪಿ ಕುದುರೆ ವ್ಯಾಪಾರ ನಡೆಸಬಹುದೆಂಬ ಭಯದಿಂದ ಶಿವಸೇನೆ ತನ್ನ ಎಲ್ಲಾ 56 ಶಾಸಕರನ್ನು ರೆಸಾರ್ಟ್‌ಗೆ ರವಾನಿಸಿದೆ.

ಈ ನಡುವೆ ಟ್ವೀಟ್ ಮಾಡಿರುವ ಶಿವಸೇನೆ ವಕ್ತಾರ ಸಂಜಯ್ ರಾವತ್, ನಿಮ್ಮ ಕಾಲುಗಳ ಕೆಳಗೆ ಯಾವುದೇ ಭೂಮಿ ಇಲ್ಲ, ಅದು ನೀವು ಇನ್ನೂ ನಂಬದ ಅದ್ಭುತ – ದುಶ್ಯಂತ್ ಕುಮಾರ್ ಎಂದು ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದಿಂದ ಮುಖ್ಯಮಂತ್ರಿಗಳಿರಬೇಕೆಂದು ಮಹಾರಾಷ್ಟ್ರದ ಜನರು ಬಯಸುತ್ತಾರೆ. ಆದರೆ ಅದಕ್ಕೆ ಅವಕಾಶ ನೀಡದಿರಲು ಬಿಜೆಪಿಯು ತನ್ನ “ಹಣದ ಶಕ್ತಿಯನ್ನು” ಬಳಸುತ್ತಿದೆ ಎಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ.

“ಹಿಂದಿನ ಸರ್ಕಾರವು ಹಣದ ಶಕ್ತಿಯೊಂದಿಗೆ ಹೊಸ ಸರ್ಕಾರವನ್ನು ರಚಿಸಲು ಪ್ರಯತ್ನಿಸುತ್ತಿದೆ. ಆದರೆ ರೈತರಿಗೆ ಯಾರೂ ಸಹಾಯ ಮಾಡಿಲ್ಲವಾದ್ದರಿಂದ ರೈತರು ಸೇನಾದಿಂದ ಸಿಎಂ ಬಯಸುತ್ತಾರೆ… ಕೆಲವರು ಹೊಸ ಸೇನಾ ಶಾಸಕರನ್ನು ಹಣದ ಶಕ್ತಿಯಿಂದ ಕೊಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಆದರೆ ರಾಜ್ಯದಲ್ಲಿ ಮೌಲ್ಯಗಳಿಲ್ಲದ ರಾಜಕೀಯವನ್ನು ಶಿವಸೇನೆ ಅನುಮತಿಸುವುದಿಲ್ಲ” ಎಂದು ಸಂಪಾದಕೀಯ ಹೇಳಿದೆ.

ಇನ್ನು ಶಿವಸೇನೆಯೊಂದಿಗೆ ಸರ್ಕಾರ ರಚನೆಗೆ ನಮ್ಮ ಬೆಂಬಲವಿಲ್ಲ ಎಂದು ಎನ್‌ಸಿಪಿ ಮುಖಂಡ ಶರಾದ್‌ ಪವಾರ್‌ ಸ್ಪಷ್ಟಪಡಿಸಿದ್ದಾರೆ. ಜನತೆ ನಮಗೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಆದೇಶ ನೀಡಿದೆ. ಅದನ್ನು ಪಾಲಿಸುತ್ತೇವೆ ಎಂದಿದ್ದಾರೆ.

ನವೆಂಬರ್‌ 08ರಂದು ಈ ಸರ್ಕಾರದ ಅವಧಿ ಮುಗಿಯಲಿದ್ದು, ಇನ್ನೊಂದು ದಿನದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಇಲ್ಲವಾದಲ್ಲಿ ರಾಷ್ಟ್ರಪತ್ರಿ ಆಡಳಿತ ಹೇರುವ ನಿರೀಕ್ಷೆಯಿದೆ. ಅಷ್ಟರಲ್ಲಿ ಬಿಜೆಪಿ ಶಿವಸೇನೆ ಒಂದಾಗುತ್ತಾರ ಇಲ್ಲವಾ ಎಂಬುದು ಇನ್ನೊಂದೆ ದಿನದಲ್ಲಿ ತಿಳಿಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....