Homeಮುಖಪುಟ20 ತಿಂಗಳಿನಿಂದ ಭಾರತದಲ್ಲಿ ಕುಸಿಯುತ್ತಿರುವ ಬಿಜೆಪಿ ಪ್ರಾಬಲ್ಯ: ಜಾಲತಾಣಗಳಲ್ಲಿ ಭಾರೀ ಚರ್ಚೆ

20 ತಿಂಗಳಿನಿಂದ ಭಾರತದಲ್ಲಿ ಕುಸಿಯುತ್ತಿರುವ ಬಿಜೆಪಿ ಪ್ರಾಬಲ್ಯ: ಜಾಲತಾಣಗಳಲ್ಲಿ ಭಾರೀ ಚರ್ಚೆ

ಭಾರತದ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ 71% ನಿಂದ 40%ಗೆ ಬಿಜೆಪಿ ಕುಸಿದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

- Advertisement -
- Advertisement -

ಕಾಂಗ್ರೆಸ್‌ ಮುಕ್ತ ಭಾರತ, ವಿರೋಧ ಪಕ್ಷ ಮುಕ್ತ ಭಾರತ ಎಂದು ಘೋಷಣೆ ಕೂಗುತ್ತಿದ್ದ ಬಿಜೆಪಿಗೆ ಅದೇ ತಿರುಗುಬಾಣವಾಗಿದೆ. ಲೋಕಸಭೆಯಲ್ಲಿ ಅವರು ಭರ್ಜರಿ ಜಯಗಳಿಸಿದರೂ ಕೂಡ, ಕಳೆದ 20 ತಿಂಗಳಿನಲ್ಲಿ ನಡೆದ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲುಂಡಿದ್ದಾರೆ. ಅವರ ಪ್ರಾಬಲ್ಯ ಕುಸಿಯುತ್ತಿದೆ ಎಂದು ಬಹುತೇಕ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಅಲ್ಲೆಲ್ಲಾ ಕಾಂಗ್ರೆಸ್‌ ಜಯಭೇರಿ ಬಾರಿಸಿ ಅಧಿಕಾರ ಸೂತ್ರ ಹಿಡಿದಿದೆ. ಮಿಝೋರಾಂನಲ್ಲಿ ಸ್ಥಳೀಯ ಪಕ್ಷ ಎಂಎನ್‌ಎಫ್‌ ಅಧಿಕಾರಕ್ಕೇರಿದರೆ ತೆಲಂಗಾನದಲ್ಲಿ ಪ್ರಾದೇಶಿಕ ಪಕ್ಷ ಟಿಆರ್‌ಎಸ್‌ ವಿಜಯಪತಾಕೆ ಹಾರಿಸಿತ್ತು. ಅಲ್ಲಿಗೆ ಬಿಜೆಪಿ ಕಥೆ ಮುಗಿದಿತ್ತು.

ಇನ್ನು ಕಳೆದ ತಿಂಗಳು ನಡೆದ ಹರಿಯಾಣ-ಮಹಾರಾಷ್ಟ್ರ ಚುನಾವಣೆಯಲ್ಲಿಯೂ ಸಹ ಬಿಜೆಪಿ ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಲಿಲ್ಲ. ಹರಿಯಾಣದಲ್ಲಿ ಕಷ್ಟಪಟ್ಟು ಅಧಿಕಾರವಿಡಿದರೆ, ಮಹಾರಾಷ್ಟ್ರದಲ್ಲಿ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯಲು ಹೋಗಿ ಮುಗ್ಗರಿಸಿಬಿದ್ದಿದೆ.

ಇದನ್ನು ಓದಿ: ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಬಹುದೊಡ್ಡ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡ ನಂತರ ಅದರ ಚಿತ್ರವನ್ನು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಭಾರತದ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ 71% ನಿಂದ 40%ಗೆ ಬಿಜೆಪಿ ಕುಸಿದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುವವರಿಗೆ, ಈ ಚಿತ್ರ ಕನ್ನಡಿಯಂತಿದೆ. ಸಾರ್ವಜನಿಕರು ನಿರಂತರವಾಗಿ ಸ್ಪಷ್ಟ ಸಂದೇಶಗಳನ್ನು ನೀಡುತ್ತಿದ್ದಾರೆ. ವಿಭಜಕ ಮತ್ತು ನಕಾರಾತ್ಮಕ ಚಿಂತನೆಯನ್ನು ನಿರಾಕರಿಸುತ್ತಾರೆ. ಈ ದೇಶದಲ್ಲಿ ಅನೇಕ ಸಿದ್ಧಾಂತಗಳಿವೆ, ಹೋರಾಟವು ಸೈದ್ಧಾಂತಿಕವಾಗಿರಬೇಕೆ ಹೊರತು ವೈಯಕ್ತಿಕವಾಗಿರಬಾರದು” ಎಂದು ರಾಜಸ್ಥಾನದ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ ನಮ್ಮ ರಾಷ್ಟ್ರಕ್ಕೆ ಶಾಪವಾಗಿದೆ ಎಂದು ಜನರು ಈಗ ಅರಿತುಕೊಂಡಿದ್ದಾರೆ.

ರಾಷ್ಟ್ರೀಯವಾದಿಗಳಂತೆ ಮುಖವಾಡ ತೊಟ್ಟು ನಮ್ಮನ್ನು ವಿಭಜಿಸುವುದು ಮತ್ತು ದೇಶಭಕ್ತಿಯ ಹೆಸರಿನಲ್ಲಿ ರಾಷ್ಟ್ರವನ್ನು ಲೂಟಿ ಮಾಡುವುದು ಅವರ ಏಕೈಕ ಉದ್ದೇಶವಾಗಿದೆ.

ಈ ಭ್ರಷ್ಟ ಫ್ಯಾಸಿಸ್ಟ್‌ಗಳಿಂದ ಭಾರತವನ್ನು ರಕ್ಷಿಸಿಕೊಳ್ಳುವುದಕ್ಕೆ ಇದು ಸರಿಯಾದ ಸಮಯ ಎಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನ ಬರೆದಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್‌ನಲ್ಲಿ ಬಿಜೆಪಿ ಮುಕ್ತ ಭಾರತ ಕೂಡ ಟ್ರೆಂಡಿಂಗ್‌ ಆಗಿದೆ.

ಮುಂದಿನ ತಿಂಗಳು ಜಾರ್ಖಂಡ್‌ನಲ್ಲಿ ಚುನಾವಣೆ ನಡೆಯಲಿದ್ದು ಅಲ್ಲಿಯೂ ಬಿಜೆಪಿಗೆ ಕಷ್ಟಕರವಾಗಲಿದೆ. ಹಾಗೆಯೇ ಕರ್ನಾಟಕದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು ಅಲ್ಲಿಯು ಬಿಜೆಪಿ 08ಕ್ಕಿಂತ ಕಡಿಮೆ ಸ್ಥಾನ ಗೆದ್ದಲ್ಲಿ ಅದು ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...