Homeಕರ್ನಾಟಕಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

ಹಣ ಪಡೆದು MLA ಟಿಕೆಟ್ ಕೊಟ್ಟಿರುವ ಬಗ್ಗೆ ಬಿಜೆಪಿ ಉತ್ತರಿಸಬೇಕು: ಜಗದೀಶ್ ಶೆಟ್ಟರ್

- Advertisement -
- Advertisement -

ಹಣ ಪಡೆದು ಬಿಜೆಪಿ ಟಿಕೆಟ್ ಕೊಟ್ಟಿರುವ ಬಗ್ಗೆ ಊಹಾಪೋಹ ಇದೆ. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಐದು ಕೋಟಿ ವಂಚಿಸಿದ ಪ್ರಕರಣದ ಬಗ್ಗೆ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಣ ಪಡೆದ ಬಗ್ಗೆ ಕೆಲವು ಕಡೆ ಸುದ್ದಿ ಹೊರಗೆ ಬರುತ್ತಿವೆ, ಇನ್ನೂ ಕೆಲವೆಡೆ ಹೊರಗೆ ಬರುತ್ತಿಲ್ಲ. ಟಿಕೆಟ್ ಕೊಡಿಸಲು ಇಂಥದ್ದೊಂದು ಟೀಮ್ ರೆಡಿಯಾಗಿದೆ ಅಂದರೆ ಇದನ್ನು ಗಂಭೀರವಾಗಿ ವಿಚಾರ ಮಾಡಬೇಕು. ಮಾಹಿತಿ‌ ಪ್ರಕಾರ ಹಿಂದೂ ಕಾರ್ಯಕರ್ತರೇ ಪ್ರಕರಣದಲ್ಲಿದ್ದಾರೆ. ಕನಕಗಿರಿಯಲ್ಲಿ‌ ಟಿಕೆಟ್ ಡೀಲ್ ವಿಷಯಕ್ಕೆ ‌ದೂರು ದಾಖಲಾಗಿದೆ. ದೂರು ಕೊಡದೆ ಇರುವವರು ಇನ್ನೂ ಸಾಕಷ್ಟು ಜನ ಇರಬಹುದು?” ಎಂದು ಕೇಳಿದರು.

”ಕೆಲವೇ ವ್ಯಕ್ತಿಗಳ ಕೈಯಲ್ಲಿ ಬಿಜೆಪಿ ಇದೆ ಎಂದು ನಾನು ಹೇಳಿದ್ದೆ. ಅದು ಈಗ ಪ್ರೂವ್ ಆಗುತ್ತಿದೆ. ವ್ಯಕ್ತಿಯನ್ನು ನೋಡಿ ಟಿಕೆಟ್ ಕೊಡುವ ಪ್ರಕ್ರಿಯೆ ಮೊದಲು ಇತ್ತು. ನಾನೇ ಎಷ್ಟೋ ಜನರಿಗೆ ಹಠ ಮಾಡಿ ಟಿಕೆಟ್ ಕೊಡಿಸಿದ್ದೇನೆ. ರಾಮದುರ್ಗದಲ್ಲಿ ರಿಯಲ್ ಎಸ್ಟೇಟ್ ವ್ಯಕ್ತಿಗೆ ಟಿಕೆಟ್ ಕೊಡುತ್ತಾರೆ. ಏನೋ ವ್ಯವಹಾರ ನಡೆದಿದೆ ಅನ್ನೋದಂತೂ ಸತ್ಯ” ಎಂದು ಹೇಳಿದರು.

”ಪ್ರಾಥಮಿಕ ಹಂತದಲ್ಲಿ ವ್ಯವಹಾರ ನಡೆದಿರುವ ಬಗ್ಗೆ ಸಾಬೀತಾಗಿದೆ. ಚೈತ್ರಾ ಕುಂದಾಪೂರ ಅಪರಾಧಿ ಸ್ಥಾನದಲ್ಲಿ ‌ನಿಂತಿದ್ದಾರೆ. ಚೈತ್ರಾ ಕುಂದಾಪೂರ ಪ್ರಕರಣ ಹೊರಬರುತ್ತಿದ್ದಂತೆ ಕೆಲವರಿಗೆ ಧೈರ್ಯ ಬಂದಿದೆ” ಎಂದರು.

ಈದ್ಗಾ ಮೈದಾನದ ಹೋರಾಟದಲ್ಲಿ ಜಗದೀಶ್ ಶೆಟ್ಟರ್ ವಿರುದ್ದವೂ ಬಿಜೆಪಿ ಕಾರ್ಯಕರ್ತರು ದಿಕ್ಕಾರ ಕೂಗಿದ ವಿಚಾರವಾಗಿ ಮಾತನಾಡಿದ ಅವರು, ”ಬಿಜೆಪಿಗೆ ನಾನು ಅಂದರೆ ಭಯ. ನಾನು ಪಕ್ಷ ಬಿಟ್ಟು ಹೋದ ಮೇಲೆ ಏನಾಗಿದೆ ಅನ್ನೋದು ಗೊತ್ತಾಗಿದೆ. ಅದನ್ನು ಇನ್ನೂ ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಆಗಿಲ್ಲ” ಎಂದು ಹೇಳಿದರು..

”ಜಗದೀಶ್ ಶೆಟ್ಟರ್ ಅವರನ್ನ ವಿಧಾನಸಭೆ ಚುನಾವಣೆಯಲ್ಲಿ ಟಾರ್ಗೆಟ್ ‌ಮಾಡಿದ್ದೀರಿ. ಇವಾಗಲೂ ಟಾರ್ಗೆಟ್ ‌ಯಾಕೆ? ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನನ್ನ ಭಯ ಆರಂಭವಾಗಿದೆ. ಭಯ ಇರುವ ಕಾರಣಕ್ಕೆ ಪದೇಪದೆ ನನ್ನ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಇದರಿಂದ ಬಿಜೆಪಿಗೆ ನಷ್ಟ ಹೊರತು ಲಾಭ ಅಲ್ಲ. ಪದೇಪದೆ ಶೆಟ್ಟರ್ ಹೆಸರು ಹೇಳಿದರೆ ನೀವು ಉದ್ಧಾರವೂ ಆಗುವುದಿಲ್ಲ” ಎಂದರು.

”ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆ ಮಾಡಿ, ಯಾರು ಬೇಡಾ ಅಂತಾರೆ? ನಾನು‌ ಪ್ರತಿ ವರ್ಷ ಮನೆಯಲ್ಲಿ ಗಣೇಶ ಕೂರಿಸುತ್ತೇನೆ. ಕೆಲವರು ಮನೆಯಲ್ಲಿ ಗಣೇಶ ಕೂರಿಸಲ್ಲ. ತೋರಿಕೆಗೆ ಮಾಡುತ್ತಾರೆ” ಎಂದರು.

”ಮಹಾದಾಯಿ ಬಗ್ಗೆ ಹೋರಾಟ ಮಾಡಿ, ಮೋದಿ ಬಂದು ಒಂಬತ್ತು ವರ್ಷ ಆಯ್ತು. ಹನಿ ನೀರು‌ ಕೊಡಲು ಇಷ್ಟು ವರ್ಷ ಬೇಕಾ? ಮಹದಾಯಿ ನೀರು ಕೊಡಿ… ನಿಮ್ಮ ಜನ್ಮ ಸಾರ್ಥಕ ಆಗತ್ತದೆ. ಅಲ್ಲದೆ, ಪ್ರತಿ ವರ್ಷ ಕಳಸಾ ಬಂಡೂರಿ ಹೆಸರಲ್ಲಿ ವೋಟ್ ತೆಗೆದುಕೊಳ್ಳುವುದಾ? ಮೋದಿ ಅವರಿದ್ದಾಗಲೇ ಕಳಸಾ ಬಂಡೂರಿ‌ ಮುಕ್ತಾಯ ಮಾಡಿ” ಎಂದರು.

ಇದನ್ನೂ ಓದಿ: ಕರ್ನಾಟಕ ಮಾದರಿಯಲ್ಲಿ ತೆಲಂಗಾಣ ಚುನಾವಣೆಗೆ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...