Homeಕರ್ನಾಟಕಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

ಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

- Advertisement -
- Advertisement -

ಹಣ ಪಡೆದು ಬಿಜೆಪಿ ಟಿಕೆಟ್ ಕೊಟ್ಟಿರುವ ಬಗ್ಗೆ ಊಹಾಪೋಹ ಇದೆ. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಐದು ಕೋಟಿ ವಂಚಿಸಿದ ಪ್ರಕರಣದ ಬಗ್ಗೆ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಣ ಪಡೆದ ಬಗ್ಗೆ ಕೆಲವು ಕಡೆ ಸುದ್ದಿ ಹೊರಗೆ ಬರುತ್ತಿವೆ, ಇನ್ನೂ ಕೆಲವೆಡೆ ಹೊರಗೆ ಬರುತ್ತಿಲ್ಲ. ಟಿಕೆಟ್ ಕೊಡಿಸಲು ಇಂಥದ್ದೊಂದು ಟೀಮ್ ರೆಡಿಯಾಗಿದೆ ಅಂದರೆ ಇದನ್ನು ಗಂಭೀರವಾಗಿ ವಿಚಾರ ಮಾಡಬೇಕು. ಮಾಹಿತಿ‌ ಪ್ರಕಾರ ಹಿಂದೂ ಕಾರ್ಯಕರ್ತರೇ ಪ್ರಕರಣದಲ್ಲಿದ್ದಾರೆ. ಕನಕಗಿರಿಯಲ್ಲಿ‌ ಟಿಕೆಟ್ ಡೀಲ್ ವಿಷಯಕ್ಕೆ ‌ದೂರು ದಾಖಲಾಗಿದೆ. ದೂರು ಕೊಡದೆ ಇರುವವರು ಇನ್ನೂ ಸಾಕಷ್ಟು ಜನ ಇರಬಹುದು?” ಎಂದು ಕೇಳಿದರು.

”ಕೆಲವೇ ವ್ಯಕ್ತಿಗಳ ಕೈಯಲ್ಲಿ ಬಿಜೆಪಿ ಇದೆ ಎಂದು ನಾನು ಹೇಳಿದ್ದೆ. ಅದು ಈಗ ಪ್ರೂವ್ ಆಗುತ್ತಿದೆ. ವ್ಯಕ್ತಿಯನ್ನು ನೋಡಿ ಟಿಕೆಟ್ ಕೊಡುವ ಪ್ರಕ್ರಿಯೆ ಮೊದಲು ಇತ್ತು. ನಾನೇ ಎಷ್ಟೋ ಜನರಿಗೆ ಹಠ ಮಾಡಿ ಟಿಕೆಟ್ ಕೊಡಿಸಿದ್ದೇನೆ. ರಾಮದುರ್ಗದಲ್ಲಿ ರಿಯಲ್ ಎಸ್ಟೇಟ್ ವ್ಯಕ್ತಿಗೆ ಟಿಕೆಟ್ ಕೊಡುತ್ತಾರೆ. ಏನೋ ವ್ಯವಹಾರ ನಡೆದಿದೆ ಅನ್ನೋದಂತೂ ಸತ್ಯ” ಎಂದು ಹೇಳಿದರು.

”ಪ್ರಾಥಮಿಕ ಹಂತದಲ್ಲಿ ವ್ಯವಹಾರ ನಡೆದಿರುವ ಬಗ್ಗೆ ಸಾಬೀತಾಗಿದೆ. ಚೈತ್ರಾ ಕುಂದಾಪೂರ ಅಪರಾಧಿ ಸ್ಥಾನದಲ್ಲಿ ‌ನಿಂತಿದ್ದಾರೆ. ಚೈತ್ರಾ ಕುಂದಾಪೂರ ಪ್ರಕರಣ ಹೊರಬರುತ್ತಿದ್ದಂತೆ ಕೆಲವರಿಗೆ ಧೈರ್ಯ ಬಂದಿದೆ” ಎಂದರು.

ಈದ್ಗಾ ಮೈದಾನದ ಹೋರಾಟದಲ್ಲಿ ಜಗದೀಶ್ ಶೆಟ್ಟರ್ ವಿರುದ್ದವೂ ಬಿಜೆಪಿ ಕಾರ್ಯಕರ್ತರು ದಿಕ್ಕಾರ ಕೂಗಿದ ವಿಚಾರವಾಗಿ ಮಾತನಾಡಿದ ಅವರು, ”ಬಿಜೆಪಿಗೆ ನಾನು ಅಂದರೆ ಭಯ. ನಾನು ಪಕ್ಷ ಬಿಟ್ಟು ಹೋದ ಮೇಲೆ ಏನಾಗಿದೆ ಅನ್ನೋದು ಗೊತ್ತಾಗಿದೆ. ಅದನ್ನು ಇನ್ನೂ ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಆಗಿಲ್ಲ” ಎಂದು ಹೇಳಿದರು..

”ಜಗದೀಶ್ ಶೆಟ್ಟರ್ ಅವರನ್ನ ವಿಧಾನಸಭೆ ಚುನಾವಣೆಯಲ್ಲಿ ಟಾರ್ಗೆಟ್ ‌ಮಾಡಿದ್ದೀರಿ. ಇವಾಗಲೂ ಟಾರ್ಗೆಟ್ ‌ಯಾಕೆ? ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನನ್ನ ಭಯ ಆರಂಭವಾಗಿದೆ. ಭಯ ಇರುವ ಕಾರಣಕ್ಕೆ ಪದೇಪದೆ ನನ್ನ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಇದರಿಂದ ಬಿಜೆಪಿಗೆ ನಷ್ಟ ಹೊರತು ಲಾಭ ಅಲ್ಲ. ಪದೇಪದೆ ಶೆಟ್ಟರ್ ಹೆಸರು ಹೇಳಿದರೆ ನೀವು ಉದ್ಧಾರವೂ ಆಗುವುದಿಲ್ಲ” ಎಂದರು.

”ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆ ಮಾಡಿ, ಯಾರು ಬೇಡಾ ಅಂತಾರೆ? ನಾನು‌ ಪ್ರತಿ ವರ್ಷ ಮನೆಯಲ್ಲಿ ಗಣೇಶ ಕೂರಿಸುತ್ತೇನೆ. ಕೆಲವರು ಮನೆಯಲ್ಲಿ ಗಣೇಶ ಕೂರಿಸಲ್ಲ. ತೋರಿಕೆಗೆ ಮಾಡುತ್ತಾರೆ” ಎಂದರು.

”ಮಹಾದಾಯಿ ಬಗ್ಗೆ ಹೋರಾಟ ಮಾಡಿ, ಮೋದಿ ಬಂದು ಒಂಬತ್ತು ವರ್ಷ ಆಯ್ತು. ಹನಿ ನೀರು‌ ಕೊಡಲು ಇಷ್ಟು ವರ್ಷ ಬೇಕಾ? ಮಹದಾಯಿ ನೀರು ಕೊಡಿ… ನಿಮ್ಮ ಜನ್ಮ ಸಾರ್ಥಕ ಆಗತ್ತದೆ. ಅಲ್ಲದೆ, ಪ್ರತಿ ವರ್ಷ ಕಳಸಾ ಬಂಡೂರಿ ಹೆಸರಲ್ಲಿ ವೋಟ್ ತೆಗೆದುಕೊಳ್ಳುವುದಾ? ಮೋದಿ ಅವರಿದ್ದಾಗಲೇ ಕಳಸಾ ಬಂಡೂರಿ‌ ಮುಕ್ತಾಯ ಮಾಡಿ” ಎಂದರು.

ಇದನ್ನೂ ಓದಿ: ಕರ್ನಾಟಕ ಮಾದರಿಯಲ್ಲಿ ತೆಲಂಗಾಣ ಚುನಾವಣೆಗೆ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...